AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS ಸಿಎಂ ಬೊಮ್ಮಾಯಿ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಸಾಮಾಜಿಕ ಕಾರ್ಯಕರ್ತ

ಸಂಬಂಧಿಸಿ ಸಾಂವಿಧಾನಿಕ ಹುದ್ದೆಗೆ ಸಿಎಂ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಸಿಎಂ ಬೊಮ್ಮಾಯಿ ವಿರುದ್ಧ ರಾಜ್ಯಪಾಲ ಗೆಹ್ಲೋಟ್‌ಗೆ ದೂರು ಸಲ್ಲಿಸಲಾಗಿದೆ.

RSS ಸಿಎಂ ಬೊಮ್ಮಾಯಿ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಸಾಮಾಜಿಕ ಕಾರ್ಯಕರ್ತ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
TV9 Web
| Updated By: ಆಯೇಷಾ ಬಾನು

Updated on:Aug 16, 2022 | 5:25 PM

ಬೆಂಗಳೂರು: ಆರ್‌ಎಸ್‌ಎಸ್‌ಗೆ(RSS) ತಲೆಬಾಗಿರುವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಸಾಂವಿಧಾನಿಕ ಹುದ್ದೆಗೆ ಸಿಎಂ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಸಿಎಂ ಬೊಮ್ಮಾಯಿ ವಿರುದ್ಧ ರಾಜ್ಯಪಾಲ ಗೆಹ್ಲೋಟ್‌ಗೆ(Thawar Chand Gehlot) ದೂರು ಸಲ್ಲಿಸಲಾಗಿದೆ. ಅಸಂವಿಧಾನಿಕ ಸಂಘಟನೆಗೆ ಬದ್ಧರಾಗಿರುವ ಸಿಎಂ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ರಾಜ್ಯಪಾಲರಿಗೆ ಸಾಮಾಜಿಕ ಕಾರ್ಯಕರ್ತ ಹನುಮೇಗೌಡ ದೂರು ನೀಡಿದ್ದಾರೆ.

ಆರ್‌ಎಸ್‌ಎಸ್‌ ಸಂಘಟನೆ ಕಾನೂನಿನಡಿ ನೋಂದಣಿಯಾಗಿಲ್ಲ. ಹಲವಾರು ಕೋಟಿ ವ್ಯವಹಾರವಿದ್ದರೂ ಲೆಕ್ಕಪತ್ರ ನಿರ್ವಹಿಸಿಲ್ಲ. ಆರ್‌ಎಸ್‌ಎಸ್‌ ಸಂಘಟನೆ ಸರಿಯಾಗಿ ಸದಸ್ಯರ ನಿರ್ವಹಣೆ ಮಾಡಿಲ್ಲ. RSS ವಿರುದ್ಧ ಖುದ್ದು ಸಿಎಂಗೆ ದೂರು ನೀಡಿದ್ದರೂ ತನಿಖೆ ನಡೆಸಿಲ್ಲ. ಹೀಗಾಗಿ ಸಿಎಂ ವಿರುದ್ಧ ಕ್ರಮಕೈಗೊಳ್ಳಲು ಸಾಮಾಜಿಕ ಕಾರ್ಯಕರ್ತ ಹನುಮೇಗೌಡ ಆಗ್ರಹಿಸಿದ್ದಾರೆ. ಆಗಸ್ಟ್ 15ರಂದು ನಡೆದ ಅಮೃತ ಭಾರತಿಗೆ ಕರುನಾಡ ಜಾತ್ರೆ ಕಾರ್ಯಕ್ರಮದಲ್ಲಿ‌ ಸಿಎಂ ಬೊಮ್ಮಾಯಿ ಈ ಹೇಳಿಕೆ ನೀಡಿದ್ದರು.

ಸಿಎಂ ಹೇಳಿಕೆಗೆ ಟ್ವೀಟ್ ಮಾಡಿ ರಾಜ್ಯ ಕಾಂಗ್ರೆಸ್‌ ಆಕ್ರೋಶ

ಇನ್ನು ಮತ್ತೊಂದು ಕಡೆ ಇದೇ ವಿಚಾರವಾಗಿ ರಾಜ್ಯ ಕಾಂಗ್ರೆಸ್‌ ಟ್ವೀಟ್ ಮೂಲಕ ಸಿಎಂ ವಿರುದ್ಧ ಆಕ್ರೋಶ ಹೊರ ಹಾಕಿದೆ. ದೇಶದ್ರೋಹಿ ‘ಆರ್‌ಎಸ್‌ಎಸ್‌ ತತ್ವ ಸಿದ್ಧಾಂತದಂತೆ ಕೆಲಸ ಮಾಡುತ್ತೇನೆ’ ಎಂದು ಸಿಎಂ ಹೇಳಿದ್ದಾರೆ. ಆದ್ರೆ ಪ್ರಜಾಪ್ರಭುತ್ವ ವಿರೋಧಿಗಳೇ ನಿಮಗೆ ಆದರ್ಶವಾಗಿದ್ದು ರಾಜ್ಯದ ದೌರ್ಭಾಗ್ಯ ಎಂದು ಸಿಎಂ ವಿರುದ್ಧ ಕಾಂಗ್ರೆಸ್ ಆಕ್ರೋಶ ಹೊರ ಹಾಕಿದೆ. ತಾವು ಸಂವಿಧಾನದ ಆಶಯಗಳ ಮೇಲೆ ಆಡಳಿತ ನಡೆಸಬೇಕಿತ್ತು. ಡಾ.ಬಿ.ಆರ್.ಅಂಬೇಡ್ಕರ್‌ರವರ ತತ್ವಗಳಲ್ಲಿ ಕೆಲಸ ಮಾಡಬೇಕಿತ್ತು. ಪ್ರಜಾಪ್ರಭುತ್ವದ ಆದರ್ಶದಂತೆ ಸಿಎಂರವರು ನಡೆಯಬೇಕಿತ್ತು. ದೇಶದ್ರೋಹಿ RSS ತತ್ವ ಸಿದ್ಧಾಂತದಂತೆ ಕೆಲಸ ಮಾಡ್ತೇನೆಂದಿದ್ದಾರೆ. ಇದು ರಾಜ್ಯದ ದೌರ್ಭಾಗ್ಯ ಎಂದು ಕಾಂಗ್ರೆಸ್ ಕಿಡಿಕಾರಿದೆ.

Published On - 5:17 pm, Tue, 16 August 22

ಕಾನೂನು ಪ್ರಕ್ರಿಯೆ ಮೂಲಕ ಜನಾರ್ಧನ ರೆಡ್ಡಿಗೆ ರಿಲೀಫ್: ಶ್ರೀರಾಮುಲು
ಕಾನೂನು ಪ್ರಕ್ರಿಯೆ ಮೂಲಕ ಜನಾರ್ಧನ ರೆಡ್ಡಿಗೆ ರಿಲೀಫ್: ಶ್ರೀರಾಮುಲು
ವಿಡಿಯೋ ಮಾಡೋದು ನಿಲ್ಲಿಸು; ಡ್ರಗ್ ಪಾರ್ಟಿ ವೇಳೆ ಪೊಲೀಸರಿಗೆ ಮಂಗ್ಲಿ ಆವಾಜ್
ವಿಡಿಯೋ ಮಾಡೋದು ನಿಲ್ಲಿಸು; ಡ್ರಗ್ ಪಾರ್ಟಿ ವೇಳೆ ಪೊಲೀಸರಿಗೆ ಮಂಗ್ಲಿ ಆವಾಜ್
ಮಂತ್ರಿ ಸ್ಥಾನ ಒಲ್ಲೆಯೆನ್ನಲು ನಾನೇನು ಸನ್ಯಾಸಿಯೇ? ಬಸವರಾಜು, ಶಾಸಕ
ಮಂತ್ರಿ ಸ್ಥಾನ ಒಲ್ಲೆಯೆನ್ನಲು ನಾನೇನು ಸನ್ಯಾಸಿಯೇ? ಬಸವರಾಜು, ಶಾಸಕ
ಇಬ್ಬರು ಬೇರೆ ಬೇರೆ ಜಾತಿಯವರು; ಯುವತಿ ಎಸ್​ಸಿಯಾದರೆ ಯುವಕ ಗೌಡಾಸ್!
ಇಬ್ಬರು ಬೇರೆ ಬೇರೆ ಜಾತಿಯವರು; ಯುವತಿ ಎಸ್​ಸಿಯಾದರೆ ಯುವಕ ಗೌಡಾಸ್!
ಸಂಸದ ಇ ತುಕಾರಾಂ ಮತ್ತು ಶಾಸಕ ಭರತ್ ರೆಡ್ಡಿ ಮನಗಳ ಮೇಲೂ ಈಡಿ ದಾಳಿ
ಸಂಸದ ಇ ತುಕಾರಾಂ ಮತ್ತು ಶಾಸಕ ಭರತ್ ರೆಡ್ಡಿ ಮನಗಳ ಮೇಲೂ ಈಡಿ ದಾಳಿ
ಹನುಮಾನ್ ಭಕ್ತರೊಬ್ಬರ ಅಂತ್ಯಕ್ರಿಯೆಗೆ ಬಂದ ಕೋತಿ
ಹನುಮಾನ್ ಭಕ್ತರೊಬ್ಬರ ಅಂತ್ಯಕ್ರಿಯೆಗೆ ಬಂದ ಕೋತಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ