AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹಾವುಗಳ ಕಾಟ: ಮನೆಯಿಂದ ಹೊರ ಬರುವುದಕ್ಕೂ ಮುನ್ನ ಹೆಲ್ಮೆಟ್, ಕಾರು ಚೆಕ್ ಮಾಡಿದ್ರೆ ಒಳಿತು

ಮಳೆಗಾಲ ಆರಂಭವಾಗುತ್ತಿದ್ದಂತೆ ಮಹಾನಗರದಲ್ಲಿ ಹಾವುಗಳು ಸಂಖ್ಯೆ ವಿಪರೀತ ಹೆಚ್ಚಾಗಿದೆ. ಅದರಂತೆ ನಿನ್ನೆ(ಜು.20) ವಿಧಾನಸೌಧಕ್ಕೂ ಹಾವು ಎಂಟ್ರಿಕೊಟ್ಟಿತ್ತು. ಹೌದು ನೀವು ಮನೆಯಿಂದ ಹೊರಗೆ ಹೋಗುವುದಕ್ಕೂ ಮುಂಚೆ ಹೆಲ್ಮೆಟ್, ಕಾರು​ಗಳನ್ನ ಒಮ್ಮೆ ಚೆಕ್ ಮಾಡಿದ್ರೆ ಒಳಿತು.

Poornima Agali Nagaraj
Poornima Agali Nagaraj| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 21, 2023 | 8:25 AM

Share

ಬೆಂಗಳೂರು: ಮಳೆಗಾಲ ಆರಂಭವಾಗುತ್ತಿದ್ದಂತೆ ಮಹಾನಗರದಲ್ಲಿ ಹಾವುಗಳು ಸಂಖ್ಯೆ ವಿಪರೀತ ಹೆಚ್ಚಾಗಿದೆ. ಅದರಂತೆ ನಿನ್ನೆ(ಜು.20) ವಿಧಾನಸೌಧಕ್ಕೂ ಹಾವು ಎಂಟ್ರಿಕೊಟ್ಟಿತ್ತು. ಹೌದು ನೀವು ಮನೆಯಿಂದ ಹೊರಗೆ ಹೋಗುವುದಕ್ಕೂ ಮುಂಚೆ ಹೆಲ್ಮೆಟ್, ಕಾರು​ಗಳನ್ನ ಒಮ್ಮೆ ಚೆಕ್ ಮಾಡಿದ್ರೆ ಒಳಿತು. ಇಲ್ಲವಾದರೆ ನಿಮಗೂ ಹಾವಿನ ದರ್ಶನ ಆಗಬಹುದು. ಇತ್ತೀಚೆಗೆ ಮನೆಯ ಸಂಧಿ ಗೊಂದಿಗಳಲ್ಲಿ ಹಾವು ಕಾಣಿಸಿಕೊಳ್ಳುತ್ತಿವೆ. ಈ ಹಾವುಗಳನ್ನ ಹಿಡಿಯಲು ವನ್ಯ ಸಂರಕ್ಷಣಾ ತಂಡ ಈಗಾಗಲೇ ಬಂದಿದ್ದು, ಪ್ರತಿದಿನ 50 ಕ್ಕು ಹೆಚ್ಚು ಕರೆಗಳು ಬರುತ್ತಿವೆಯಂತೆ.

ಹೆಲ್ಮೆಟ್, ಕಾಂಪೌಂಡ್, ಕಾರು, ಶೂಸ್, ವಾಟಾರ್ ಟ್ಯಾಂಕರ್, ಫುಟ್​ಪಾತ್​ಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಹಾವುಗಳು

ಹೌದು ನಗರದ ಯಲಹಂಕ, ಆರ್ ಆರ್ ನಗರ, ಆರ್ ಟಿ ನಗರ, ಮಹದೇವಪುರ ಭಾಗದಲ್ಲಿ ಪ್ರತಿನಿತ್ಯ ಹಾವಿನ ದರ್ಶನವಾಗುತ್ತಿದೆ. ಇದರಿಂದ ಜನರು‌ ರೋಸಿಹೋಗಿದ್ದಾರೆ. ಮಳೆಗಾಲದಲ್ಲಿ ಹಾವುಗಳ ಮರಿ ಮಾಡುತ್ತವೆ. ಈ ಕಾರಣದಿಂದಾಗಿ ಬೆಚ್ಚನೆಯ ಜಾಗವನ್ನ ಹುಡುಕುತ್ತಿರುತ್ತದೆ. ಇದರಿಂದಾಗಿ ಜನರಿರುವ ಕಡೆ ಹಾವುಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತವೆ ಎಂದು ಉರಗ ಪ್ರೇಮಿಗಳು ಹೇಳುತ್ತಿದ್ದಾರೆ.

ಇದನ್ನೂ ಓದಿ:Snakelets birth: ನಡುರಸ್ತೆಯಲ್ಲಿ ಸರಸರನೇ ಸಾಲಾಗಿ ಮರಿಗಳಿಗೆ ಜನ್ಮ ನೀಡಿದ ಹಾವು, ಕುತೂಹಲಗೊಂಡ ಜನ!

ರಾಜಾಧಾನಿಯಲ್ಲಿಲ್ಲ ಬೇಡಿಕೆಗೆ ತಕ್ಕಷ್ಟು ವನ್ಯ ಸಂರಕ್ಷಕರು

ಇನ್ನು ಹೆಚ್ಚಾಗಿ ಮಹಾನಗರದಲ್ಲಿಯೇ ಹಾವುಗಳು ಕಂಡು ಬರುತ್ತಿದ್ದು, ಸಿಲಿಕಾನ್​ ಸಿಟಿ ಜನರಿಗೆ ಭಯದ ವಾತಾವರಣ ನಿರ್ಮಾಣವಾಗಿದೆ. ಮೊದಲೇ ರಾಜಾಧಾನಿಯಲ್ಲಿ ಬೇಡಿಕೆಗೆ ತಕ್ಕಷ್ಟು ವನ್ಯ ಸಂರಕ್ಷಕರು ಇಲ್ಲ. ಸಧ್ಯ ಬೆಂಗಳೂರು ವ್ಯಾಪ್ತಿಯಲ್ಲಿ 7 ಜನರಷ್ಟೇ ಹಾವುಗಳನ್ನ ಹಿಡಿಯುವ ವನ್ಯ ಸಂರಕ್ಷಕರಿದ್ದಾರೆ. ಹೀಗಾಗಿ ಜನರು ಎಚ್ಚರಿಕೆಯಿಂದ ಇರಬೇಕಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Poornima Agali Nagaraj
Poornima Agali Nagaraj
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ