AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ವಿಚಾರಣೆ ಬಳಿಕ ಉಲ್ಟಾ ಹೊಡೆದ ಸ್ನೇಹಮಯಿ ಕೃಷ್ಣ: ಶಾಲಿನಿ ರಜನೀಶ್​​ಗೆ ಕ್ಷಮೆ ಕೇಳಿದ ಸಾಮಾಜಿಕ ಕಾರ್ಯಕರ್ತ

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧದ 1.60 ಕೋಟಿ ರೂ. ಲಂಚ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ, ಸಿಸಿಬಿ ವಿಚಾರಣೆ ಬಳಿಕ ಯುಟರ್ನ್ ಹೊಡೆದಿದ್ದಾರೆ. ಶಾಲಿನಿ ರಜನೀಶ್ ವಿರುದ್ಧದ ಆರೋಪ ಸುಳ್ಳು ಎಂದಿದ್ದಾರೆ. ಮುಡಾ ಮಾಜಿ ಆಯುಕ್ತ ನಟೇಶ್ ವಿರುದ್ಧದ ಆರೋಪಕ್ಕೆ ಬದ್ಧರಾಗಿದ್ದು, ಆಡಿಯೋ ನಿಜ ಎಂದಿದ್ದಾರೆ.

ಸಿಸಿಬಿ ವಿಚಾರಣೆ ಬಳಿಕ ಉಲ್ಟಾ ಹೊಡೆದ ಸ್ನೇಹಮಯಿ ಕೃಷ್ಣ: ಶಾಲಿನಿ ರಜನೀಶ್​​ಗೆ ಕ್ಷಮೆ ಕೇಳಿದ ಸಾಮಾಜಿಕ ಕಾರ್ಯಕರ್ತ
ಸ್ನೇಹಮಯಿ ಕೃಷ್ಣ, ಶಾಲಿನಿ ರಜನೀಶ್Image Credit source: google
ಗಂಗಾಧರ​ ಬ. ಸಾಬೋಜಿ
|

Updated on: Feb 21, 2026 | 4:31 PM

Share

ಬೆಂಗಳೂರು, ಫೆಬ್ರವರಿ 21: ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೇ ಗಂಭೀರ ಆರೋಪಿಸಿದ್ದರು. ಶಾಲಿನಿ ರಜನೀಶ್ ವಿರುದ್ಧ 1.60 ಕೋಟಿ ರೂ ಲಂಚದ ಆರೋಪ ಮಾಡಿದ್ದರು. ಮುಡಾ ಮಾಜಿ ಆಯುಕ್ತ ನಟೇಶ್ ಸಿಎಸ್​ಗೆ ಲಂಚ ಕೊಟ್ಟು ಮುಂಬಡ್ತಿ ಪಡೆದಿದ್ದಾರೆಂದು ಆರೋಪಿಸಿದ್ದು ದೊಡ್ಡ ಮಟ್ಟದಲ್ಲೇ ಸದ್ದು ಮಾಡಿತ್ತು. ಆದರೆ 23 ಗಂಟೆಗೂ ಹೆಚ್ಚು ಕಾಲ ಸಿಸಿಬಿ ವಿಚಾರಣೆ ಬಳಿಕ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (snehamayi krishna) ಇದೀಗ ಉಲ್ಟಾ ಹೊಡೆದಿದ್ದಾರೆ.

ನಿನ್ನೆಯಷ್ಟೇ ದೂರುದಾರ ಸ್ನೇಹಮಯಿ ಕೃಷ್ಣರನ್ನ ವಶಕ್ಕೆ ಪಡೆದು ಸಿಸಿಬಿ ತೀವ್ರ ವಿಚಾರಣೆ ಮಾಡಿತ್ತು. ಆಡಿಯೋವನ್ನ ಕೋರ್ಟ್​ಗೂ ಸಲ್ಲಿಕೆ ಮಾಡೋಕೂ ಸಜ್ಜಾಗಿದ್ದರು. ಆದರೆ ಕೋರ್ಟ್​ಗೆ ಸಲ್ಲಿಸೋಕೆ ಮುಂದಾಗ್ತಿದ್ದಂತೆಯೇ ಸಿಸಿಬಿ ವಶಕ್ಕೆ ಪಡೆದಿತ್ತು. ಜೊತೆಗೆ ಮೈಸೂರಿನ 2 ಮನೆ, ಒಂದು ಕಚೇರಿ ಮೇಲೂ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಕೆಲವು ಪ್ರಮುಖ ದಾಖಲೆಗಳನ್ನ ಸೀಜ್ ಮಾಡಿದ್ದರು.

ಇದನ್ನೂ ಓದಿ: ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್

ಇದೀಗ ಸಿಸಿಬಿ ವಿಚಾರಣೆ ಬಳಿಕ ತಪ್ಪೊಪ್ಪಿಕೊಂಡಿರೋ ಸ್ನೇಹಮಯಿ ಕೃಷ್ಣ, ಆಡಿಯೋ ನಿಜ, ಆದರೆ ಶಾಲಿನಿ ರಜನೀಶ್ ವಿರುದ್ಧದ ಆರೋಪ ಸುಳ್ಳು ಅಂದಿದ್ದಾರೆ. ಮುಡಾ ಪ್ರಕರಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಅಂತಾ ಸ್ಪಷ್ಟನೆ ಕೊಟ್ಟಿದ್ದಾರೆ.

ಮುಡಾ ಕೇಸ್​ಗೂ ಇದಕ್ಕೂ ಸಂಬಂಧ ಇಲ್ಲ ಅಂತಿರೋ ದೂರುದಾರ ಸ್ನೇಹಮಯಿ ಕೃಷ್ಣ, ಮುಡಾ ಮಾಜಿ ಆಯುಕ್ತ ನಟೇಶ್ ವಿರುದ್ಧ ನನ್ನ ಆರೋಪ ಸರಿಯಾಗೇ ಇದೆ ಅಂತಿದ್ದಾರೆ. ನಟೇಶ್, ವಿನೋದ್ ಮಧ್ಯೆ ಹಣಕಾಸಿನ ವಿಚಾರ ನಡೆದಿತ್ತು. ಇದರಲ್ಲಿ ನನ್ನನ್ನೂ ಬಳಸಿಕೊಳ್ಳೋ ಪ್ರಯತ್ನ ಆಗಿತ್ತು ಅಂದಿದ್ದಾರೆ.

ಶಾಲಿನಿ ರಜನೀಶ್​​ಗೆ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ

ಸ್ನೇಹಮಯಿ ಕೃಷ್ಣ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ವಿನೋದ್ ಮತ್ತು ನಟೇಶ್ ನಡುವಿನ ಹಣಕಾಸಿನ ವಿವಾದಕ್ಕೆ ಸಂಬಂಧಿಸಿದ ಆಡಿಯೋದಲ್ಲಿ, ಶಾಲಿನಿ ರಜನೀಶ್ ಅವರ ಬಗ್ಗೆ ನೀಡಲಾದ ಮಾಹಿತಿ ಸುಳ್ಳು ಎಂದು ಅವರು ಒಪ್ಪಿಕೊಂಡಿದ್ದಾರೆ. ಹೀಗಾಗಿ ತಮ್ಮ ತಪ್ಪಿಗಾಗಿ ಶಾಲಿನಿ ರಜನೀಶ್​ಗೆ ಕ್ಷಮೆ ಕೋರಿದ್ದಾರೆ.

ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಹಲವು ಅನುಮಾನ!

ಇನ್ನು ಶಾಲಿನಿ ರಜನೀಶ್ ವಿರುದ್ಧ ಆರೋಪದಲ್ಲಿ ಕೋರ್ಟ್​ಗೆ ಸಾಕ್ಷಿ ಸಲ್ಲಿಕೆಯಾಗೋದನ್ನ ತಪ್ಪಿಸೋ ಹುನ್ನಾರ ನಡೀತಾ? ಅನ್ನೋ ಅನುಮಾನವೂ ಇದೆ. ಇಂದು ಜನಪ್ರತಿನಿಧಿಗಳ ಕೋರ್ಟ್​ಗೆ ನಟೇಶ್​ ಮಾತನಾಡಿದ್ದ ಆಡಿಯೋ ಸಲ್ಲಿಕೆಗೂ ಮುಂದಾಗಿದ್ದರು. ಆದರೆ ಕೋರ್ಟ್​ಗೆ ಆಡಿಯೋ ಸಲ್ಲಿಕೆಗೂ ಮುನ್ನವೇ ಸ್ನೇಹಮಯಿಯನ್ನ ವಶಕ್ಕೆ ಪಡೆದಿರೋದು ಹಲವು ಅನುಮಾನಕ್ಕೂ ಕಾರಣವಾಗಿತ್ತು.

ಇನ್ನು ಕೇಸ್ ಇಲ್ಲಿಗೆ ಮುಗೀತಾ? ಇಲ್ಲ, ಆಡಿಯೋ ಮಾಡಿದ್ದ ವಿನೋದ್​ನನ್ನ ಸಿಸಿಬಿ ಪೊಲೀಸರು ಬಂಧನ ಮಾಡಿದ್ದಾರೆ. ಹಣಕಾಸು ವಿಚಾರದಲ್ಲಿ ನಟೇಶ್ ಮಾತನಾಡಿದ್ದ ಆಡಿಯೋವನ್ನ ಪರಿಶೀಲನೆ ಮಾಡಲಾಗುತ್ತಿದೆ. ಸ್ನೇಹಮಯಿ ವಶದ ವಿಚಾರದಲ್ಲಿ ಸಿಎಂ ಸೇರಿ ಹಲವರ ಕೈವಾಡ ಇದೆ ಅಂತಾ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಆರೋಪಿಸಿದರು. ಇದಕ್ಕೆ ತಿರುಗೇಟು ಕೊಟ್ಟ ಸಚಿವ ಪ್ರಿಯಾಂಕ್ ಖರ್ಗೆ, ಎಲ್ಲದನ್ನೂ ದ್ವೇಷ ಅನ್ನೋದು ಸರಿಯಲ್ಲ ಎಂದಿದ್ದಾರೆ. ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಆಗುತ್ತೆ ಅಂತಾ ಸಚಿವ ದಿನೇಶ್​ ಗುಂಡೂರಾವ್​ ಹೇಳಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣದ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?

ಒಟ್ಟಿನಲ್ಲಿ ಶಾಲಿನಿ ರಜನೀಶ್ ವಿರುದ್ಧ ನನ್ನ ಆರೋಪ ಸುಳ್ಳು ಅಂತಾ ಸ್ನೇಹಮಯಿ ಕೃಷ್ಣ ಇದೀಗ ಉಲ್ಟಾ ಹೊಡೆದಿದ್ದಾರೆ. ಆದರೆ ಮುಡಾ ಮಾಜಿ ಆಯುಕ್ತ ನಟೇಶ್​ ಆಡಿಯೋದ ಬಗ್ಗೆ ಸಿಸಿಬಿ ತನಿಖೆ ಮುಂದುವರಿದಿದೆ.

ವರದಿ: ಬ್ಯರೋ ರಿಪೋರ್ಟ್​ TV9

ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.