AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯಲ್ಲಿ ನಿರೀಕ್ಷಿತ ಸ್ಥಾನ ಸಿಗದೆ ಅಸಮಾಧಾನಗೊಂಡ ಸಚಿವರು ಕಾಂಗ್ರೆಸ್ ಸೇರುವ ಸಾಧ್ಯತೆ; ಕಾಂಗ್ರೆಸ್ ಮೂಲಗಳಿಂದ ಮಾಹಿತಿ

ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಕೈ ನಾಯಕರನ್ನು ಅದರಲ್ಲೂ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಮಾತುಕತೆ ನಡೆಸಿದ್ದಾರೆ. ಖಾಸಗಿ ಹೋಟೆಲ್​ನಲ್ಲಿ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿದ್ದಾರೆ.

ಬಿಜೆಪಿಯಲ್ಲಿ ನಿರೀಕ್ಷಿತ ಸ್ಥಾನ ಸಿಗದೆ ಅಸಮಾಧಾನಗೊಂಡ ಸಚಿವರು ಕಾಂಗ್ರೆಸ್ ಸೇರುವ ಸಾಧ್ಯತೆ; ಕಾಂಗ್ರೆಸ್ ಮೂಲಗಳಿಂದ ಮಾಹಿತಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 25, 2022 | 4:52 PM

Share

ಬೆಂಗಳೂರು: ಬಿಜೆಪಿಯಲ್ಲಿ(BJP) ನಿರೀಕ್ಷಿತ ಸ್ಥಾನ ಸಿಗದೆ ಅಸಮಾಧಾನಗೊಂಡ ನಾಲ್ವರು ಸಚಿವರು(Ministers) ಕಾಂಗ್ರೆಸ್​ ಸೇರುವ ಸಾಧ್ಯತೆ ಇದೆ ಎಂದು ಟಿವಿ9 ಡಿಜಿಟಲ್​ಗೆ ಕಾಂಗ್ರೆಸ್(Congress) ಮೂಲಗಳು ಮಾಹಿತಿ ನೀಡಿವೆ. ಈಗಾಗಲೇ ಅಸಮಾಧಾನಿತ ಸಚಿವರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ. ಅದರಲ್ಲೂ ಬೆಂಗಳೂರು, ಉತ್ತರ ಕರ್ನಾಟಕದವರೆ ಹೆಚ್ಚಾಗಿ ಬಿಜೆಪಿಯಿಂದ ಕಾಂಗ್ರೆಸ್​ ಪಕ್ಷದ ಕಡೆಗೆ ಒಲವು ತೋರಿದ್ದಾರೆ ಎಂಬ ಮಾಹಿತಿ ಸದ್ಯ ಲಭ್ಯವಾಗಿದೆ. ಕೆಲ ತಿಂಗಳಿನಿಂದಲೂ ಕೈ ನಾಯಕರ ಜೊತೆ ಮಾತುಕತೆ ನಡೆಸುತ್ತಿರುವ ಸಚಿವರಿಗೆ ಜೂನ್, ಜುಲೈ ಬಳಿಕ ಅಖಾಡಕ್ಕಿಳಿಯಲು ಸೂಚನೆ ನೀಡಲಾಗಿದೆ ಎಂದು ಕಾಂಗ್ರೆಸ್​ ಮೂಲಗಳು ಮಾಹಿತಿ ನೀಡಿವೆ.

ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಕೈ ನಾಯಕರನ್ನು ಅದರಲ್ಲೂ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಮಾತುಕತೆ ನಡೆಸಿದ್ದಾರೆ. ಖಾಸಗಿ ಹೋಟೆಲ್​ನಲ್ಲಿ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿದ್ದಾರೆ. ಸಚಿವ ಸ್ಥಾನ ವಂಚಿತ ಬಿಜೆಪಿ ಶಾಸಕರು ಸಹ ಹೊಸ ವರ್ಷಕ್ಕೆ ಶುಭ ಕೋರುವ ನೆಪದಲ್ಲಿ ಕಾಂಗ್ರೆಸ್ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈಗಲೇ ಯಾವುದೇ ನಿರ್ಧಾರ ಬೇಡ. ಜೂನ್, ಜುಲೈ ಬಳಿಕ ಈ ಬಗ್ಗೆ ಯೋಚನೆ ಮಾಡೋಣ. ಪಕ್ಷದ ವೇದಿಕೆಯಲ್ಲೂ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ. ಹೈಕಮಾಂಡ್​ನಿಂದ್ಲೂ ಡಿಕೆಶಿ ಈ ಬಗ್ಗೆ ಅನುಮತಿ ಪಡೆಯಲಿದ್ದಾರೆ.

ಈಗಾಗಲೇ ಪಕ್ಷಕ್ಕೆ ಯಾರೇ ಬಂದರು ಸ್ವಾಗತ. ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂದು ಡಿ. ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಸದ್ಯ ರಾಜಕೀಯ ಬೆಳವಣಿಗೆಯನ್ನು ಹತ್ತಿರದಿಂದ ಕಾಂಗ್ರೆಸ್ ನಾಯಕರು ಗಮನಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಮನಗರ: ಸಿದ್ದರಾಮಯ್ಯ ಹೇಳಿಕೆಯ ಬಗ್ಗೆ ನಾನು ಮಾತನಾಡುವುದಿಲ್ಲ: ಡಿ.ಕೆ.ಶಿವಕುಮಾರ್

ಬಿಜೆಪಿ, ಜೆಡಿಎಸ್ ಶಾಸಕರು ಸಂಪರ್ಕದಲ್ಲಿದ್ದಾರೆಂಬ ಸಿದ್ದರಾಮಯ್ಯ ಹೇಳಿಕೆಯ ಬಗ್ಗೆ ನಾನು ಮಾತನಾಡುವುದಿಲ್ಲ. ಈ ಬಗ್ಗೆ ಯತ್ನಾಳ್​ರನ್ನು ಕೇಳಿದರೆ ಅವರಿಗೆ ಎಲ್ಲಾ ಪಟ್ಟಿ​ ಗೊತ್ತಿದೆ. ಅವರೆಲ್ಲ ಸೇರಿ ಒಂದು ಸಭೆ ಕೂಡ ಮಾಡಿದ್ದಾರೆ. ಅದನ್ನೆಲ್ಲ ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮರಳೆಗವಿ ಮಠದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹೇಳಿಕೆ ನೀಡಿದ್ದಾರೆ.

ಬಿಜೆಪಿ, ಜೆಡಿಎಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಬಿಜೆಪಿ, ಜೆಡಿಎಸ್ ಶಾಸಕರು ಕಾಂಗ್ರೆಸ್ಗೆ ಬರುತ್ತಾರೆ. ಬಿಜೆಪಿ, ಜೆಡಿಎಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಆದರೆ ನನ್ನ ಸಂಪರ್ಕದಲ್ಲಿರುವವರ ಬಗ್ಗೆ ಬಹಿರಂಗಪಡಿಸಲ್ಲ ಅಂತ ಬಾದಾಮಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ವಲಸಿಗರು ಕಾಂಗ್ರೆಸ್ಗೆ ವಾಪಸಾಗ್ತಾರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ನಮ್ಮ ಪಕ್ಷದ ಸಿದ್ಧಾಂತದ ಮೇಲೆ ನಂಬಿಕೆ ಇರಬೇಕು. ಕಂಡಿಷನ್ ಹಾಕದೆ ಯಾರೇ ಬಂದರೂ ಸ್ವಾಗತವಿದೆ. ಪಕ್ಷದ ಸಿದ್ಧಾಂತ, ನಾಯಕತ್ವವನ್ನು ಒಪ್ಪಿಕೊಳ್ಳಬೇಕು ಎಂದು ಹೇಳಿದರು.

ಸಚಿವರಿಂದ ಜನರ ಸಮಸ್ಯೆ ಬಗೆಹರಿಯಲ್ಲ: ಜಿಲ್ಲಾ ಉಸ್ತುವಾರಿ ಸಚಿವರಿಂದ ಜನರ ಸಮಸ್ಯೆ ಬಗೆಹರಿಯಲ್ಲ. ಉಸ್ತುವಾರಿ ಸಚಿವರಾಗಿದ್ದವರು ಅವರ ಕ್ಷೇತ್ರಕ್ಕೆ ಸೀಮಿತರಾಗಿದ್ದಾರೆ. ಜಿಲ್ಲಾ ಉಸ್ತುವಾರಿಗಳ ಮಾತನ್ನು ಯಾರೂ ಕೇಳುವುದಿಲ್ಲ. ಯಾಕಂದ್ರೆ ಇವರು ಕಮಿಷನ್ ಮೇಲೆ ನಿಂತುಬಿಟ್ಟಿದ್ದಾರೆ. ಹೀಗಾಗಿ ಉಸ್ತುವಾರಿಗಳ ಮಾತನ್ನು ಯಾರೂ ಕೇಳೋದಿಲ್ಲ ಅಂತ ಸಿದ್ದರಾಮಯ್ಯ ಹೇಳಿದರು.

ಕಾಂಗ್ರೆಸ್ ಪಕ್ಷ ಯಾವಾಗಲೂ ಚುನಾವಣೆ ಎದುರಿಸಲು ಸಿದ್ಧ. ಜಿಲ್ಲಾ, ತಾಲೂಕು ಪಂಚಾಯಿತಿ, ವಿಧಾನಸಭೆ ಚುನಾವಣೆಗೂ ರೆಡಿ ಇದೀವಿ. ಪಕ್ಷ, ಕಾರ್ಯಕರ್ತರು ಚುನಾವಣೆ ಎದುರಿಸಲು ತಯಾರಾಗಿದ್ದಾರೆ ಎಂದು ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗಿಲ್ಲ. ಕಡಿಮೆ ಆಗಿದೆ ಎಂದು ಹೇಳಿದವರು ಯಾರು? ಆ ರೀತಿ ಹೇಳಿದ ಸಚಿವರಿಗೆ ಪಾಪ ಮಾಹಿತಿ ಇಲ್ಲ ಎಂದರು.

ಬಾದಾಮಿಯಿಂದ ಸ್ಪರ್ಧಿಸಲು ಬೆಂಬಲಿಗರು ಒತ್ತಾಯಿಸುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಚುನಾವಣೆಗೆ ಇನ್ನೂ ಒಂದು ಕಾಲು ವರ್ಷ ಇದೆ, ನೋಡೋಣ. ನಾನು ಈಗಲೇ ಏನೂ ಹೇಳಲಾಗಲ್ಲ. 5-6 ಕಡೆ ಚುನಾವಣೆಗೆ ನಿಲ್ಲುವಂತೆ ನನ್ನನ್ನ ಕರೆಯುತ್ತಿದ್ದಾರೆ. ಅವರನ್ನೆಲ್ಲ ಕೇಳಿ ಚುನಾವಣೆ ಹತ್ತಿರ ಬಂದಾಗ ಹೇಳುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಆರ್​​ಪಿಎನ್ ಸಿಂಗ್

ಮಣಿಪುರ ವಿಧಾನಸಭೆ ಚುನಾವಣೆ; 40 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್​

Published On - 3:28 pm, Tue, 25 January 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ