Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹಾವುಗಳ ಕಾಟ: ಮನೆಯಿಂದ ಹೊರ ಬರುವುದಕ್ಕೂ ಮುನ್ನ ಹೆಲ್ಮೆಟ್, ಕಾರು ಚೆಕ್ ಮಾಡಿದ್ರೆ ಒಳಿತು

ಮಳೆಗಾಲ ಆರಂಭವಾಗುತ್ತಿದ್ದಂತೆ ಮಹಾನಗರದಲ್ಲಿ ಹಾವುಗಳು ಸಂಖ್ಯೆ ವಿಪರೀತ ಹೆಚ್ಚಾಗಿದೆ. ಅದರಂತೆ ನಿನ್ನೆ(ಜು.20) ವಿಧಾನಸೌಧಕ್ಕೂ ಹಾವು ಎಂಟ್ರಿಕೊಟ್ಟಿತ್ತು. ಹೌದು ನೀವು ಮನೆಯಿಂದ ಹೊರಗೆ ಹೋಗುವುದಕ್ಕೂ ಮುಂಚೆ ಹೆಲ್ಮೆಟ್, ಕಾರು​ಗಳನ್ನ ಒಮ್ಮೆ ಚೆಕ್ ಮಾಡಿದ್ರೆ ಒಳಿತು.

Follow us
Poornima Agali Nagaraj
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 21, 2023 | 8:25 AM

ಬೆಂಗಳೂರು: ಮಳೆಗಾಲ ಆರಂಭವಾಗುತ್ತಿದ್ದಂತೆ ಮಹಾನಗರದಲ್ಲಿ ಹಾವುಗಳು ಸಂಖ್ಯೆ ವಿಪರೀತ ಹೆಚ್ಚಾಗಿದೆ. ಅದರಂತೆ ನಿನ್ನೆ(ಜು.20) ವಿಧಾನಸೌಧಕ್ಕೂ ಹಾವು ಎಂಟ್ರಿಕೊಟ್ಟಿತ್ತು. ಹೌದು ನೀವು ಮನೆಯಿಂದ ಹೊರಗೆ ಹೋಗುವುದಕ್ಕೂ ಮುಂಚೆ ಹೆಲ್ಮೆಟ್, ಕಾರು​ಗಳನ್ನ ಒಮ್ಮೆ ಚೆಕ್ ಮಾಡಿದ್ರೆ ಒಳಿತು. ಇಲ್ಲವಾದರೆ ನಿಮಗೂ ಹಾವಿನ ದರ್ಶನ ಆಗಬಹುದು. ಇತ್ತೀಚೆಗೆ ಮನೆಯ ಸಂಧಿ ಗೊಂದಿಗಳಲ್ಲಿ ಹಾವು ಕಾಣಿಸಿಕೊಳ್ಳುತ್ತಿವೆ. ಈ ಹಾವುಗಳನ್ನ ಹಿಡಿಯಲು ವನ್ಯ ಸಂರಕ್ಷಣಾ ತಂಡ ಈಗಾಗಲೇ ಬಂದಿದ್ದು, ಪ್ರತಿದಿನ 50 ಕ್ಕು ಹೆಚ್ಚು ಕರೆಗಳು ಬರುತ್ತಿವೆಯಂತೆ.

ಹೆಲ್ಮೆಟ್, ಕಾಂಪೌಂಡ್, ಕಾರು, ಶೂಸ್, ವಾಟಾರ್ ಟ್ಯಾಂಕರ್, ಫುಟ್​ಪಾತ್​ಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಹಾವುಗಳು

ಹೌದು ನಗರದ ಯಲಹಂಕ, ಆರ್ ಆರ್ ನಗರ, ಆರ್ ಟಿ ನಗರ, ಮಹದೇವಪುರ ಭಾಗದಲ್ಲಿ ಪ್ರತಿನಿತ್ಯ ಹಾವಿನ ದರ್ಶನವಾಗುತ್ತಿದೆ. ಇದರಿಂದ ಜನರು‌ ರೋಸಿಹೋಗಿದ್ದಾರೆ. ಮಳೆಗಾಲದಲ್ಲಿ ಹಾವುಗಳ ಮರಿ ಮಾಡುತ್ತವೆ. ಈ ಕಾರಣದಿಂದಾಗಿ ಬೆಚ್ಚನೆಯ ಜಾಗವನ್ನ ಹುಡುಕುತ್ತಿರುತ್ತದೆ. ಇದರಿಂದಾಗಿ ಜನರಿರುವ ಕಡೆ ಹಾವುಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತವೆ ಎಂದು ಉರಗ ಪ್ರೇಮಿಗಳು ಹೇಳುತ್ತಿದ್ದಾರೆ.

ಇದನ್ನೂ ಓದಿ:Snakelets birth: ನಡುರಸ್ತೆಯಲ್ಲಿ ಸರಸರನೇ ಸಾಲಾಗಿ ಮರಿಗಳಿಗೆ ಜನ್ಮ ನೀಡಿದ ಹಾವು, ಕುತೂಹಲಗೊಂಡ ಜನ!

ರಾಜಾಧಾನಿಯಲ್ಲಿಲ್ಲ ಬೇಡಿಕೆಗೆ ತಕ್ಕಷ್ಟು ವನ್ಯ ಸಂರಕ್ಷಕರು

ಇನ್ನು ಹೆಚ್ಚಾಗಿ ಮಹಾನಗರದಲ್ಲಿಯೇ ಹಾವುಗಳು ಕಂಡು ಬರುತ್ತಿದ್ದು, ಸಿಲಿಕಾನ್​ ಸಿಟಿ ಜನರಿಗೆ ಭಯದ ವಾತಾವರಣ ನಿರ್ಮಾಣವಾಗಿದೆ. ಮೊದಲೇ ರಾಜಾಧಾನಿಯಲ್ಲಿ ಬೇಡಿಕೆಗೆ ತಕ್ಕಷ್ಟು ವನ್ಯ ಸಂರಕ್ಷಕರು ಇಲ್ಲ. ಸಧ್ಯ ಬೆಂಗಳೂರು ವ್ಯಾಪ್ತಿಯಲ್ಲಿ 7 ಜನರಷ್ಟೇ ಹಾವುಗಳನ್ನ ಹಿಡಿಯುವ ವನ್ಯ ಸಂರಕ್ಷಕರಿದ್ದಾರೆ. ಹೀಗಾಗಿ ಜನರು ಎಚ್ಚರಿಕೆಯಿಂದ ಇರಬೇಕಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ