AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ಮುಷ್ಕರ ವೇಳೆ ವಜಾ ಆಗಿದ್ದ 62 ಬಿಎಂಟಿಸಿ ನೌಕರರ ಮರುನೇಮಕ; ಆದೇಶ ಪ್ರತಿ ವಿತರಣೆ

ವಜಾ ಆಗಿದ್ದ 62 ಬಿಎಂಟಿಸಿ ನೌಕರರಿಗೆ ಬೆಂಗಳೂರಿನ ಶಾಂತಿನಗರದ ಕಚೇರಿಯಲ್ಲಿ ಮರುನೇಮಕ ಆದೇಶ ಪ್ರತಿ ನೀಡಲಾಗಿದೆ. ಆದೇಶ ಪ್ರತಿ ವಿತರಣೆ ಕಾರ್ಯಕ್ರಮದಲ್ಲಿ ಬಿಎಂಟಿಸಿ ಎಂಡಿ ಅನ್ಬುಕ್ ಕುಮಾರ್, ಉಪಾಧ್ಯಕ್ಷ ವೆಂಕಟೇಶ್, ಭದ್ರತೆ ಮತ್ತು ಜಾಗೃತಿ ವಿಭಾಗದ ನಿರ್ದೇಶಕಿ ರಾಧಿಕ ಉಪಸ್ಥಿತರಿದ್ದರು.

ಸಾರಿಗೆ ಮುಷ್ಕರ ವೇಳೆ ವಜಾ ಆಗಿದ್ದ 62 ಬಿಎಂಟಿಸಿ ನೌಕರರ ಮರುನೇಮಕ; ಆದೇಶ ಪ್ರತಿ ವಿತರಣೆ
ಬಿಎಂಟಿಸಿ ( ಸಾಂದರ್ಭಿಕ ಚಿತ್ರ)
TV9 Web
| Updated By: ಆಯೇಷಾ ಬಾನು|

Updated on: Apr 11, 2022 | 2:31 PM

Share

ಬೆಂಗಳೂರು: ಸಾರಿಗೆ ಮುಷ್ಕರ ವೇಳೆ ವಜಾ ಆಗಿದ್ದ ನೌಕರರನ್ನು ಮರುನೇಮಕ ಮಾಡಿಕೊಳ್ಳುವ ಆದೇಶ ಪ್ರತಿ ವಿತರಣೆ ಮಾಡಲಾಗಿದೆ. ವಜಾ ಆಗಿದ್ದ 62 ಬಿಎಂಟಿಸಿ ನೌಕರರಿಗೆ ಬೆಂಗಳೂರಿನ ಶಾಂತಿನಗರದ ಕಚೇರಿಯಲ್ಲಿ ಮರುನೇಮಕ ಆದೇಶ ಪ್ರತಿ ನೀಡಲಾಗಿದೆ. ಆದೇಶ ಪ್ರತಿ ವಿತರಣೆ ಕಾರ್ಯಕ್ರಮದಲ್ಲಿ ಬಿಎಂಟಿಸಿ ಎಂಡಿ ಅನ್ಬುಕ್ ಕುಮಾರ್, ಉಪಾಧ್ಯಕ್ಷ ವೆಂಕಟೇಶ್, ಭದ್ರತೆ ಮತ್ತು ಜಾಗೃತಿ ವಿಭಾಗದ ನಿರ್ದೇಶಕಿ ರಾಧಿಕ ಉಪಸ್ಥಿತರಿದ್ದರು. ಕಾರ್ಯಕ್ರಮ ಉದ್ಘಾಟನೆಗೆ ಬರಬೇಕಿದ್ದ ಸಾರಿಗೆ ಸಚಿವ ಶ್ರೀರಾಮುಲು ಗೈರಾಗಿದ್ದಾರೆ.

ವಜಾ ಮಾಡಿದ್ದವರ ಮರುನೇಮಕ ಪ್ರತಿಭಟನೆ ವೇಳೆ ಭಾಗಿಯಾಗಿದ್ದ ನೌಕರರನ್ನು ನೌಕರಿಯಿಂದ ವಜಾ ಮಾಡಲಾಗಿತ್ತು. ಇದೀಗ ಅವರನ್ನೆಲ್ಲ ಮರು ನೇಮಕ ಮಾಡಿಕೊಳ್ಳಲಾಗುತ್ತಿದೆ. ಮೊದಲ ಬಾರಿಗೆ 100 ನೌಕರರು, ಬಳಿಕ 200 ನೌಕರರ ಮರು ನೇಮಕಾತಿ ಮಾಡಿಕೊಳ್ಳಲಾಗಿದೆ. ಮುಷ್ಕರದಲ್ಲಿ 1,610 ಜನ ಭಾಗಿಯಾಗಿ ತೊಂದರೆಗೀಡಾಗಿದ್ದರು. ಮರು ನೇಮಕ ಮಾಡಿಕೊಳ್ಳಲು ಕಾನೂನಿನಲ್ಲಿ ಅವಕಾಶ ಇಲ್ಲ. ನಿಮ್ಮ ಕುಟುಂಬವನ್ನು ನೋಡಿ ಮರು ನೇಮಕ ಮಾಡುತ್ತಿದ್ದೇವೆ. ನಿಮ್ಮ ಜೊತೆ ಮುಷ್ಕರ ಮಾಡಿದವರು ಈಗ ಓಡಿ ಹೋದರು. ಆದರೆ, ಇಂದು‌ ನಿಮ್ಮ ಜೊತೆಗೆ ನಿಂತಿದ್ದು ನಮ್ಮ ಸರ್ಕಾರ. ಸರ್ಕಾರದ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಈ ಹಿಂದೆ ಮರು ನೇಮಕಾತಿ ಪ್ರಕಿಯೆ ವೇಳೆ ಸಾರಿಗೆ ಖಾತೆ ಸಚಿವ ಬಿ.ಶ್ರೀರಾಮುಲು ಬುದ್ದಿವಾದ ಹೇಳಿದ್ದರು.

ಸಿಎಂ ಅಣತಿಯಂತೆ ನೌಕರರ ಮರುನೇಮಕ ಮಾಡಿಕೊಳ್ತಿದ್ದೇವೆ. ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಅವಕಾಶ ಕೊಡಲಾಗಿದೆ. ಮತ್ತೆ ಆ ರೀತಿಯ ತಪ್ಪು ಮಾಡಲು ಹೋಗಬೇಡಿ. ಮತ್ತೆ ಮುಷ್ಕರ ಅಂದ್ರೆ ನಾವ್ಯಾರೂ ಜೊತೆಯಲ್ಲಿ ಇರೋದಿಲ್ಲ. ಮುಂದಿನ ತಿಂಗಳಿಂದ ಸರಿಯಾಗಿ ಸಂಬಳ ನೀಡುತ್ತೇವೆ. ಹಂತ ಹಂತವಾಗಿ ಎಲ್ಲಾ ಸಮಸ್ಯೆ ಬಗೆಹರಿಸುತ್ತೇವೆ. ಸಾಕಷ್ಟು ಬಾರಿ ಈ ಬಗ್ಗೆ ನಾನು ಎಂಡಿಗಳನ್ನು ಕರೆದು ಮಾತಾಡಿದ್ದೆ. ಮುಷ್ಕರ ಪ್ರಾರಂಭ ಆಗೋದು ಸುಲಭ, ಆದರೆ ಪ್ರಾರಂಭದ ನಂತರ ಅದನ್ನು ನಿಲ್ಲಿಸಲು ಆಗಲ್ಲ ಎಂದಿದ್ದರು.

ಇದನ್ನೂ ಓದಿ: ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ ಬೆಂಗಳೂರು ನಗರ ವಿವಿ ​

ಹಿಂದೂ-ಮುಸ್ಲಿಮರು ಒಂದೇ ತಾಯಿಯ ಮಕ್ಕಳಂತೆ ಬಾಳಬೇಕು ಎಂಬುದು ನಮ್ಮ ಅಪೇಕ್ಷೆ- ಮಾಜಿ ಸಿಎಂ ಯಡಿಯೂರಪ್ಪ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ