AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸೋಷಿಯಲ್ ಮೀಡಿಯಾದಿಂದ ಹೆಚ್ಚಿದ ಅಪರಾಧ, ಕಳೆದ ವರ್ಷಕ್ಕಿಂತ ಶೇ 21 ಹೆಚ್ಚಳ

ಸಾಮಾಜಿಕ ಮಾಧ್ಯಮಗಳಿಗೆ ಮೂಗುದಾರ ಎಂಬುದೇ ಇಲ್ಲ. ಯಾರು ಏನ್ ಬೇಕಾದರೂ ಪೋಸ್ಟ್ ಮಾಡಬಹುದು. ಯಾರಿಗೆ ಏನ್ ಮೆಸೇಜ್ ಬೇಕಿದ್ದರೂ ಕಳುಹಿಸಬಹುದು. ಸೋಷಿಯಲ್ ಮೀಡಿಯಾದಿಂದಾಗಿ ನಡೆಯುತ್ತಿರುವ ಅಪರಾಧ ಪ್ರಕರಣಗಳ ಪ್ರಮಾಣ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿರುವುದು ತಿಳಿದುಬಂದಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಅಪರಾಧ ಪ್ರಕರಣಗಳು ಶೇ 21 ರಷ್ಟು ಹೆಚ್ಚಳವಾಗಿದೆ.

ಬೆಂಗಳೂರು: ಸೋಷಿಯಲ್ ಮೀಡಿಯಾದಿಂದ ಹೆಚ್ಚಿದ ಅಪರಾಧ, ಕಳೆದ ವರ್ಷಕ್ಕಿಂತ ಶೇ 21 ಹೆಚ್ಚಳ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Oct 14, 2025 | 7:32 AM

Share

ಬೆಂಗಳೂರು, ಅಕ್ಟೋಬರ್ 14: ಸೋಷಿಯಲ್ ಮೀಡಿಯಾ (Social Media) ಜನರನ್ನು ಆವರಿಸಿಕೊಂಡು ವರ್ಷಗಳೇ ಉರುಳಿ ಹೋಗಿವೆ. ಆದರೆ ಇದೇ ಸಾಮಾಜಿಕ ಮಾಧ್ಯಮಗಳಲ್ಲಿ ಇಲ್ಲಸಲ್ಲದ ವಿಚಾರಗಳನ್ನು ಪೋಸ್ಟ್ ಮಾಡುವವರು, ಕಾಮೆಂಟ್ ಮಾರುವವರಿಗೆ ಕಡಿವಾಣ ಇಲ್ಲದಂತಾಗಿದೆ. ಇದರಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಕಾನೂನು‌ ಮೀರಿ ವರ್ತಿಸುವವರ ವಿರುದ್ಧ ದಾಖಲಾಗುವ ಅಪರಾಧ ಪ್ರಕರಣಗಳು (Crime Cses) ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇವೆ. ಕಳೆದ 9 ತಿಂಗಳುಗಳಲ್ಲಿ 953 ಪ್ರಕರಣಗಳು ದಾಖಲಾಗಿವೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 21 ರಷ್ಟು ಹೆಚ್ಚಳವಾಗಿದೆ.

ಸೋಷಿಯಲ್ ಮೀಡಿಯಾ ಕ್ರೈಂ

  • ಬೆಂಗಳೂರು ಪೊಲೀಸರ ದತ್ತಾಂಶಗಳ ಪ್ರಕಾರ ಸೋಷಿಯಲ್ ಮೀಡಿಯಾದಿಂದಾಗಿ ಆಗುತ್ತಿರುವ ಅಪರಾಧ ಪ್ರಕರಣಗಳುಹೆಚ್ಚಾಗಿವೆ.
  • 2024ರಲ್ಲಿ ಈ ಸಂಬಂಧ 784 ದಾಖಲಾಗಿದ್ದು, 21% ಕೇಸ್ ಹೆಚ್ಚಳವಾಗಿದ್ದವು.
  • ಸದ್ಯ ಈ ರೀತಿಯ 300 ಪೋಸ್ಟ್ ಮಾಡಿದ್ದ 50 ಅಕೌಂಟ್​​ಗಳನ್ನು ಪೊಲೀಸರು ಬ್ಲಾಕ್ ಮಾಡಿದ್ದಾರೆ.
  • ಇಂತಹ ಪ್ರಕರಣದಲ್ಲಿ ಸಿಲುಕೋದೇ ಹೆಚ್ಚು ಯುವಕ/ಯುವತಿಯರು.
  • ಹೀಗಾಗಿ ಸದ್ಯ ಸೋಷಿಯಲ್ ಮೀಡಿಯಾ ಮೂಲಕ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

ಸೋಷಿಯಲ್ ಮೀಡಿಯಾಗಳ ಮೂಲಕ ವಂಚನೆ, ಮೋಸ, ಪ್ರಚೋದನಾಕಾರಿ ಪೋಸ್ಟ್, ಬೆದರಿಕೆ ಹಾಕುವಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ನಟಿ ರಮ್ಯಾ ವಿರುದ್ಧ ಅವಹೇಳನಕಕಾರಿ ಕಾಮೆಂಟ್ ಮಾಡಿದ್ದ 12 ಜನರನ್ನ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು. ಅದೇ ರೀತಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಕಾಮೆಂಟ್ ಹಾಕಿದವರ ಮೇಲೂ ಕೇಸ್ ದಾಖಲಾಗಿದೆ. ಕೆಲ ದಿನಗಳ ಹಿಂದೆ ಸಿಜೆಐ ಗವಾಯಿಗೆ ಶೂ ಎಸೆದ ಕೇಸ್ ಸಂಬಂದ ಹಾಕಲಾಗಿದ್ದ ಪೋಸ್ಟ್​​ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದ ಐವರ ವಿರುದ್ಧವೂ ಸಿಸಿಬಿ ಸೈಬರ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಹೀಗೆ ಹೆಚ್ಚು ಲೈಕ್ಸ್, ಹೆಚ್ಚು ಶೇರ್​ಗಾಗಿ ಸೋಷಿಯಲ್ ಮೀಡಿಯಾ ಮುಖಾಂತರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವವರ ಸಂಖ್ಯೆ ಹೆಚ್ಚಾಗಿವೆ. ಸದ್ಯ ಇಂತಹ ಸೈಬರ್ ಅಪರಾಧಗಳ ತನಿಖೆಗೆ ಪ್ರತ್ಯೇಕ ಸೈಬರ್ ಕಮಾಂಡ್ ಸೆಂಟರ್ ಶೀಘ್ರದಲ್ಲೇ ಚಾಲ್ತಿಗೆ ಬರಲಿದ್ದು, ಸೋಷಿಯಲ್ ಮೀಡಿಯಾ ಕ್ರೈಂಗೆ ಕಡಿವಾಣ ಬೀಳಲಿದೆ‌.

ಇದನ್ನೂ ಓದಿ: ಟ್ರಾಫಿಕ್ ಪೊಲೀಸರ ಹೆಸರಿನಲ್ಲಿ ಇ-ಚಲನ್ ಬಂದರೆ ಎಚ್ಚರ! ಲಕ್ಷಾಂತರ ರೂ. ದೋಚಿದ್ದಾರೆ ದುಷ್ಕರ್ಮಿಗಳು

ಇನ್ನು ಮುಂದಾದರೂ ಸೋಷಿಯಲ್ ಮೀಡಿಯಾವನ್ನು ಬಳಸುವವರು ಎಚ್ಚರಿಕೆಯಿಂದ ಇರಬೇಕು. ಲೈಕ್, ಕಾಮೆಂಟ್​​ಗಳಿಗಾಗಿ, ಹಣದ ಆಸೆಗಾಗಿ ಕ್ರೈಂಗಳಲ್ಲಿ ಭಾಗಿಯಾದರೆ ಕಾನೂನು‌ ಕಠಿಣ ಕ್ರಮ ಕೈಗೊಳ್ಳಲಿದೆ ಎಂಬ ಸಂದೇಶವಂತೂ ಪೊಲೀಸರಿಂದ ರವಾನೆಯಾಗಿದೆ.

ವರದಿ: ಪ್ರದೀಪ್ ಚಿಕ್ಕಾಟಿ, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ