AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಬೊಮ್ಮಾಯಿ ಸಾಧನೆಗಳ ಕುರಿತ ಧ್ವನಿಸುರುಳಿ ಬಿಡುಗಡೆ: ಜನಸಂಕಲ್ಪ ಸಮಾವೇಶದಲ್ಲಿ ಹಾಡುಗಳ ಪ್ರಸಾರ

ಸಿಎಂ ಬೊಮ್ಮಾಯಿ ಅಭಿಮಾನಿ ಬಳಗದಿಂದ ಹಾಡುಗಳ ರಚನೆ ಮಾಡಿದ್ದು, ಬೊಮ್ಮಾಯಿ ಜಾರಿಗೆ ತಂದಿರುವ ಕಾರ್ಯಕ್ರಮಗಳ ಬಗ್ಗೆ ಹಾಡಿನ ಮೂಲಕ ಪ್ರಸ್ತಾಪ ಮಾಡಲಾಗಿದೆ.

ಸಿಎಂ ಬೊಮ್ಮಾಯಿ ಸಾಧನೆಗಳ ಕುರಿತ ಧ್ವನಿಸುರುಳಿ ಬಿಡುಗಡೆ: ಜನಸಂಕಲ್ಪ ಸಮಾವೇಶದಲ್ಲಿ ಹಾಡುಗಳ ಪ್ರಸಾರ
ಸಿಎಂ ಬೊಮ್ಮಾಯಿ
TV9 Web
| Edited By: |

Updated on: Oct 10, 2022 | 3:03 PM

Share

ಬೆಂಗಳೂರು: ಸಿಎಂ ಬೊಮ್ಮಾಯಿ (Basavaraj Bommai) ಸಾಧನೆಗಳ ಕುರಿತ ಧ್ವನಿಸುರುಳಿಯನ್ನು KFDC ಅಧ್ಯಕ್ಷೆ ತಾರಾ ಅನುರಾಧ ಬಿಡುಗಡೆ ಮಾಡಿದರು. ಸಿಎಂ ಬೊಮ್ಮಾಯಿ ಅಭಿಮಾನಿ ಬಳಗದಿಂದ ಹಾಡುಗಳ (Songs) ರಚನೆ ಮಾಡಿದ್ದು, ಬೊಮ್ಮಾಯಿ ಜಾರಿಗೆ ತಂದಿರುವ ಕಾರ್ಯಕ್ರಮಗಳ ಬಗ್ಗೆ ಹಾಡಿನ ಮೂಲಕ ಪ್ರಸ್ತಾಪ ಮಾಡಲಾಗಿದೆ. ವಿದ್ಯಾನಿಧಿ, ಪಿಂಚಣಿ ಹೆಚ್ಚಳ, ಪೌರಕಾರ್ಮಿಕರ ಖಾಯಂ, ಅಮೃತ ಯೋಜನೆಗಳು, ಜನಸೇವಕ, ರೈತಶಕ್ತಿ ಸರ್ಕಾರದ ಹಲವು ಯೋಜನೆಗಳ ಕುರಿತು ಹಾಡುಗಳನ್ನು ರಚಿಸಲಾಗಿದೆ. ನಾಳೆಯಿಂದ ಜನಸಂಕಲ್ಪ ಸಮಾವೇಶದಲ್ಲಿ ಹಾಡುಗಳನ್ನು ಪ್ರಸಾರ ಮಾಡಲಾಗುತ್ತಿದೆ. ಇಂದು ಮಹಾರಾಷ್ಟ್ರಕ್ಕೆ ತೆರಳಲಿರುವ ಸಿಎಂ ಬೊಮ್ಮಾಯಿ‌, ಕೊಲ್ಹಾಪುರದ ಕನ್ನೇರಿಯ ಸಿದ್ಧಗಿರಿ ಮಠದಲ್ಲಿ ನಡೆಯುತ್ತಿರುವ ಸಂತ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮ ಮುಗಿಸಿ ಮಧ್ಯಾಹ್ನ 3ಕ್ಕೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಬಳಿಕ ರಾಜ್ಯ ಪ್ರವಾಸದ ಸಿದ್ಧತೆ ಬಗ್ಗೆ ಮಾಹಿತಿ‌ ಪಡೆಯಲಿರುವ ಸಿಎಂ, ನಾಳೆಯಿಂದ 3 ದಿನ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.

ಜನಸಂಕಲ್ಪ ಯಾತ್ರೆಗೆ ಬಿಜೆಪಿ ಸಕಲ ಸಿದ್ಧತೆ: ನಾಳೆ ಚಾಲನೆ   

ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ಅಲರ್ಟ್ ಆಗಿದೆ. ಜನಸಂಕಲ್ಪ ಯಾತ್ರೆ ನಡೆಸಲು ಬಿಜೆಪಿ ಭರ್ಜರಿ ಸಿದ್ದತೆ ನಡೆಸಿದೆ. ಅಕ್ಟೋಬರ್ 11 ರಿಂದ ಕ್ಷೇತ್ರ ಸಂಚಾರ ನಡೆಸಲು ಬಿಜೆಪಿಸನ್ನದ್ಧವವಾಗಿದೆ. ಕಾಂಗ್ರೆಸ್ ರಾಷ್ಟ್ರಮಟ್ಟದಲ್ಲಿ ಭಾರತ್ ಜೋಡೋ ಯಾತ್ರೆ ನಡೆಸುತ್ತಿದ್ದರೆ, ಇನ್ನೊಂದು ಕಡೆ ರಾಜ್ಯ ಬಿಜೆಪಿ ನಾಯಕರು ಜನಸಂಕಲ್ಪ ಯಾತ್ರೆ ನಡೆಸಲು ಸಿದ್ದರಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ನಾಯಕ ಬಿ.ಎಸ್​ ಯಡಿಯೂರಪ್ಪ ನೇತೃತ್ವದಲ್ಲಿ ರಾಯಚೂರು ತಾಲೂಕಿನ ಗಿಲ್ಲೆಸುಗೂರಿನಿಂದ ಅ. 11 ರಂದು ಬಿಜೆಪಿ ಸಂಕಲ್ಪ ಯಾತ್ರೆ ಹೊರಡಲಿದೆ. ಈ ಹಿನ್ನೆಲೆ ಅ. 11 ರಂದು ಗ್ರಾಮದಲ್ಲಿ ಬೃಹತ್ ಸಮಾವೇಶ ನಡೆಯಲಿದೆ.

ರಾಯಚೂರಿನಿಂದ ಮುಖ್ಯಮಂತ್ರಿಗಳ ಚುನಾವಣಾ ಪ್ರಚಾರ ಆರಂಭವಾಗಲಿದ್ದು, ಬಿ.ಎಸ್​​ ಯಡಿಯೂರಪ್ಪಅವರೊಂದಿಗೆ ಸಿಎಂ ಬೊಮ್ಮಾಯಿ ಯಾತ್ರೆ ಕೈಗೊಂಡಿದ್ದಾರೆ. ರಾಜ್ಯದ 100 ವಿಧಾನಸಭೆ ಕ್ಷೇತ್ರಗಳಲ್ಲಿ ಯಾತ್ರೆ ಸಮಾವೇಶ ನಡೆಸಲಾಗುತ್ತಿದೆ. ಪಕ್ಷದ ರಾಜ್ಯಾಧ್ಯಕ್ಷ ನೇತೃತ್ವದ ಮತ್ತೊಂದು ತಂಡ 100 ಕ್ಷೇತ್ರಗಳಲ್ಲಿ ಯಾತ್ರೆ ಕೈಗೊಳ್ಳಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಅ. 30 ರಂದು ಕಲಬುರಗಿಯಲ್ಲಿ ಒಬಿಸಿ ಸಮಾವೇಶ, ಮೈಸೂರಿನಲ್ಲಿ ಎಸ್ಸಿ ಮೋರ್ಚಾ ಸಮಾವೇಶ, ಹುಬ್ಬಳ್ಳಿಯಲ್ಲಿ ರೈತ ಮೋರ್ಚಾ ಸಮಾವೇಶ, ಬಳ್ಳಾರಿಯಲ್ಲಿ ಎಸ್ಟಿ ಮೋರ್ಚಾ ಸಮಾವೇಶ ಆಯೋಜಿಸಲಾಗಿದ್ದು, ಬರೋಬ್ಬರಿ 10 ಲಕ್ಷ ಜನರು ಸೇರುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್