ವಾಲ್ಮೀಕಿ ನಿಗಮದ ಹಣದಲ್ಲಿ ಐಷಾರಾಮಿ ಫ್ಲ್ಯಾಟ್‌ ಖರೀದಿ, 10 ಕೆಜಿ ಚಿನ್ನದ ಬಿಸ್ಕೆಟ್​ ಜಪ್ತಿ ಮಾಡಿದ ಎಸ್​ಐಟಿ

ಮಹರ್ಷಿ ವಾಲ್ಮೀಕಿ ಹಗರಣದ ಆರೋಪಿ ಸತ್ಯನಾರಾಯಣ ವರ್ಮಾ ಅವರು ಅಕ್ರಮದ ಹಣದಲ್ಲಿ ಮಾಡಿಸಿದ್ದ 10 ಕೆಜಿ ಚಿನ್ನದ ಗಟ್ಟಿ, ಹೈದರಾಬಾದ್‌ ಐಷಾರಾಮಿ ಫ್ಲಾಟ್​ನಲ್ಲಿ ಬಚ್ಚಿಟ್ಟಿದ್ದ 8 ಕೋಟಿ ಹಣವನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಇನ್ನು ಸತ್ಯನಾರಾಯಣ ವರ್ಮಾ ತನಿಖೆಯಲ್ಲಿ ಮತ್ತಷ್ಟು ವಿಚಾರಗಳು ಬಯಲಾಗಿವೆ.

ವಾಲ್ಮೀಕಿ ನಿಗಮದ ಹಣದಲ್ಲಿ ಐಷಾರಾಮಿ ಫ್ಲ್ಯಾಟ್‌ ಖರೀದಿ, 10 ಕೆಜಿ ಚಿನ್ನದ ಬಿಸ್ಕೆಟ್​ ಜಪ್ತಿ ಮಾಡಿದ ಎಸ್​ಐಟಿ
ಚಿನ್ನ
Follow us
| Updated By: ಆಯೇಷಾ ಬಾನು

Updated on:Jul 27, 2024 | 10:37 AM

ಬೆಂಗಳೂರು, ಜುಲೈ.27: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ (Valmiki Corporation Scam) ನಡೆದಿರುವ ಬಹುಕೋಟಿ ರೂ. ಹಗರಣಕ್ಕೆ ಸಂಬಂಧಿಸಿ ಸಿಐಡಿ (CID), ಎಸ್​ಐಟಿ (SIT) ತಂಡದಿಂದ ತನಿಖೆ ಚುರುಕುಗೊಂಡಿದೆ. ಈ ಹಗರಣದ ಪ್ರಧಾನ ಆರೋಪಿ ಸತ್ಯನಾರಾಯಣ ವರ್ಮಾನ ಮನೆಯಲ್ಲಿ ಚಿನ್ನದ ಬಾಸ್ಕೆಟ್ ಪತ್ತೆಯಾಗಿದೆ. ಬರೋಬ್ಬರಿ 10 ಕೆ.ಜಿ‌.ಚಿನ್ನದ ಬಿಸ್ಕೆಟ್​ಗಳನ್ನು ಎಸ್ಐಟಿ ತಂಡ ವಶಕ್ಕೆ ಪಡೆದಿದೆ ಎಂದು ಎಸ್​ಐಟಿ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಆರೋಪಿ ಸತ್ಯನಾರಾಯಣ್ ವರ್ಮಾ ವಾಲ್ಮೀಕಿ ಹಗರಣದ ಹಣದಲ್ಲೇ ಚಿನ್ನ ಖರೀದಿಸಿದ್ದ. ಎಸ್ಐಟಿ ತಂಡ ತೀವ್ರ ವಿಚಾರಣೆಗೆ ಒಳಪಡಿಸಿದ್ದ ವೇಳೆ 15 ಕೆ.ಜಿ.ಗೋಲ್ಡ್ ಕೊಡುವುದಾಗಿ ಹೇಳಿದ್ದ. ಅದರಂತೆ ತನ್ನ ಹೈದರಾಬಾದ್ ಪ್ಲಾಟ್ ನಲ್ಲಿ 10 ಕೆ.ಜಿ.ಚಿನ್ನದ ಗಟ್ಟಿ ಇಟ್ಟಿರುವುದನ್ನು ತೋರಿಸಿದ್ದಾನೆ. ಉಳಿದ ಚಿನ್ನದ ಬಿಸ್ಕೆಟ್ ಗಾಗಿ ಎಸ್​ಐಟಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಆರೋಪಿ ವರ್ಮಾ ಇದುವರೆಗೂ ವಾಲ್ಮೀಕಿ ಹಗರಣದ ಹಣದಿಂದ ಬರೋಬ್ಬರಿ 35 ಕೆ.ಜಿ.ಚಿನ್ನದ ಬಿಸ್ಕೆಟ್ ಖರೀದಿ ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಗರಣಕ್ಕೆ ಹವಾಲಾ ಲಿಂಕ್! ಎಸ್​ಐಟಿ ತನಿಖೆಯಲ್ಲಿ ಬಯಲು

ಹೈದರಾಬಾದ್​ನಲ್ಲಿ ಎಸ್​ಐಟಿ ತಂಡ ಸತ್ಯನಾರಾಯಣ್ ವರ್ಮ ಹಿಡಿದಿದ್ದೇ ರೋಚಕ

ಇನ್ನು ಎಸ್​ಐಟಿ ತಂಡ ಒಂದು ವಾರ ಸತತ ಹುಡುಕಾಟ ನಡೆಸಿದರೂ ಎಲ್ಲಿಯೂ ಸತ್ಯನಾರಾಯಣ್ ವರ್ಮಾ ಪತ್ತೆಯಾಗಿರಲಿಲ್ಲ. ಬಳಿಕ ಆತನ ಆಪ್ತ ವಲಯದಲ್ಲಿದ್ದವರನ್ನು ಲಾಕ್ ಮಾಡಿ ಮಾಸ್ಟರ್ ಪ್ಲಾನ್ ಮಾಡಿ ಅರೆಸ್ಟ್ ಮಾಡಿಲಾಯಿತು. ಸತ್ಯನಾರಾಯಣ್ ವರ್ಮಾನನ್ನು ಬಂಧಿಸುವ ವೇಳೆಗೆ ಎಲ್ಲಾ ಹಣ, ಚಿನ್ನ ಬೇರೆ ಬೇರೆ ಕಡೆ ಅಡಗಿಸಲಾಗಿತ್ತು.

ಬೆಂಗಳೂರಿಗೆ ಕರೆತಂದು ವರ್ಮಾನ ವಿಚಾರಣೆ ನಡೆಸಿದಾಗ ಹಣ ಹಾಗೂ ಪ್ಲಾಟ್ ಖರೀದಿ ಬಗ್ಗೆ ಬಾಯ್ಬಿಟ್ಟಿದ್ದ. ನಂತರ ಎಸ್​ಐಟಿ ತಂಡ ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದು ಹೈದರಾಬಾದ್​ನಲ್ಲಿರುವ ವರ್ಮಾನ ಫ್ಲಾಟ್ ಶೋಧ ಕಾರ್ಯ ನಡೆಸಿದ್ದಾರೆ. ಹೈದರಾಬಾದ್ ಸೀಮಾ ಪೇಟೆ, ಮೀಯಾ ಪುರದಲ್ಲಿ ವಾಸವಿ ಬಿಲ್ಡರ್ಸ್​ನಲ್ಲಿ ತಲಾ ಎರಡು ಫ್ಲಾಟ್ ಸೇರಿ ಒಟ್ಟು 11 ಫ್ಲಾಟ್ ಖರೀದಿಸಿರುವ ಬಗ್ಗೆ ಎಸ್​ಐಟಿಗೆ ಮಾಹಿತಿ ಸಿಕ್ಕಿದೆ. ಹೈದರಾಬಾದ್ ಫ್ಲಾಟ್​ನಲ್ಲಿ 8 ಕೋಟಿ ಹಣ ಅಡಗಿಸಿಟ್ಟಿದ್ದು ಬ್ಯಾಗ್ ನಲ್ಲಿ 8 ಕೋಟಿ ಹಣ ಸಿಕ್ಕಿದೆ. ಹಣ ಎಣಿಕೆ ಮಿಷನ್ ತರಿಸಿ ಹಣ ಎಣಿಕೆ ಮಾಡಿ ಜಪ್ತಿ ಮಾಡಲಾಗಿದೆ.

ಇನ್ನು ಈ ಪ್ರಕರಣದಲ್ಲಿ ಈವರೆಗೆ 12 ಆರೋಪಗಳನ್ನು ಎಸ್​ಐಟಿ ಬಂಧಿಸಿದೆ. ಇದರಲ್ಲಿ 9 ಆರೋಪಿಗಳನ್ನ ಜೈಲಿಗೆ ಕಳುಹಿಸಲಾಗಿದ್ದು ಮೂವರು ಪೊಲೀಸರ ಕಸ್ಟಡಿಯಲ್ಲಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:32 am, Sat, 27 July 24

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!