AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ನಿಗಮದ ಹಣದಲ್ಲಿ ಐಷಾರಾಮಿ ಫ್ಲ್ಯಾಟ್‌ ಖರೀದಿ, 10 ಕೆಜಿ ಚಿನ್ನದ ಬಿಸ್ಕೆಟ್​ ಜಪ್ತಿ ಮಾಡಿದ ಎಸ್​ಐಟಿ

ಮಹರ್ಷಿ ವಾಲ್ಮೀಕಿ ಹಗರಣದ ಆರೋಪಿ ಸತ್ಯನಾರಾಯಣ ವರ್ಮಾ ಅವರು ಅಕ್ರಮದ ಹಣದಲ್ಲಿ ಮಾಡಿಸಿದ್ದ 10 ಕೆಜಿ ಚಿನ್ನದ ಗಟ್ಟಿ, ಹೈದರಾಬಾದ್‌ ಐಷಾರಾಮಿ ಫ್ಲಾಟ್​ನಲ್ಲಿ ಬಚ್ಚಿಟ್ಟಿದ್ದ 8 ಕೋಟಿ ಹಣವನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಇನ್ನು ಸತ್ಯನಾರಾಯಣ ವರ್ಮಾ ತನಿಖೆಯಲ್ಲಿ ಮತ್ತಷ್ಟು ವಿಚಾರಗಳು ಬಯಲಾಗಿವೆ.

ವಾಲ್ಮೀಕಿ ನಿಗಮದ ಹಣದಲ್ಲಿ ಐಷಾರಾಮಿ ಫ್ಲ್ಯಾಟ್‌ ಖರೀದಿ, 10 ಕೆಜಿ ಚಿನ್ನದ ಬಿಸ್ಕೆಟ್​ ಜಪ್ತಿ ಮಾಡಿದ ಎಸ್​ಐಟಿ
ಚಿನ್ನ
Shivaprasad B
| Edited By: |

Updated on:Jul 27, 2024 | 10:37 AM

Share

ಬೆಂಗಳೂರು, ಜುಲೈ.27: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ (Valmiki Corporation Scam) ನಡೆದಿರುವ ಬಹುಕೋಟಿ ರೂ. ಹಗರಣಕ್ಕೆ ಸಂಬಂಧಿಸಿ ಸಿಐಡಿ (CID), ಎಸ್​ಐಟಿ (SIT) ತಂಡದಿಂದ ತನಿಖೆ ಚುರುಕುಗೊಂಡಿದೆ. ಈ ಹಗರಣದ ಪ್ರಧಾನ ಆರೋಪಿ ಸತ್ಯನಾರಾಯಣ ವರ್ಮಾನ ಮನೆಯಲ್ಲಿ ಚಿನ್ನದ ಬಾಸ್ಕೆಟ್ ಪತ್ತೆಯಾಗಿದೆ. ಬರೋಬ್ಬರಿ 10 ಕೆ.ಜಿ‌.ಚಿನ್ನದ ಬಿಸ್ಕೆಟ್​ಗಳನ್ನು ಎಸ್ಐಟಿ ತಂಡ ವಶಕ್ಕೆ ಪಡೆದಿದೆ ಎಂದು ಎಸ್​ಐಟಿ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಆರೋಪಿ ಸತ್ಯನಾರಾಯಣ್ ವರ್ಮಾ ವಾಲ್ಮೀಕಿ ಹಗರಣದ ಹಣದಲ್ಲೇ ಚಿನ್ನ ಖರೀದಿಸಿದ್ದ. ಎಸ್ಐಟಿ ತಂಡ ತೀವ್ರ ವಿಚಾರಣೆಗೆ ಒಳಪಡಿಸಿದ್ದ ವೇಳೆ 15 ಕೆ.ಜಿ.ಗೋಲ್ಡ್ ಕೊಡುವುದಾಗಿ ಹೇಳಿದ್ದ. ಅದರಂತೆ ತನ್ನ ಹೈದರಾಬಾದ್ ಪ್ಲಾಟ್ ನಲ್ಲಿ 10 ಕೆ.ಜಿ.ಚಿನ್ನದ ಗಟ್ಟಿ ಇಟ್ಟಿರುವುದನ್ನು ತೋರಿಸಿದ್ದಾನೆ. ಉಳಿದ ಚಿನ್ನದ ಬಿಸ್ಕೆಟ್ ಗಾಗಿ ಎಸ್​ಐಟಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಆರೋಪಿ ವರ್ಮಾ ಇದುವರೆಗೂ ವಾಲ್ಮೀಕಿ ಹಗರಣದ ಹಣದಿಂದ ಬರೋಬ್ಬರಿ 35 ಕೆ.ಜಿ.ಚಿನ್ನದ ಬಿಸ್ಕೆಟ್ ಖರೀದಿ ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಗರಣಕ್ಕೆ ಹವಾಲಾ ಲಿಂಕ್! ಎಸ್​ಐಟಿ ತನಿಖೆಯಲ್ಲಿ ಬಯಲು

ಹೈದರಾಬಾದ್​ನಲ್ಲಿ ಎಸ್​ಐಟಿ ತಂಡ ಸತ್ಯನಾರಾಯಣ್ ವರ್ಮ ಹಿಡಿದಿದ್ದೇ ರೋಚಕ

ಇನ್ನು ಎಸ್​ಐಟಿ ತಂಡ ಒಂದು ವಾರ ಸತತ ಹುಡುಕಾಟ ನಡೆಸಿದರೂ ಎಲ್ಲಿಯೂ ಸತ್ಯನಾರಾಯಣ್ ವರ್ಮಾ ಪತ್ತೆಯಾಗಿರಲಿಲ್ಲ. ಬಳಿಕ ಆತನ ಆಪ್ತ ವಲಯದಲ್ಲಿದ್ದವರನ್ನು ಲಾಕ್ ಮಾಡಿ ಮಾಸ್ಟರ್ ಪ್ಲಾನ್ ಮಾಡಿ ಅರೆಸ್ಟ್ ಮಾಡಿಲಾಯಿತು. ಸತ್ಯನಾರಾಯಣ್ ವರ್ಮಾನನ್ನು ಬಂಧಿಸುವ ವೇಳೆಗೆ ಎಲ್ಲಾ ಹಣ, ಚಿನ್ನ ಬೇರೆ ಬೇರೆ ಕಡೆ ಅಡಗಿಸಲಾಗಿತ್ತು.

ಬೆಂಗಳೂರಿಗೆ ಕರೆತಂದು ವರ್ಮಾನ ವಿಚಾರಣೆ ನಡೆಸಿದಾಗ ಹಣ ಹಾಗೂ ಪ್ಲಾಟ್ ಖರೀದಿ ಬಗ್ಗೆ ಬಾಯ್ಬಿಟ್ಟಿದ್ದ. ನಂತರ ಎಸ್​ಐಟಿ ತಂಡ ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದು ಹೈದರಾಬಾದ್​ನಲ್ಲಿರುವ ವರ್ಮಾನ ಫ್ಲಾಟ್ ಶೋಧ ಕಾರ್ಯ ನಡೆಸಿದ್ದಾರೆ. ಹೈದರಾಬಾದ್ ಸೀಮಾ ಪೇಟೆ, ಮೀಯಾ ಪುರದಲ್ಲಿ ವಾಸವಿ ಬಿಲ್ಡರ್ಸ್​ನಲ್ಲಿ ತಲಾ ಎರಡು ಫ್ಲಾಟ್ ಸೇರಿ ಒಟ್ಟು 11 ಫ್ಲಾಟ್ ಖರೀದಿಸಿರುವ ಬಗ್ಗೆ ಎಸ್​ಐಟಿಗೆ ಮಾಹಿತಿ ಸಿಕ್ಕಿದೆ. ಹೈದರಾಬಾದ್ ಫ್ಲಾಟ್​ನಲ್ಲಿ 8 ಕೋಟಿ ಹಣ ಅಡಗಿಸಿಟ್ಟಿದ್ದು ಬ್ಯಾಗ್ ನಲ್ಲಿ 8 ಕೋಟಿ ಹಣ ಸಿಕ್ಕಿದೆ. ಹಣ ಎಣಿಕೆ ಮಿಷನ್ ತರಿಸಿ ಹಣ ಎಣಿಕೆ ಮಾಡಿ ಜಪ್ತಿ ಮಾಡಲಾಗಿದೆ.

ಇನ್ನು ಈ ಪ್ರಕರಣದಲ್ಲಿ ಈವರೆಗೆ 12 ಆರೋಪಗಳನ್ನು ಎಸ್​ಐಟಿ ಬಂಧಿಸಿದೆ. ಇದರಲ್ಲಿ 9 ಆರೋಪಿಗಳನ್ನ ಜೈಲಿಗೆ ಕಳುಹಿಸಲಾಗಿದ್ದು ಮೂವರು ಪೊಲೀಸರ ಕಸ್ಟಡಿಯಲ್ಲಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:32 am, Sat, 27 July 24

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?