AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್ಚೆತ್ತ ಬೆಂಗಳೂರು ಪೊಲೀಸರು: ರಾಜಧಾನಿಯಲ್ಲಿ ಅಕ್ರಮವಾಗಿ ನೆಲೆಸಿರುವ 678 ವಿದೇಶಿಗರು; 27 ಮಂದಿಯ ಗಡಿಪಾರು ಪ್ರಕ್ರಿಯೆ ಶುರು

ನಗರದಲ್ಲಿ 678 ಮಂದಿ ವಿದೇಶಿ ಪ್ರಜೆಗಳು ಅಕ್ರಮವಾಗಿ ವಾಸವಾಗಿರುವುದು ಬೆಳಕಿಗೆ ಬಂದಿದೆ. ಸದ್ಯ 27 ಮಂದಿಯನ್ನು ಗಡಿಪಾರು ಮಾಡುವ ಪ್ರಕ್ರಿಯೆ ಶುರುವಾಗಿದೆ. ಬಹುತೇಕ ವಿದೇಶಿ ಪ್ರಜೆಗಳು ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಕೆಲವರು ಸೈಬರ್ ಕ್ರೈಂ, ಮಾದಕ ವಸ್ತು ಮಾರಾಟ, ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ.

ಎಚ್ಚೆತ್ತ ಬೆಂಗಳೂರು ಪೊಲೀಸರು: ರಾಜಧಾನಿಯಲ್ಲಿ ಅಕ್ರಮವಾಗಿ ನೆಲೆಸಿರುವ 678 ವಿದೇಶಿಗರು;  27 ಮಂದಿಯ ಗಡಿಪಾರು ಪ್ರಕ್ರಿಯೆ  ಶುರು
ಪೊಲೀಸರು ಮತ್ತು ಆಫ್ರಿಕಾ ಪ್ರಜೆಗಳ ನಡುವೆ ವಾಗ್ವಾದ
TV9 Web
| Edited By: ಆಯೇಷಾ ಬಾನು|

Updated on: Aug 04, 2021 | 8:34 AM

Share

ಬೆಂಗಳೂರು: ಡ್ರಗ್ಸ್ ಆರೋಪಿಯಾಗಿದ್ದ ಆಫ್ರಿಕನ್ ಪ್ರಜೆ ಸಾವಿನ ನಂತರ ಜೆಸಿ.ನಗರ ಪೊಲೀಸ್ ಠಾಣೆ ಎದುರು ಕೋಲಾಹಲ ಸೃಷ್ಟಿಯಾಗಿತ್ತು. ಸ್ನೇಹಿತನ ಸಾವಿನಿಂದ ರೊಚ್ಚಿಗೆದಿದ್ದ ಆಫ್ರಿಕನ್ನರು, ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ರು. ಆದ್ರೆ, ದಾಂದಲೆ ನಡೆಸುತ್ತಿದ್ದವ್ರಿಗೆ ಪೊಲೀಸ್ರು ಬೆಂಡೆತ್ತಿದ್ದಾರೆ. ಇದೆಲ್ಲವಾಗುತ್ತಿದ್ದಂತೆ ಎಚ್ಚೆತ್ತ ಖಾಕಿ ಪಡೆ ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಯೂರಿರುವ 678 ವಿದೇಶಿಗರನ್ನು ಪತ್ತೆ ಮಾಡಿದ್ದಾರೆ.

ನಗರದಲ್ಲಿ 678 ಮಂದಿ ವಿದೇಶಿ ಪ್ರಜೆಗಳು ಅಕ್ರಮವಾಗಿ ವಾಸವಾಗಿರುವುದು ಬೆಳಕಿಗೆ ಬಂದಿದೆ. ಸದ್ಯ 27 ಮಂದಿಯನ್ನು ಗಡಿಪಾರು ಮಾಡುವ ಪ್ರಕ್ರಿಯೆ ಶುರುವಾಗಿದೆ. ಬಹುತೇಕ ವಿದೇಶಿ ಪ್ರಜೆಗಳು ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಕೆಲವರು ಸೈಬರ್ ಕ್ರೈಂ, ಮಾದಕ ವಸ್ತು ಮಾರಾಟ, ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ಹಾಗೂ ಬೆಂಗಳೂರಿನಲ್ಲಿ ಅಂದಾಜು 7-8 ಸಾವಿರಕ್ಕೂ ಹೆಚ್ಚು ಮಂದಿ ವಿದೇಶಿ ಪ್ರಜೆಗಳಿದ್ದಾರೆ. ಈ ಪೈಕಿ ನೈಜಿರಿಯಾ, ಕಾಂಗೋ ದೇಶದ ಪ್ರಜೆಗಳೇ ಅಧಿಕ. ಬೆಂಗಳೂರಿನಲ್ಲಿ ನೆಲೆಸಿರುವ 678 ಮಂದಿಗೆ ಯಾವುದೇ ವೀಸಾ, ಪಾಸ್‌ಪೋರ್ಟ್ ಇಲ್ಲ. ಇವರೆಲ್ಲಾ ಇಲ್ಲಿ ಅಕ್ರಮವಾಗಿ ನೆಲೆಸಿ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗುತ್ತಿದ್ದಾರೆ.

ನಗರದಲ್ಲಿ ಮೇ ತಿಂಗಳಲ್ಲಿ 705 ಮಂದಿ ಅಕ್ರಮವಾಗಿ ನೆಲೆಸಿರೋದು ಗೊತ್ತಾಗಿತ್ತು. ಮೇ, ಜೂನ್‌ನಲ್ಲಿ ಪೊಲೀಸರು ಅಕ್ರಮವಾಗಿ ನೆಲೆಸಿರುವವರ ವಿರುದ್ಧ ಕಾರ್ಯಾಚರಣೆ ನಡೆಸಿದ್ದರು. ಆ ವೇಳೆ 27 ಮಂದಿ ಅಕ್ರಮವಾಗಿ ವಾಸವಾಗಿರುವ ಮಾಹಿತಿ ಸಿಕ್ಕತ್ತು. ಅವರನ್ನ ಗಡಿಪಾರು ಮಾಡುವ ಪ್ರಕ್ರಿಯೆ ಚಾಲನೆಯಲ್ಲಿದೆ. ಜೂನ್ ಅಂತ್ಯಕ್ಕೆ ನಗರದಲ್ಲಿ 63 ಮಂದಿ ವಿದೇಶಿ ಪ್ರಜೆಗಳ ವಿರುದ್ಧ ಅಪರಾಧ ಪ್ರಕರಣಗಳು ದಾಖಲಾಗಿವೆ. ಇದುವರೆಗೂ 678 ಮಂದಿ ಅಕ್ರಮವಾಗಿ ನೆಲೆಸಿರೋದು ಗೊತ್ತಾಗಿದೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ವಿದೇಶಿಗರು ಅಕ್ರಮವಾಗಿ ನೆಲೆಸಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು ಪೊಲೀಸರ ಕಾರ್ಯಾಚರಣೆ ಮುಂದುವರೆದಿದೆ.

ಇದನ್ನೂ ಓದಿ: ಪೊಲೀಸರ ವಶದಲ್ಲಿದ್ದ ಆಫ್ರಿಕನ್ ಪ್ರಜೆ ಸಾವು ಪ್ರಕರಣ ಸಿಐಡಿ ತನಿಖೆಗೆ ವರ್ಗಾವಣೆ

Follow Us
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ