AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ನಿವೇಶನ ಮಾರಾಟ ನೆಪದಲ್ಲಿ ಮತ್ತೊಂದು ವಂಚನೆ ಪ್ರಕರಣ: ಪ್ರತಿಭಟನೆ, ರಾಜಾಜಿನಗರ ಪೊಲೀಸರಿಗೆ ದೂರು

Brindavan Property Pvt Ltd: ಕ್ಯಾಬ್ ಚಾಲಕರು, ಪ್ಲಂಬರ್, ಹೋಟೆಲ್ ಸಪ್ಲೈಯರ್ ಮುಂತಾದವರು ಬೃಂದಾವನ ಪ್ರಾಪರ್ಟಿಸ್ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದ್ದರು. ತಾವರೆಕರೆ, ಹೆಸರಘಟ್ಟ, ನೆಲಮಂಗಲ ಭಾಗಗಳಲ್ಲಿ ನಿವೇಶನ ತೋರಿಸಿ, ದಿನೇಶ್ ಗೌಡ ಸಂಸ್ಥೆ ವಂಚನೆ ಎಸಗಿದೆ.

ರಾಜಧಾನಿಯಲ್ಲಿ ನಿವೇಶನ ಮಾರಾಟ ನೆಪದಲ್ಲಿ ಮತ್ತೊಂದು ವಂಚನೆ ಪ್ರಕರಣ: ಪ್ರತಿಭಟನೆ, ರಾಜಾಜಿನಗರ ಪೊಲೀಸರಿಗೆ ದೂರು
ಬೃಂದಾವನ ಪ್ರಾಪರ್ಟಿಸ್ ಕಂಪನಿ ಹೆಸರಿನಲ್ಲಿ ಕಳೆದ ಐದು ವರ್ಷಗಳಿಂದ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ದಿನೇಶ್ ಗೌಡ
TV9 Web
| Edited By: ಸಾಧು ಶ್ರೀನಾಥ್​|

Updated on:Jul 29, 2021 | 4:16 PM

Share

ಬೆಂಗಳೂರು: ರಾಜಧಾನಿಯಲ್ಲಿ ನಿವೇಶನ ಮಾರಾಟ ನೆಪದಲ್ಲಿ ವಂಚನೆ ಎಸಗಿರುವ ಮತ್ತೊಂದು ಪ್ರಕರಣ ವರದಿಯಾಗಿದೆ. ರಾಜಾಜಿನಗರದ ಮೂರನೆ ಹಂತದ ಬೃಂದಾವನ ಪ್ರಾಪರ್ಟಿಸ್ ಸಂಸ್ಥೆಯಿಂದ ನೂರಾರು ಜನರಿಗೆ ವಂಚನೆ ನಡೆದಿದೆ ಎಂದು ವರದಿಯಾಗಿದೆ. ಐದಾರು ಲಕ್ಷ ರೂಪಾಯಿಗೆ ನಗರದ ಹೊರವಲಯದಲ್ಲಿ ಸೈಟ್ ನೀಡುವುದಾಗಿ ಸಂಸ್ಥೆಯು ಹಣ ಹೂಡಿಕೆ ಮಾಡಿಸಿಕೊಳ್ಳುತ್ತಿತ್ತು.

ದಿನೇಶ್ ಗೌಡ ಎಂಬಾತ ಬೃಂದಾವನ ಪ್ರಾಪರ್ಟಿಸ್ ಕಂಪನಿ ಹೆಸರಿನಲ್ಲಿ ಕಳೆದ ಐದು ವರ್ಷಗಳಿಂದ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಎಂದು ತಿಳಿದುಬಂದಿದೆ. ಇದೀಗ ವಂಚನೆ ಆರೋಪ ಬೆಳಕಿಗೆ ಬರುತ್ತಿದ್ದಂತೆ ಬೃಂದಾವನ ಪ್ರಾಪರ್ಟಿ ಕಚೇರಿ ಕ್ಲೋಸ್ ಮಾಡಿ ಎಸ್ಕೇಪ್ ಆಗಿದ್ದಾನೆ. ಹಣ ಹೂಡಿಕೆ ಮಾಡಿರುವ ಸಾರ್ವಜನಿಕರು ಕಂಪನಿಯ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕ್ಯಾಬ್ ಚಾಲಕರು, ಪ್ಲಂಬರ್, ಹೋಟೆಲ್ ಸಪ್ಲೈಯರ್ ಮುಂತಾದವರು ಬೃಂದಾವನ ಪ್ರಾಪರ್ಟಿಸ್ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದ್ದರು. ತಾವರೆಕರೆ, ಹೆಸರಘಟ್ಟ, ನೆಲಮಂಗಲ ಭಾಗಗಳಲ್ಲಿ ನಿವೇಶನ ತೋರಿಸಿ, ದಿನೇಶ್ ಗೌಡ ಸಂಸ್ಥೆ ವಂಚನೆ ಎಸಗಿದೆ. ಸ್ಥಳಕ್ಕೆ ರಾಜಾಜಿನಗರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ವಂಚನೆ ಬಗ್ಗೆ ದೂರು ನೀಡುವಂತೆ ಪೊಲೀಸರು ಹೂಡಿಕೆದಾರರಿಗೆ ಸೂಚಿಸಿದ್ದಾರೆ.

sites sale Brindavan Property Pvt Ltd company cheats investors in rajajinagar bangalore

ರಾಜಧಾನಿಯಲ್ಲಿ ನಿವೇಶನ ಮಾರಾಟ ನೆಪದಲ್ಲಿ ಮತ್ತೊಂದು ವಂಚನೆ ಪ್ರಕರಣ: ಪ್ರತಿಭಟನೆ, ರಾಜಾಜಿಗರ ಪೊಲೀಸರಿಗೆ ದೂರು

ಅಬ್ಬಬ್ಬಾ ತರಹೇವಾರಿ ವಂಚನೆಗಳು.. ಹಾಸನದಲ್ಲಿ ಬೇಬಿ ಟ್ಯಾಂಕರ್ ಮಾಫಿಯಾ! ಸೂತ್ರಧಾರ ಕಾನ್ಸ್​ಟೇಬಲ್​ ಸೇರಿ ಐವರ ವಿರುದ್ಧ ಕೇಸ್ (sites sale Brindavan Property Pvt Ltd company cheats investors in rajajinagar bangalore)

Published On - 4:15 pm, Thu, 29 July 21

Follow Us
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ