AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳನ್ನ ಹೊತ್ತೊಯ್ದಿದಲ್ಲದೆ 1.5 ವರ್ಷದ ಬಳಿಕ ಅತ್ತೆ ಮನೆಗೆ ಕನ್ನ ಹಾಕಿ ಚಿನ್ನಾಭರಣ ಹೊತ್ತೊಯ್ದಿದ್ದ ಅಳಿಯ ಕೊನೆಗೂ ಅರೆಸ್ಟ್​

ನಂತರ ರೆಜಿನಾ ಕನ್ಯಾಕುಮಾರಿಯಿಂದ ವಾಪಾಸ್ ಬಂದಾಗ ಬಾಗಿಲು ಒಡೆದಿರುವುದು ಗಮನಕ್ಕೆ ಬಂದಿದೆ. ಅನುಮಾನಗೊಂಡು ಒಳಗೆಲ್ಲಾ ಪರಿಶೀಲಿಸಿದಾಗ ಮನೆಯಲ್ಲಿದ್ದ ಚಿನ್ನಾಭರಣ ನಗದು ಸೇರಿ ಒಟ್ಟು 40 ಲಕ್ಷ ರೂ ಕಳ್ಳತನವಾಗಿರುವುದು ಖಚಿತಪಟ್ಟಿದೆ. ಈ ಮಧ್ಯೆ ಅಕ್ಕಪಕ್ಕದ ನಿವಾಸಿಗಳು ಬಂದು ಕಳ್ಳನನ್ನು ತಾವು ನೋಡಿರೋದಾಗಿ ರೆಜಿನಾಗೆ ತಿಳಿಸಿದ್ದಾರೆ.

ಮಗಳನ್ನ ಹೊತ್ತೊಯ್ದಿದಲ್ಲದೆ 1.5 ವರ್ಷದ ಬಳಿಕ ಅತ್ತೆ ಮನೆಗೆ ಕನ್ನ ಹಾಕಿ ಚಿನ್ನಾಭರಣ ಹೊತ್ತೊಯ್ದಿದ್ದ ಅಳಿಯ ಕೊನೆಗೂ ಅರೆಸ್ಟ್​
ಅತ್ತೆ ಮನೆಗೆ ಕನ್ನ ಹಾಕಿ ಚಿನ್ನಾಭರಣ ಹೊತ್ತೊಯ್ದಿದ್ದ ಅಳಿಯ ಕೊನೆಗೂ ಅರೆಸ್ಟ್​
Jagadish PB
| Edited By: |

Updated on: Nov 21, 2023 | 9:59 AM

Share

ಬೆಂಗಳೂರು, ನವೆಂಬರ್ 21: ಒಂದೂವರೆ ವರ್ಷದಿಂದ ಪ್ರೀತಿಸಿ ಮನೆ ಮಗಳನ್ನು ಕರೆದುಕೊಂಡು ಓಡಿ ಹೋಗಿದ್ದೂ ಅಲ್ಲದೆ ಅತ್ತೆ (mother in law) ಮನೆಯಲ್ಲಿದ್ದ ವಸ್ತುಗಳನ್ನೂ ಕದ್ದೊಯ್ದ ಅಳಿಯನನ್ನು (Son in law) ಪೊಲೀಸರು (halasuru police) ಬಂಧಿಸಿದ್ದಾರೆ. ಪ್ರದೀಪ್ ಕುಮಾರ್ ಬಂಧಿತ ಆರೋಪಿ. ಅತ್ತೆ ರೆಜಿನಾ ಕನ್ಯಾಕುಮಾರಿಗೆ ಹೋದ ಸಂದರ್ಭದಲ್ಲಿ ಕಳ್ಳತನ ನಡೆದಿದೆ. ಕಳ್ಳತನ ಮಾಡಿ ಚಿನ್ನಾಭರಣ ತೆಗೆದುಕೊಂಡು ಹೋಗುವಾಗ ಅಕ್ಕಪಕ್ಕದ ನಿವಾಸಿಗಳು ನೋಡಿದ್ದರು. ಪ್ರಶ್ನೆ ಮಾಡಿದಾಗ ನಾನು ಅವರ ಸಂಬಂಧಿಕ ಎಂದು ಹೇಳಿದ್ದ.

ಆದ್ರೆ ಸ್ಥಳೀಯರು ಚಾಣಾಕ್ಷತನ ತೋರಿ, ಚಿನ್ನಾಭರಣ ತೆಗೆದುಕೊಂಡು ಹೋಗುತ್ತಿದ್ದ ಪ್ರದೀಪ್ ಕುಮಾರನ ಫೊಟೋವನ್ನು ಮೊಬೈಲ್ ನಲ್ಲಿ ಕರೆ ಹಿಡಿದಿದ್ದಾರೆ. ಜೊತೆಗೆ ರೆಜಿನಾ ಅವರಿಗೆ ಕರೆ ಮಾಡಿ, ಹೀಗೆಲ್ಲಾ ಆಗಿದೆ ಎಂದು ಫೋಟೋ ಸಮೇತ ಮಾಹಿತಿ ನೀಡಲು ಯತ್ನಿಸಿದ್ದರು. ಆದರೆ ರೆಜಿನಾ ಅವರ ನಂಬರ್ ನಾಟ್ ರೀಚಬಲ್ ಆದ ಹಿನ್ನೆಲೆ ಸಂಪರ್ಕ ಸಾಧ್ಯವಾಗಿರಲಿಲ್ಲ.

ನಂತರ ರೆಜಿನಾ ಕನ್ಯಾಕುಮಾರಿಯಿಂದ ವಾಪಾಸ್ ಬಂದಾಗ ಬಾಗಿಲು ಒಡೆದಿರುವುದು ಗಮನಕ್ಕೆ ಬಂದಿದೆ. ಅನುಮಾನಗೊಂಡು ಒಳಗೆಲ್ಲಾ ಪರಿಶೀಲಿಸಿದಾಗ ಮನೆಯಲ್ಲಿದ್ದ ಚಿನ್ನಾಭರಣ ನಗದು ಸೇರಿ ಒಟ್ಟು 40 ಲಕ್ಷ ರೂ ಕಳ್ಳತನವಾಗಿರುವುದು ಖಚಿತಪಟ್ಟಿದೆ. ಈ ಮಧ್ಯೆ ಅಕ್ಕಪಕ್ಕದ ನಿವಾಸಿಗಳು ಬಂದು ಕಳ್ಳನನ್ನು ತಾವು ನೋಡಿರೋದಾಗಿ ರೆಜಿನಾಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮಾತಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ; BBMP ಸಿಬ್ಬಂದಿಯನ್ನು ಕೊಂದ ಸ್ನೇಹಿತ ಅರೆಸ್ಟ್

ಫೊಟೋ ನೋಡಿದಾಗ ತನ್ನ ಅಳಿಯನೇ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ರೆಜಿನಾ ಅವರ ಚಿಕ್ಕ ಮಗಳು ಲಾವಣ್ಯಾಳನ್ನ ಪ್ರೀತಿಸಿ ಕರೆದುಕೊಂಡು ಹೋಗಿದ್ದ ಪ್ರದೀಪ್. ಈ ಬಗ್ಗೆ ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಮಗಳು ಎಲ್ಲಿದ್ದಾಳೆಂದು ಕೂಡ ರೆಜಿನಾ ಅವರಿಗೆ ತಿಳಿಸಿಲ್ಲವಂತೆ. ಈ ಸಂಬಂಧ ತನ್ನ ಅಳಿಯನ ವಿರುದ್ಧವೇ ರೆಜಿನಾ ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ