AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳನ್ನ ಹೊತ್ತೊಯ್ದಿದಲ್ಲದೆ 1.5 ವರ್ಷದ ಬಳಿಕ ಅತ್ತೆ ಮನೆಗೆ ಕನ್ನ ಹಾಕಿ ಚಿನ್ನಾಭರಣ ಹೊತ್ತೊಯ್ದಿದ್ದ ಅಳಿಯ ಕೊನೆಗೂ ಅರೆಸ್ಟ್​

ನಂತರ ರೆಜಿನಾ ಕನ್ಯಾಕುಮಾರಿಯಿಂದ ವಾಪಾಸ್ ಬಂದಾಗ ಬಾಗಿಲು ಒಡೆದಿರುವುದು ಗಮನಕ್ಕೆ ಬಂದಿದೆ. ಅನುಮಾನಗೊಂಡು ಒಳಗೆಲ್ಲಾ ಪರಿಶೀಲಿಸಿದಾಗ ಮನೆಯಲ್ಲಿದ್ದ ಚಿನ್ನಾಭರಣ ನಗದು ಸೇರಿ ಒಟ್ಟು 40 ಲಕ್ಷ ರೂ ಕಳ್ಳತನವಾಗಿರುವುದು ಖಚಿತಪಟ್ಟಿದೆ. ಈ ಮಧ್ಯೆ ಅಕ್ಕಪಕ್ಕದ ನಿವಾಸಿಗಳು ಬಂದು ಕಳ್ಳನನ್ನು ತಾವು ನೋಡಿರೋದಾಗಿ ರೆಜಿನಾಗೆ ತಿಳಿಸಿದ್ದಾರೆ.

ಮಗಳನ್ನ ಹೊತ್ತೊಯ್ದಿದಲ್ಲದೆ 1.5 ವರ್ಷದ ಬಳಿಕ ಅತ್ತೆ ಮನೆಗೆ ಕನ್ನ ಹಾಕಿ ಚಿನ್ನಾಭರಣ ಹೊತ್ತೊಯ್ದಿದ್ದ ಅಳಿಯ ಕೊನೆಗೂ ಅರೆಸ್ಟ್​
ಅತ್ತೆ ಮನೆಗೆ ಕನ್ನ ಹಾಕಿ ಚಿನ್ನಾಭರಣ ಹೊತ್ತೊಯ್ದಿದ್ದ ಅಳಿಯ ಕೊನೆಗೂ ಅರೆಸ್ಟ್​
Jagadish PB
| Edited By: ಸಾಧು ಶ್ರೀನಾಥ್​|

Updated on: Nov 21, 2023 | 9:59 AM

Share

ಬೆಂಗಳೂರು, ನವೆಂಬರ್ 21: ಒಂದೂವರೆ ವರ್ಷದಿಂದ ಪ್ರೀತಿಸಿ ಮನೆ ಮಗಳನ್ನು ಕರೆದುಕೊಂಡು ಓಡಿ ಹೋಗಿದ್ದೂ ಅಲ್ಲದೆ ಅತ್ತೆ (mother in law) ಮನೆಯಲ್ಲಿದ್ದ ವಸ್ತುಗಳನ್ನೂ ಕದ್ದೊಯ್ದ ಅಳಿಯನನ್ನು (Son in law) ಪೊಲೀಸರು (halasuru police) ಬಂಧಿಸಿದ್ದಾರೆ. ಪ್ರದೀಪ್ ಕುಮಾರ್ ಬಂಧಿತ ಆರೋಪಿ. ಅತ್ತೆ ರೆಜಿನಾ ಕನ್ಯಾಕುಮಾರಿಗೆ ಹೋದ ಸಂದರ್ಭದಲ್ಲಿ ಕಳ್ಳತನ ನಡೆದಿದೆ. ಕಳ್ಳತನ ಮಾಡಿ ಚಿನ್ನಾಭರಣ ತೆಗೆದುಕೊಂಡು ಹೋಗುವಾಗ ಅಕ್ಕಪಕ್ಕದ ನಿವಾಸಿಗಳು ನೋಡಿದ್ದರು. ಪ್ರಶ್ನೆ ಮಾಡಿದಾಗ ನಾನು ಅವರ ಸಂಬಂಧಿಕ ಎಂದು ಹೇಳಿದ್ದ.

ಆದ್ರೆ ಸ್ಥಳೀಯರು ಚಾಣಾಕ್ಷತನ ತೋರಿ, ಚಿನ್ನಾಭರಣ ತೆಗೆದುಕೊಂಡು ಹೋಗುತ್ತಿದ್ದ ಪ್ರದೀಪ್ ಕುಮಾರನ ಫೊಟೋವನ್ನು ಮೊಬೈಲ್ ನಲ್ಲಿ ಕರೆ ಹಿಡಿದಿದ್ದಾರೆ. ಜೊತೆಗೆ ರೆಜಿನಾ ಅವರಿಗೆ ಕರೆ ಮಾಡಿ, ಹೀಗೆಲ್ಲಾ ಆಗಿದೆ ಎಂದು ಫೋಟೋ ಸಮೇತ ಮಾಹಿತಿ ನೀಡಲು ಯತ್ನಿಸಿದ್ದರು. ಆದರೆ ರೆಜಿನಾ ಅವರ ನಂಬರ್ ನಾಟ್ ರೀಚಬಲ್ ಆದ ಹಿನ್ನೆಲೆ ಸಂಪರ್ಕ ಸಾಧ್ಯವಾಗಿರಲಿಲ್ಲ.

ನಂತರ ರೆಜಿನಾ ಕನ್ಯಾಕುಮಾರಿಯಿಂದ ವಾಪಾಸ್ ಬಂದಾಗ ಬಾಗಿಲು ಒಡೆದಿರುವುದು ಗಮನಕ್ಕೆ ಬಂದಿದೆ. ಅನುಮಾನಗೊಂಡು ಒಳಗೆಲ್ಲಾ ಪರಿಶೀಲಿಸಿದಾಗ ಮನೆಯಲ್ಲಿದ್ದ ಚಿನ್ನಾಭರಣ ನಗದು ಸೇರಿ ಒಟ್ಟು 40 ಲಕ್ಷ ರೂ ಕಳ್ಳತನವಾಗಿರುವುದು ಖಚಿತಪಟ್ಟಿದೆ. ಈ ಮಧ್ಯೆ ಅಕ್ಕಪಕ್ಕದ ನಿವಾಸಿಗಳು ಬಂದು ಕಳ್ಳನನ್ನು ತಾವು ನೋಡಿರೋದಾಗಿ ರೆಜಿನಾಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮಾತಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ; BBMP ಸಿಬ್ಬಂದಿಯನ್ನು ಕೊಂದ ಸ್ನೇಹಿತ ಅರೆಸ್ಟ್

ಫೊಟೋ ನೋಡಿದಾಗ ತನ್ನ ಅಳಿಯನೇ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ರೆಜಿನಾ ಅವರ ಚಿಕ್ಕ ಮಗಳು ಲಾವಣ್ಯಾಳನ್ನ ಪ್ರೀತಿಸಿ ಕರೆದುಕೊಂಡು ಹೋಗಿದ್ದ ಪ್ರದೀಪ್. ಈ ಬಗ್ಗೆ ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಮಗಳು ಎಲ್ಲಿದ್ದಾಳೆಂದು ಕೂಡ ರೆಜಿನಾ ಅವರಿಗೆ ತಿಳಿಸಿಲ್ಲವಂತೆ. ಈ ಸಂಬಂಧ ತನ್ನ ಅಳಿಯನ ವಿರುದ್ಧವೇ ರೆಜಿನಾ ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Jagadish PB
Jagadish PB
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ