AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಕೆಲವು ರಾಜಕಾರಣಿಗಳು ಈಗಲೂ ನರಬಲಿ ಕೊಡುತ್ತಾರೆ: ನಿರ್ದೇಶಕ ಅಗ್ನಿ ಶ್ರೀಧರ ಆರೋಪ

ನರಬಲಿ, ಹೆಣ್ಣು ಮಕ್ಕಳ ಬಲಿ ಈಗಲೂ ಇದೆ. ಕಾಮಾಕ್ಯದಿಂದ ಕೇರಳದವರೆಗೂ ನರಬಲಿ ನಡೆಯುತ್ತದೆ. ಬಡ ಮಕ್ಕಳನ್ನು, ಒಂಟಿ ಹೆಣ್ಣು ಮಕ್ಕಳನ್ನು ಮತ್ತು ಬಿಕ್ಷುಕರನ್ನು ಇದಕ್ಕೆ ಬಳಸಿಕೊಳ್ಳಲಾಗುತ್ತೆ. ಕರ್ನಾಟಕದ ಕೆಲವು ರಾಜಕಾರಣಿಗಳು ಈಗಲೂ ನರಬಲಿ ಕೊಡುತ್ತಾರೆ ಎಂದು ನಿರ್ದೇಶಕ ಅಗ್ನಿ ಶ್ರೀಧರ ಆರೋಪ ಮಾಡಿದರು.

ರಾಜ್ಯದ ಕೆಲವು ರಾಜಕಾರಣಿಗಳು ಈಗಲೂ ನರಬಲಿ ಕೊಡುತ್ತಾರೆ: ನಿರ್ದೇಶಕ ಅಗ್ನಿ ಶ್ರೀಧರ ಆರೋಪ
ನಿರ್ದೇಶಕ ಅಗ್ನಿ ಶ್ರೀಧರ್​​
Malatesh Jaggin
| Edited By: |

Updated on: Feb 03, 2024 | 1:57 PM

Share

ಬೆಂಗಳೂರು, ಫೆಬ್ರವರಿ 03: ನರಬಲಿ (Human sacrifice), ಹೆಣ್ಣು ಮಕ್ಕಳ ಬಲಿ ಈಗಲೂ ಇದೆ. ಕಾಮಾಕ್ಯದಿಂದ ಕೇರಳದವರೆಗೂ (Kerala) ನರಬಲಿ ನಡೆಯುತ್ತದೆ. ಬಡ ಮಕ್ಕಳನ್ನು, ಒಂಟಿ ಹೆಣ್ಣು ಮಕ್ಕಳನ್ನು ಮತ್ತು ಬಿಕ್ಷುಕರನ್ನು ಇದಕ್ಕೆ ಬಳಸಿಕೊಳ್ಳಲಾಗುತ್ತೆ. ಕರ್ನಾಟಕದ ಕೆಲವು ರಾಜಕಾರಣಿಗಳು ಈಗಲೂ ನರಬಲಿ ಕೊಡುತ್ತಾರೆ. ನೇರವಾಗಿ ಅವರು ಇದರಲ್ಲಿ ಭಾಗಿಯಾಗಲ್ಲ. ಆದರೆ ಈ ಕೆಲಸ ಮಾಡಿಸುತ್ತಾರೆ ಎಂದು ನಿರ್ದೇಶಕ ಅಗ್ನಿ ಶ್ರೀಧರ್ (Agni Sreedhar) ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಂಡುಪಾಳ್ಯ ಗ್ಯಾಂಗ್​ ಮೇಲೆ ಕೊಲೆ ಆರೋಪ ಹೊರಿಸಿದರು ಎಂದರು.

ಆದರೆ ದಂಡುಪಾಳ್ಯ ಗ್ಯಾಂಗ್ ಆ ಕೊಲೆಗಳನ್ನು ಮಾಡಿರಲಿಲ್ಲ. ದಂಡುಪಾಳ್ಯ ಸಿನಿಮಾದಲ್ಲಿ ತೋರಿಸುವ ಅಂಶಗಳು ನೈಜವಲ್ಲ. ಕ್ರೀಂ ಸಿನಿಮಾದ ಕಥೆ ನರಬಲಿಗೆ ಸಂಬಂಧಿಸಿದೆ ಎಂದು ಹೇಳಿದರು. ಇನ್ನು ಅಗ್ನಿ ಶ್ರೀಧರ ಕ್ರೀಂ ಚಿತ್ರದಲ್ಲಿ ನಟಿಸಿದ್ದಾರೆ.

ಕ್ರೀಂ ಚಿತ್ರದ ವಿಷುಯಲ್ ಟ್ರೇಲರ್ ಬಿಡುಗಡೆ

ಡಿ.ಕೆ.ದೇವೇಂದ್ರ, ನಿರ್ಮಿಸಿರುವ ಈ ಸಿನಿಮಾವನ್ನು ಅಭಿಷೇಕ್ ಬಸಂತ್ ನಿರ್ದೇಶನ ಮಾಡಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಅಗ್ನಿ ಶ್ರೀಧರ್ ಬರೆದಿದ್ದಾರೆ. ಈ ಚಿತ್ರದ ವಿಷುಯಲ್ ಟ್ರೇಲರ್ ಇತ್ತೀಚೆಗೆ ಎ2 ಮ್ಯೂಸಿಕ್ ಮೂಲಕ ಬಿಡುಗಡೆಯಾಯ್ತು. ಲೇಖಕ ಅಗ್ನಿ ಶ್ರೀಧರ್ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದರು. ಕ್ರೀಂ ಚಿತ್ರದಲ್ಲಿ ‘ಕಿರಿಕ್ ಪಾರ್ಟಿ’ ಚಿತ್ರ ಖ್ಯಾತಿಯ ನಟಿ ಸಂಯುಕ್ತ ಹೆಗಡೆ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಭಾರತದಲ್ಲಿ ಪ್ರತಿವರ್ಷ ಎರಡೂವರೆ ಸಾವಿರ ಮಹಿಳೆಯರು ಒಂದಲ್ಲಾ ಒಂದು ಕಾರಣದಿಂದ ಬಲಿಯಾಗುತ್ತಿದ್ದಾರೆ? ಅದಕ್ಕೆ ಕಾರಣ ಏನು ಎಂಬುದನ್ನು ತಿಳಿಸುವ ಕಥೆ ಕೂಡ ಈ ಚಿತ್ರದಲ್ಲಿದೆ.

ಇದನ್ನೂ ಓದಿ: ‘ಅಲ್ಲಿ ಬರುವ ಪಾತ್ರಗಳು ನನಗೆ ಸೇರಿದ್ದು’; ‘ಹೆಡ್​ ಬುಷ್​’ ವಿವಾದದ ಬಗ್ಗೆ ಅಗ್ನಿ ಶ್ರೀಧರ್ ಮಾತು

ಯಾರು ಈ ಅಗ್ನಿ ಶ್ರೀಧರ್​

ಅಗ್ನಿ ಶ್ರೀಧರ ಪತ್ರಕರ್ತರು, ಲೇಖಕರು, ಚಲನಚಿತ್ರ ಸಂಭಾಷಣೆಗಾರರು ಹಾಗೂ ನಿರ್ದೇಶಕರು. ಅಗ್ನಿ ಎಂಬ ವಾರಪತ್ರಿಕೆಯನ್ನು ನಡೆಸುತ್ತಿದ್ದಾರೆ. ಇವರು ಕರುನಾಡ ಸೇನೆಯ ಸ್ಥಾಪಕರೂ ಸಹ ಆಗಿದ್ದಾರೆ. ನಂತರ ಅವರು ಸಾಪ್ತಾಹಿಕ ಕನ್ನಡ ವೃತ್ತಪತ್ರಿಕೆ ಅಗ್ನಿಯನ್ನು ಸ್ಥಾಪಿಸಿದರು. ಮತ್ತು ವೃತ್ತಿಪರ ಬರಹಗಾರ. “ದಾದಗಿರಿಯ ದಿನಗಳು” ಎಂಬ ಪುಸ್ತಕವನ್ನು ಬರೆದಿದ್ದಾರೆ. ಅಗ್ನಿ ಅಸ್ತ್ರ ಎಂಬ ಯು-ಟ್ಯೂಬ್ ಚಾನಲ್‌ನಲ್ಲೂ ತಮ್ಮ ವಿಮರ್ಷೆಗಳನ್ನು ಪ್ರಕಟಿಸಿದ್ದಾರೆ.

ಆ ದಿನಗಳು, ಎದೆಗಾರಿಕೆ ಮತ್ತು ಕಳ್ಳರ ಸಂತೆ ಚಿತ್ರಗಳಿಗೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ತಮಸ್ಸು ಚಿತ್ರಕ್ಕೆ ಕಥೆ, ಚಿತ್ರಕಥೆಯೊಂದಿಗೆ ನಿರ್ದೇಶನ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ