AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus: ಲಂಡನ್, ದುಬೈನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 6 ಜನರಿಗೆ ಕೊರೊನಾ ಸೋಂಕು

ಲಂಡನ್ ಮತ್ತು ದುಬೈನಿಂದ ಇಂದು ಬೆಳಗ್ಗೆ ಕೆಐಎಬಿಗೆ ಬಂದ ಪ್ರಯಾಣಿಕರ ಪೈಕಿ 7 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಲಂಡನ್ ನಿಂದ ಬಂದ ಓರ್ವ ಮತ್ತು ದುಬೈನಿಂದ ಬಂದ ಐವರಿಗೆ ಸೋ‌ಂಕು ದೃಢಪಟ್ಟಿದೆ.

Coronavirus: ಲಂಡನ್, ದುಬೈನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 6 ಜನರಿಗೆ ಕೊರೊನಾ ಸೋಂಕು
ಪ್ರಾತಿನಿಧಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Dec 17, 2021 | 11:45 AM

Share

ದೇವನಹಳ್ಳಿ: ದಿನದಿಂದ ದಿನಕ್ಕೆ ವಿದೇಶದಿಂದ ಬರುತ್ತಿರುವವರಲ್ಲಿ ಕೊರೊನಾ ಸೋಂಕು(Coronavirus) ಹೆಚ್ಚಾಗಿ ಪತ್ತೆಯಾಗುತ್ತಿದೆ. ರಾಜ್ಯದಲ್ಲಿ ಡಿಸೆಂಬರ್ 16ರಂದು 5 ಜನರಿಲ್ಲಿ ಒಮಿಕ್ರಾನ್ ಸೋಂಕು(Omicron) ಪತ್ತೆಯಾಗಿತ್ತು. ಇದರ ನಡುವೆ ಇಂದು ಲಂಡನ್, ದುಬೈನಿಂದ ಬಂದ 6 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. KIABಯಲ್ಲಿ ಕೊವಿಡ್ ಟೆಸ್ಟ್ ವೇಳೆ 6 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಲಂಡನ್ ಮತ್ತು ದುಬೈನಿಂದ ಇಂದು ಬೆಳಗ್ಗೆ ಕೆಐಎಬಿಗೆ ಬಂದ ಪ್ರಯಾಣಿಕರ ಪೈಕಿ 7 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಲಂಡನ್ ನಿಂದ ಬಂದ ಓರ್ವ ಮತ್ತು ದುಬೈನಿಂದ ಬಂದ ಐವರಿಗೆ ಸೋ‌ಂಕು ದೃಢಪಟ್ಟಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರ್ಟಿಪಿಸಿಆರ್ ಟೆಸ್ಟಿಂಗ್ ಮಾಡಿದ ವೇಳೆ ಸೋ‌ಂಕು ದೃಢಪಟ್ಟಿದೆ. ಸದ್ಯ ಸೋಂಕಿತರಿಗೆ ಬೋರಿಂಗ್ ಆಸ್ಪತ್ರೆಯಲ್ಲಿ ಐಸೋಲೇಷನ್ ಮಾಡಲಾಗಿದೆ. ಸೋಂಕಿತರ ಸ್ಯಾಂಪಲ್ ಪಡೆದು ಜಿನೋಟಿಕ್ ಸೀಕ್ವೆನ್ಸ್ಗೆ ಕಳಿಸಲಾಗಿದೆ.

ಬೆಂಗಳೂರಿನಲ್ಲಿ ಒಮಿಕ್ರಾನ್ ಪತ್ತೆ ಆದರ್ಶ ಫಾರ್ಮ್ ರೀಟ್ರೀಟ್​ನಲ್ಲಿ ತಾಯಿ ಮತ್ತು ಮಗನಿಗೆ ಒಮಿಕ್ರಾನ್ ಸೋಂಕು ದೃಢವಾಗಿದೆ. ಬೆಂಗಳೂರಿನ ಮಹದೇವಪುರದ ಬೆಳ್ಳಂದೂರು ವಾರ್ಡ್ ವ್ಯಾಪ್ತಿಯ ರೀಟ್ರೀಟ್ ವಿಲ್ಲಾದಲ್ಲಿ 70 ವರ್ಷದ ತಾಯಿ ಮತ್ತು 36 ವರ್ಷದ ಮಗನಿಗೆ ಒಮಿಕ್ರಾನ್ (Omicron) ದೃಢಪಟ್ಟಿದೆ. ದೆಹಲಿಯಲ್ಲಿ ನಡೆದ ಮದುವೆಗೆ ತಾಯಿ ಹಾಗೂ ಮಗ ತೆರಳಿದ್ದರು. ನಂತರ ಡಿಸೆಂಬರ್ 3ರಂದು ದೆಹಲಿಯಿಂದ ಬೆಂಗಳೂರಿಗೆ ಹಿಂದಿರುಗಿದ್ದರು. ಅಂತರಾಷ್ಟ್ರೀಯ ಪ್ರಯಾಣಿಕರಲ್ಲದ ಕಾರಣ ಕ್ವಾರಂಟೈನ್ ಆಗದೆ ನೇರವಾಗಿ ಮನೆಗೆ ಬಂದಿದ್ದರು. ಆದರೆ ದೆಹಲಿಯಲ್ಲಿ ಒಮಿಕ್ರಾನ್ ದೃಢಪಟ್ಟ ಸೋಂಕಿತನ ಪ್ರಾಥಮಿಕ ಸಂಪರ್ಕಿತರು ಎಂದು ಪರೀಕ್ಷೆ ಮಾಡಿದಾಗ ತಾಯಿ ಹಾಗೂ ಮಗನಿಗೂ ಸೋಂಕು ದೃಢವಾಗಿದೆ.

ವಿಷಯ ತಿಳಿಯುತ್ತಿದ್ದಂತೆ ದೇವರಬಿಸನಹಳ್ಳಿಯ ವಿಲ್ಲಾಗೆ ಆರೋಗ್ಯ ಅಧಿಕಾರಿಗಳು ಆಗಮಿಸಿದ್ದಾರೆ. ಒಮಿಕ್ರಾನ್ ಸೋಂಕಿತರ ಸಂಪರ್ಕಕ್ಕೆ ಬಂದವರಿಗೆ ಕೊವಿಡ್ ಟೆಸ್ಟ್​ ಮಾಡುತ್ತಿದ್ದು, ಅಧಿಕಾರಿಗಳು ಸಾಮೂಹಿಕವಾಗಿ ಆರೋಗ್ಯ ತಪಾಸಣೆ ಮಾಡುತ್ತಿದ್ದಾರೆ. ಈ ವೇಳೆ ಇದೇ ಅಪಾರ್ಟ್​ಮೆಂಟ್​ನ ಕೆಲವರಿಗೆ ಕೊರೊನಾ ಸೋಂಕು ದೃಢವಾಗಿರುವುದು ಪತ್ತೆಯಾಗಿದೆ.

ಇದನ್ನೂ ಓದಿ: ರೇಪ್ ಆಸ್ವಾದಿಸಿ ಎಂಬ ಹೇಳಿಕೆಗೆ ಕ್ಷಮೆಯಾಚಿಸಿದ ಮಾಜಿ ಸ್ಪೀಕರ್ ಕೆಆರ್​ ರಮೇಶ್​ ಕುಮಾರ್, ಸದನದಲ್ಲಿ ಹೇಳಿದ್ದೇನು?

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು