AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಟ: ಬೆಂಗಳೂರಿನಲ್ಲಿ ವಿದ್ಯಾರ್ಥಿಗಳು ವಾಸವಿರುವ 5 ಹಾಸ್ಟೆಲ್, 1 ಕಾಲೇಜು ಸೀಲ್ ಡೌನ್

ಕೇರಳದಿಂದ ಬೆಂಗಳೂರಿಗೆ ಬರುವ ಜನರಲ್ಲಿ ಹೆಚ್ಚಾಗಿ ಕೊರೊನಾ ಪತ್ತೆಯಾಗುತ್ತಿದೆ. ಹೀಗಾಗಿ ಕೇರಳದ ಆತಂಕ ಮನೆ ಮಾಡಿದೆ. ಸದ್ಯ ಈಗ ಹೊರಮಾವು ಬಳಿಯ ನರ್ಸಿಂಗ್ ಕಾಲೇಜಿನ 16 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೊರೊನಾ ಕಾಟ: ಬೆಂಗಳೂರಿನಲ್ಲಿ ವಿದ್ಯಾರ್ಥಿಗಳು ವಾಸವಿರುವ 5 ಹಾಸ್ಟೆಲ್, 1 ಕಾಲೇಜು ಸೀಲ್ ಡೌನ್
ಪ್ರಾತಿನಿಧಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Sep 02, 2021 | 11:27 AM

Share

ಬೆಂಗಳೂರು: ದೇಶದಲ್ಲಿ ಮಹಾಮಾರಿ ಕೊರೊನಾ ಮೂರನೇ ಅಲೆ ಭೀತಿ ಎದುರಾಗಿದ್ದು ಈಗಾಗಲೇ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದೆ. ಬೆಂಗಳೂರಿನ ಹೊರಮಾವು ಬಳಿಯ ನರ್ಸಿಂಗ್ ಕಾಲೇಜಿನ 16 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು ಬೆಂಗಳೂರಿನ 5 ಹಾಸ್ಟೆಲ್, ಒಂದು ಕಾಲೇಜು ಸೀಲ್‌ಡೌನ್ ಮಾಡಲಾಗಿದೆ.

ಕೇರಳದಿಂದ ಬೆಂಗಳೂರಿಗೆ ಬರುವ ಜನರಲ್ಲಿ ಹೆಚ್ಚಾಗಿ ಕೊರೊನಾ ಪತ್ತೆಯಾಗುತ್ತಿದೆ. ಹೀಗಾಗಿ ಕೇರಳದ ಆತಂಕ ಮನೆ ಮಾಡಿದೆ. ಸದ್ಯ ಈಗ ಹೊರಮಾವು ಬಳಿಯ ನರ್ಸಿಂಗ್ ಕಾಲೇಜಿನ 16 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ ವಿದ್ಯಾರ್ಥಿಗಳು ವಾಸವಾಗಿರುವ ಐದು ಹಾಸ್ಟೆಲ್ಗಳು, ಒಂದು ಕಾಲೇಜು ಸೀಲ್ ಡೌನ್ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಕೊರೊನಾ ಪತ್ತೆಯಾದರೆ ವಿದ್ಯಾರ್ಥಿ ಇದ್ದ ಕಾಲೇಜು ಒಂದು ವಾರ ಕಂಟೇನ್ಮೆಂಟ್ ಜೋನ್ ಆಗಲಿದೆ. ಹೀಗಾಗಿ ಸೋಂಕಿತರ ಬಗ್ಗೆ ಮಾಹಿತಿ ನೀಡದೆ ಗೌಪ್ಯತೆ ಕಾಪಾಡಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಇನ್ನು ಬೆಂಗಳೂರಿನಲ್ಲಿ ಸ್ಕೂಲ್ ಮಕ್ಕಳಿಗೂ ಸೋಂಕು ತಗುಲಿರುವುದು ಪತ್ತೆಯಾಗಿದೆ. ಆದ್ರೆ ಖಾಸಗಿ ಶಾಲೆಗಳು ಸೋಂಕು ಕಾಣಿಸಿಕೊಂಡ ಮಕ್ಕಳ ಮಾಹಿತಿ ಗೌಪ್ಯವಾಗಿ ಇಡುತ್ತಿದ್ದಾರೆ ಎನ್ನಲಾಗಿದೆ. ಸೋಂಕು ಕಾಣಿಸಿಕೊಳ್ಳುವ ಶಾಲೆಯನ್ನ ಒಂದು ವಾರ ಕಂಟೈನ್ಮೆಂಟ್ ಮಾಡಬೇಕು. ಹೀಗಾಗಿ ಸೋಂಕಿತ ಮಕ್ಕಳ‌ ಮಾಹಿತಿಯನ್ನ ಗೌಪ್ಯವಾಗಿ ಇಡಲಾಗ್ತಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ನಕಲಿ ವೀಸಾ ತಯಾರಿಸುತ್ತಿದ್ದ ಕೇರಳ ಮೂಲದ ಆರೋಪಿ ಸೆರೆ

(Sixteen nursing students tested positive for coronavirus and 5 hostels 1 college seal down in bengaluru)

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ