AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus: ಲಂಡನ್, ದುಬೈನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 6 ಜನರಿಗೆ ಕೊರೊನಾ ಸೋಂಕು

ಲಂಡನ್ ಮತ್ತು ದುಬೈನಿಂದ ಇಂದು ಬೆಳಗ್ಗೆ ಕೆಐಎಬಿಗೆ ಬಂದ ಪ್ರಯಾಣಿಕರ ಪೈಕಿ 7 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಲಂಡನ್ ನಿಂದ ಬಂದ ಓರ್ವ ಮತ್ತು ದುಬೈನಿಂದ ಬಂದ ಐವರಿಗೆ ಸೋ‌ಂಕು ದೃಢಪಟ್ಟಿದೆ.

Coronavirus: ಲಂಡನ್, ದುಬೈನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 6 ಜನರಿಗೆ ಕೊರೊನಾ ಸೋಂಕು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 17, 2021 | 11:45 AM

Share

ದೇವನಹಳ್ಳಿ: ದಿನದಿಂದ ದಿನಕ್ಕೆ ವಿದೇಶದಿಂದ ಬರುತ್ತಿರುವವರಲ್ಲಿ ಕೊರೊನಾ ಸೋಂಕು(Coronavirus) ಹೆಚ್ಚಾಗಿ ಪತ್ತೆಯಾಗುತ್ತಿದೆ. ರಾಜ್ಯದಲ್ಲಿ ಡಿಸೆಂಬರ್ 16ರಂದು 5 ಜನರಿಲ್ಲಿ ಒಮಿಕ್ರಾನ್ ಸೋಂಕು(Omicron) ಪತ್ತೆಯಾಗಿತ್ತು. ಇದರ ನಡುವೆ ಇಂದು ಲಂಡನ್, ದುಬೈನಿಂದ ಬಂದ 6 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. KIABಯಲ್ಲಿ ಕೊವಿಡ್ ಟೆಸ್ಟ್ ವೇಳೆ 6 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಲಂಡನ್ ಮತ್ತು ದುಬೈನಿಂದ ಇಂದು ಬೆಳಗ್ಗೆ ಕೆಐಎಬಿಗೆ ಬಂದ ಪ್ರಯಾಣಿಕರ ಪೈಕಿ 7 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಲಂಡನ್ ನಿಂದ ಬಂದ ಓರ್ವ ಮತ್ತು ದುಬೈನಿಂದ ಬಂದ ಐವರಿಗೆ ಸೋ‌ಂಕು ದೃಢಪಟ್ಟಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರ್ಟಿಪಿಸಿಆರ್ ಟೆಸ್ಟಿಂಗ್ ಮಾಡಿದ ವೇಳೆ ಸೋ‌ಂಕು ದೃಢಪಟ್ಟಿದೆ. ಸದ್ಯ ಸೋಂಕಿತರಿಗೆ ಬೋರಿಂಗ್ ಆಸ್ಪತ್ರೆಯಲ್ಲಿ ಐಸೋಲೇಷನ್ ಮಾಡಲಾಗಿದೆ. ಸೋಂಕಿತರ ಸ್ಯಾಂಪಲ್ ಪಡೆದು ಜಿನೋಟಿಕ್ ಸೀಕ್ವೆನ್ಸ್ಗೆ ಕಳಿಸಲಾಗಿದೆ.

ಬೆಂಗಳೂರಿನಲ್ಲಿ ಒಮಿಕ್ರಾನ್ ಪತ್ತೆ ಆದರ್ಶ ಫಾರ್ಮ್ ರೀಟ್ರೀಟ್​ನಲ್ಲಿ ತಾಯಿ ಮತ್ತು ಮಗನಿಗೆ ಒಮಿಕ್ರಾನ್ ಸೋಂಕು ದೃಢವಾಗಿದೆ. ಬೆಂಗಳೂರಿನ ಮಹದೇವಪುರದ ಬೆಳ್ಳಂದೂರು ವಾರ್ಡ್ ವ್ಯಾಪ್ತಿಯ ರೀಟ್ರೀಟ್ ವಿಲ್ಲಾದಲ್ಲಿ 70 ವರ್ಷದ ತಾಯಿ ಮತ್ತು 36 ವರ್ಷದ ಮಗನಿಗೆ ಒಮಿಕ್ರಾನ್ (Omicron) ದೃಢಪಟ್ಟಿದೆ. ದೆಹಲಿಯಲ್ಲಿ ನಡೆದ ಮದುವೆಗೆ ತಾಯಿ ಹಾಗೂ ಮಗ ತೆರಳಿದ್ದರು. ನಂತರ ಡಿಸೆಂಬರ್ 3ರಂದು ದೆಹಲಿಯಿಂದ ಬೆಂಗಳೂರಿಗೆ ಹಿಂದಿರುಗಿದ್ದರು. ಅಂತರಾಷ್ಟ್ರೀಯ ಪ್ರಯಾಣಿಕರಲ್ಲದ ಕಾರಣ ಕ್ವಾರಂಟೈನ್ ಆಗದೆ ನೇರವಾಗಿ ಮನೆಗೆ ಬಂದಿದ್ದರು. ಆದರೆ ದೆಹಲಿಯಲ್ಲಿ ಒಮಿಕ್ರಾನ್ ದೃಢಪಟ್ಟ ಸೋಂಕಿತನ ಪ್ರಾಥಮಿಕ ಸಂಪರ್ಕಿತರು ಎಂದು ಪರೀಕ್ಷೆ ಮಾಡಿದಾಗ ತಾಯಿ ಹಾಗೂ ಮಗನಿಗೂ ಸೋಂಕು ದೃಢವಾಗಿದೆ.

ವಿಷಯ ತಿಳಿಯುತ್ತಿದ್ದಂತೆ ದೇವರಬಿಸನಹಳ್ಳಿಯ ವಿಲ್ಲಾಗೆ ಆರೋಗ್ಯ ಅಧಿಕಾರಿಗಳು ಆಗಮಿಸಿದ್ದಾರೆ. ಒಮಿಕ್ರಾನ್ ಸೋಂಕಿತರ ಸಂಪರ್ಕಕ್ಕೆ ಬಂದವರಿಗೆ ಕೊವಿಡ್ ಟೆಸ್ಟ್​ ಮಾಡುತ್ತಿದ್ದು, ಅಧಿಕಾರಿಗಳು ಸಾಮೂಹಿಕವಾಗಿ ಆರೋಗ್ಯ ತಪಾಸಣೆ ಮಾಡುತ್ತಿದ್ದಾರೆ. ಈ ವೇಳೆ ಇದೇ ಅಪಾರ್ಟ್​ಮೆಂಟ್​ನ ಕೆಲವರಿಗೆ ಕೊರೊನಾ ಸೋಂಕು ದೃಢವಾಗಿರುವುದು ಪತ್ತೆಯಾಗಿದೆ.

ಇದನ್ನೂ ಓದಿ: ರೇಪ್ ಆಸ್ವಾದಿಸಿ ಎಂಬ ಹೇಳಿಕೆಗೆ ಕ್ಷಮೆಯಾಚಿಸಿದ ಮಾಜಿ ಸ್ಪೀಕರ್ ಕೆಆರ್​ ರಮೇಶ್​ ಕುಮಾರ್, ಸದನದಲ್ಲಿ ಹೇಳಿದ್ದೇನು?

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!