AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯೋಗ ಸಂಬಂಧ ವಿವಾದಿತ ಜಾಹೀರಾತು: ಕನ್ನಡಿಗರ ಕ್ಷಮೆ ಕೇಳಿದ ಬೆಂಗಳೂರಿನ ಖಾಸಗಿ ಕಂಪನಿ

ಜೆ.ಪಿ. ನಗರದ 'ಸ್ಕಿಲ್ಸ್ ಸೋನಿಕ್ಸ್' ಕಂಪನಿ ಉದ್ಯೋಗ ಪ್ರಕಟಣೆಯಲ್ಲಿ ಕನ್ನಡ ಗೊತ್ತಿಲ್ಲದವರಿಗೆ ಆದ್ಯತೆ ಎಂದು ನಮೂದಿಸಿರೋದು ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಕನ್ನಡಿಗರ ಭಾರಿ ವಿರೋಧದ ಬಳಿಕ ಕಂಪನಿಯೀಗ ಕ್ಷಮೆಯಾಚಿಸಿದೆ. ಈ ಘಟನೆಯು ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ. ಆದರೆ, ಉದ್ಯಮಿ ಕಿರಣ್ ಮಜುಂದಾರ್ ಶಾ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಉದ್ಯೋಗ ಸಂಬಂಧ ವಿವಾದಿತ ಜಾಹೀರಾತು: ಕನ್ನಡಿಗರ ಕ್ಷಮೆ ಕೇಳಿದ ಬೆಂಗಳೂರಿನ ಖಾಸಗಿ ಕಂಪನಿ
ಸಾಂದರ್ಭಿಕ ಚಿತ್ರ
ಪ್ರಸನ್ನ ಹೆಗಡೆ
|

Updated on:Jan 12, 2026 | 1:57 PM

Share

ಬೆಂಗಳೂರು, ಜನವರಿ 12: ಜೆ.ಪಿ. ನಗರದಲ್ಲಿರುವ ‘ಸ್ಕಿಲ್ಸ್ ಸೋನಿಕ್ಸ್’ ಎನ್ನುವ ಖಾಸಗಿ ಕಂಪನಿ ಹೊರಡಿಸಿದ್ದ ಉದ್ಯೋಗಾವಕಾಶ ಪ್ರಕಟಣೆಯಲ್ಲಿ ಕನ್ನಡ ಗೊತ್ತಿಲ್ಲದ ಅಭ್ಯರ್ಥಿಗಳಿಗೆ ಆದ್ಯತೆ ಎಂಬ ಸಾಲು ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಕಂಪನಿಯವರ ಮನಸ್ಥಿತಿಗೆ ಎಕ್ಸ್​​ನಲ್ಲಿ ಭಾರಿ ವಿರೋಧಗಳು ವ್ಯಕ್ತವಾಗಿದ್ದವು. ಖಾಸಗಿ ಕಂಪನಿಗಳಿಗೆ ಬದುಕೋಕೆ ಕನ್ನಡ ನೆಲ ಬೇಕು, ಆದ್ರೆ ಉದ್ಯೋಗ ಮಾಡಲು ಕನ್ನಡಿಗರು ಬೇಡವಾ? ಎಂಬ ಪ್ರಶ್ನೆಗಳು ಉದ್ಭವಿಸಿದ್ದವು. ಈ ಬೆನ್ನಲ್ಲೇ ಖಾಸಗಿ ಕಂಪನಿ ಕನ್ನಡಿಗರ ಕ್ಷಮೆ ಕೇಳಿದೆ.

ಖಾಸಗಿ ಕಂಪನಿಯಿಂದ ಸ್ಪಷ್ಟನೆ

ಕನ್ನಡ ಬರದವರು ಕೆಲಸಕ್ಕೆ ಬೇಕು ಎಂಬ ಪೋಸ್ಟ್​​ ಬಗ್ಗೆ ‘ಸ್ಕಿಲ್ಸ್ ಸೋನಿಕ್ಸ್’ ಕಂಪನಿ ಇದೀಗ ಸ್ಪಷ್ಟನೆ ನೀಡಿದೆ. ಕೊಲ್ಕತ್ತಾ ಬ್ರಾಂಚ್ ಕಡೆಯಿಂದ ಈ ಪೋಸ್ಟ್ ಹಾಕಲಾಗಿದೆ. ಅದರಿಂದ​​ ಕನ್ನಡಿಗರಿಗೆ ನೋವಾಗಿರುವುದಕ್ಕೆ ಕ್ಷಮೆಯಾಚಿಸುತ್ತೇವೆ ಎಂದು ತಿಳಿಸಿದೆ. ಜೊತೆಗೆ ಮುಂದಿನ ದಿನಗಳಲ್ಲಿ ಈ ರೀತಿ ಪ್ರಮಾದಗಳು ನಡೆಯದಂತೆ ನೋಡಿಕೊಳ್ತೇವೆ ಎಂಬ ಭರವಸೆಯನ್ನೂ ಕನ್ನಡಿಗರಿಗೆ ಕೊಟ್ಟಿದೆ.

ಇದನ್ನೂ ಓದಿ: ಕೆಲಸಕ್ಕೆ ಬೇಕು, ಆದ್ರೆ ಕನ್ನಡಿಗರು ಬೇಡ್ವಂತೆ; ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ

ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ವಿರೋಧ

ಈ ನಡುವೆ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಚಾರ ರಾಜ್ಯದಲ್ಲಿ ಮತ್ತೆ ಮುನ್ನೆಲೆಗೆ ಬಂದಿದ್ದು, ಆಂಧ್ರದ ಮಾದರಿ ಕನ್ನಡಿಗರಿಗೆ ಮೀಸಲಾತಿ ಜಾರಿ ಮಾಡಲು ಆಗ್ರಹ ಕೇಳಿಬಂದಿದೆ. ಆದ್ರೆ ಇದಕ್ಕೆ ಖ್ಯಾತ ಉದ್ಯಮಿ‌ ಕಿರಣ್ ಮಜುಂದಾರ್ ಶಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ.  ಈ ರೀತಿ ನಿಯಮಕ್ಕೆ ನಾನು ಒಪ್ಪುವುದಿಲ್ಲ. ಯಾರಿಗೆ ಪ್ರತಿಭೆ ಇದೆಯೋ ಅಂಥವರಿಗೆ ಅವಕಾಶ ಸಿಗುತ್ತದೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.  ಈ ಹಿಂದೆಯೂ ಇದೇ ಅಭಿಪ್ರಾಯವನ್ನು ಉದ್ಯಮಿ‌ ಕಿರಣ್ ಮಜುಂದಾರ್ ಶಾ ವ್ಯಕ್ತಪಡಿಸಿದ್ದರು ಅನ್ನೋದಿಲ್ಲಿ ಗಮನಾರ್ಹ. ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿಗೆ ದೊಡ್ಡ ಮಟ್ಟದ ಆಗ್ರಹ ವ್ಯಕ್ತವಾಗ್ತಿರೋ ಈ ಹೊತ್ತಲ್ಲಿ ಕಿರಣ್ ಮಜುಂದಾರ್ ಶಾ ಅವರ ಅಭಿಪ್ರಾಯದ ಬಗ್ಗೆಯೂ ಪರ-ವಿರೋಧ ಚರ್ಚೆಗಳು ಶುರುವಾಗಿವೆ.

ವರದಿ: ನಟರಾಜ್​​, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 1:56 pm, Mon, 12 January 26

ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!