AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹಕಾರ ಇಲಾಖೆಯ ನಿವೇಶನ ಹಂಚಿಕೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ, ಕೆಆರ್ ಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು

ಸಂಘದ ಅಧ್ಯಕ್ಷ ರಾಮಶಾಮಯ್ಯ ಕೇವಲ 2.88 ಲಕ್ಷ ರೂಪಾಯಿಗೆ ಪಾರ್ವತಮ್ಮಗೆ ಮಾರಾಟ ಮಾಡಿದ್ದರು. ವಿದ್ಯಾಪೀಠದ ನಿವೇಶನ ಸಂಖ್ಯೆ 38 ಹಾಗೂ ಮಲ್ಲತಳ್ಳಿಯ ನಿವೇಶನ ಹಂಚಿಕೆಯಲ್ಲೂ ಹೀಗೆಯೇ ಗೋಲ್ ಮಾಲ್ ನಡೆದಿದೆ.

ಸಹಕಾರ ಇಲಾಖೆಯ ನಿವೇಶನ ಹಂಚಿಕೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ, ಕೆಆರ್ ಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್  ದಾಖಲು
ಸಹಕಾರ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ
ಸಾಧು ಶ್ರೀನಾಥ್​
|

Updated on:Jun 16, 2023 | 8:24 AM

Share

ಬೆಂಗಳೂರು: ರಾಜ್ಯ ಸಹಕಾರ ಇಲಾಖೆಯಲ್ಲಿ (Cooperative Department) ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ತತ್ಸಂಬಂಧ, ಸಹಕಾರ ಇಲಾಖೆಯ ಸಹಾಯಕ ನಿಭಂದಕ ಗಂಗಾಧರ್ ದೂರಿನ ಮೇರೆಗೆ ಕೆಆರ್ ಪುರಂ ಪೊಲೀಸ್ ಠಾಣೆಯಲ್ಲಿ (KR Puram Police Station) ಎಫ್ಐಆರ್ ದಾಖಲಾಗಿದೆ. ಐಟಿಐ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ನಿವೇಶನ ಹಂಚಿಕೆಯಲ್ಲಿ ಈ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. 2021-2022 ನೇ ಸಾಲಿನಲ್ಲಿ ನಿರ್ಮಿಸಲಾಗಿದ್ದ ನಿವೇಶನಗಳ ಹಂಚಿಕೆ ಸಂಬಂಧ (Site allotment scam) ಸಂಘದ ಅಧ್ಯಕ್ಷರಾದ ಜಿ ಎಸ್ ರಾಮಶಾಮಯ್ಯ ಹಾಗೂ ಕಾರ್ಯದರ್ಶಿ ಶಿವಾನಂದ ಸೇರಿ 13 ಮಂದಿ ವಿರುದ್ದ ಎಫ್ ಐ ಆರ್ (FIR) ದಾಖಲಾಗಿದೆ.

ಎಳ್ಳುಕುಂಟೆ ಬಡಾವಣೆಯಲ್ಲಿ ನಿರ್ಮಾಣವಾಗಿದ್ದ ನಿವೇಶನ ಸಂಖ್ಯೆ 895, 896, 897, 898, 899, 900, 901, 902, 905, 907, 908, 910, 912, 913, 914 ನಿವೇಶನಗಳನ್ನ ಅತೀ ಕಡಿಮೆ ಬೆಲೆಗೆ ಮಾರಾಟ ಮಾಡಿರುವ ಆರೋಪ ಎದುರಾಗಿದೆ. ತನ್ಮೂಲಕ ಅತೀ ಕಡಿಮೆ ಬೆಲೆಗೆ ಮಾರಾಟ ಮಾಡಿ ಸಂಘಕ್ಕೆ ಆರ್ಥಿಕ ನಷ್ಟವನ್ನುಂಟುಮಾಡಲಾಗಿದೆ. ಜೊತೆಗೆ ನಾಯಂಡಳ್ಳಿ ಬಡಾವಣೆಯ ನಿವೇಶನ ಸಂಖ್ಯೆ 695 ನ್ನ ಸಂಘದ ಸದಸ್ಯರಲ್ಲದ ಪಾರ್ವತಮ್ಮ ಎಂಬುವವರಿಗೆ ಮಾರಾಟ ಮಾಡಿರುವ ಗುರುತರ ಆರೋಪವೂ ಎದುರಾಗಿದೆ.

ಇದನ್ನೂ ಓದಿ:  ಭೀಮಾ ತೀರದಲ್ಲಿ ಅಕ್ರಮ ಮರಳು ಸಾಗಾಟ ತಡೆಯಲು ಹೋದ ಹೆಡ್​​ಕಾನ್​ಸ್ಟೇಬಲ್​ ಭಯಾನಕ ಹತ್ಯೆ

ಸಂಘದ ಅಧ್ಯಕ್ಷ ರಾಮಶಾಮಯ್ಯ ಕೇವಲ 2.88 ಲಕ್ಷ ರೂಪಾಯಿಗೆ ಪಾರ್ವತಮ್ಮಗೆ ಮಾರಾಟ ಮಾಡಿದ್ದರು. ವಿದ್ಯಾಪೀಠದ ನಿವೇಶನ ಸಂಖ್ಯೆ 38 ಹಾಗೂ ಮಲ್ಲತಳ್ಳಿಯ ನಿವೇಶನ ಹಂಚಿಕೆಯಲ್ಲೂ ಹೀಗೆಯೇ ಗೋಲ್ ಮಾಲ್ ನಡೆದಿದೆ. ಒಟ್ಟಾರೆ ಕೋಟ್ಯಂತರ ರೂಪಾಯಿ ಮೌಲ್ಯದ ನಿವೇಶನಗಳನ್ನ ಅತೀ ಕಡಿಮೆ ಬೆಲೆಗೆ ಮಾರಾಟ ಮಾಡಿರುವ ಸಂಬಂಧ ಪೊಲೀಸ್ ದೂರು ನೀಡಲಾಗಿದೆ. ಇದರಿಂದಾಗಿ ಸಂಘಕ್ಕೆ ಕೋಟ್ಯಂತರ ರೂಪಾಯಿ ನಷ್ಟ ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಒಟ್ಟು 13 ಮಂದಿ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ತನಿಖೆ ನಡೆಸುವಂತೆ ದೂರು ನೀಡಲಾಗಿದೆ. ಕೆ ಆರ್ ಪುರಂ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:24 am, Fri, 16 June 23

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ