AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿ ಪತ್ತೆಯಾದ ಹಣದ ಮೂಲ ತಿಳಿಸಿದ ಗುತ್ತಿಗೆದಾರ ಅಂಬಿಕಾಪತಿ ಪುತ್ರ ಪ್ರದೀಪ್: ಇಲ್ಲಿದೆ ವಿವರ

ಗುತ್ತಿಗೆದಾರ ಅಂಬಿಕಾಪತಿ ನಿವಾಸದ ಮೇಲೆ ಅಕ್ಟೋಬರ್ 14ರಂದು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಬೆಂಗಳೂರಿನ ಮಾನ್ಯತಾ ಟೆಕ್​ಪಾರ್ಕ್‌ನಲ್ಲಿರುವ ನಿವಾಸದಲ್ಲಿ ಸುಮಾರು 42 ಗಂಟೆ ಕಾಲ ಐಟಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು. ಇದೇ ವೇಳೆ, ಬರೋಬ್ಬರಿ 40 ಕೋಟಿ ರೂಪಾಯಿಗೂ ಹೆಚ್ಚಿನ ಹಣ ಸಿಕ್ಕಿದೆ ಎನ್ನಲಾಗಿತ್ತು.

ಮನೆಯಲ್ಲಿ ಪತ್ತೆಯಾದ ಹಣದ ಮೂಲ ತಿಳಿಸಿದ ಗುತ್ತಿಗೆದಾರ ಅಂಬಿಕಾಪತಿ ಪುತ್ರ ಪ್ರದೀಪ್: ಇಲ್ಲಿದೆ ವಿವರ
ಐಟಿ ದಾಳಿ ವೇಳೆ ಗುತ್ತಿಗೆದಾರ ಅಂಬಿಕಾಪತಿ ಮನೆಯಲ್ಲಿ ಪತ್ತೆಯಾಗಿದ್ದ ಹಣ
Shivaprasad B
| Edited By: |

Updated on: Oct 17, 2023 | 9:01 PM

Share

ಬೆಂಗಳೂರು, ಅಕ್ಟೋಬರ್ 17: ಬೆಂಗಳೂರಿನಲ್ಲಿ ಐಟಿ ದಾಳಿ (IT Raid) ವೇಳೆ ಕೋಟ್ಯಂತರ ರೂಪಾಯಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಗುತ್ತಿಗೆದಾರ ಅಂಬಿಕಾಪತಿ ಪುತ್ರ ಪ್ರದೀಪ್ (Pradeep) ಸುದೀರ್ಘ ವಿಚಾರಣೆ ಮುಗಿಸಿ ಮಂಗಳವಾರ ರಾತ್ರಿ ಹೊರಬಂದಿದ್ದಾರೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು (IT Officials) ಅವರನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದರು. ವಿಚಾರಣೆ ಮುಗಿಸಿ ಹೊರಬಂದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಪ್ರದೀಪ್, ವಿಚಾರಣೆ ವೇಳೆ ಅಧಿಕಾರಿಗಳು ಕೇಳಿದ ದಾಖಲೆ ಒದಗಿಸಿದ್ದೇನೆ ಎಂದು ಹೇಳಿದರು.

ನಮ್ಮ ಮನೆಯಲ್ಲಿ ಪತ್ತೆಯಾದ ಹಣ ಜಮೀನಿಗೆ ಸಂಬಂಧಿಸಿದ್ದು. ನನಗೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ. ಸ್ನೇಹಿತ ಪ್ರಮೋದ್​ಗೂ​ ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಅಕ್ಟೋಬರ್ 21ರಂದು ಪ್ರಮೋದ್ ಸಹ ವಿಚಾರಣೆಗೆ ಬರ್ತಾರೆ. ಐಟಿ ದಾಳಿ ವೇಳೆ ಮನೆಯಲ್ಲಿ 20 ಕೋಟಿ 2 ಲಕ್ಷ ರೂ. ಹಣ ಸಿಕ್ಕಿದೆ ಅಕ್ಟೋಬರ್ 26ರಂದು ನನಗೆ ಮತ್ತೆ ವಿಚಾರಣೆಗೆ ಬರಲು ಸೂಚಿಸಿದ್ದಾರೆ ಎಂದು ಪ್ರದೀಪ್ ತಿಳಿಸಿದರು.

ಗುತ್ತಿಗೆದಾರ ಅಂಬಿಕಾಪತಿ ನಿವಾಸದ ಮೇಲೆ ಅಕ್ಟೋಬರ್ 14ರಂದು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಬೆಂಗಳೂರಿನ ಮಾನ್ಯತಾ ಟೆಕ್​ಪಾರ್ಕ್‌ನಲ್ಲಿರುವ ನಿವಾಸದಲ್ಲಿ ಸುಮಾರು 42 ಗಂಟೆ ಕಾಲ ಐಟಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು. ಇದೇ ವೇಳೆ, ಬರೋಬ್ಬರಿ 40 ಕೋಟಿ ರೂಪಾಯಿಗೂ ಹೆಚ್ಚಿನ ಹಣ ಸಿಕ್ಕಿದೆ ಎನ್ನಲಾಗಿತ್ತು. ಇಷ್ಟೇ ಅಲ್ಲದೆ, ಆಸ್ತಿಗೆ ಸಂಬಂಧಿಸಿದ ಕೆಲ ದಾಖಲೆಗಳು ಪತ್ತೆಯಾಗಿದ್ದವು. ಎಲ್ಲವನ್ನೂ ಕ್ರೋಢಿಕರಿಸಿ ಲೆಕ್ಕ ಹಾಕಿ ಜಪ್ತಿ ಮಾಡಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಮೆಟ್ರೋ ಕಾರ್ಪ್ ಕಂಪನಿ ಪಾಲುದಾರರಾಗಿರುವ ಪ್ರಮೋದ್, ಪ್ರದೀಪ್​​ಗೆ ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಅದರಂತೆ ಪ್ರದೀಪ್ ಅವರು ವಿಚಾರಣೆಗೆ ಹಾಜರಾಗಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಗುತ್ತಿಗೆದಾರ ಅಂಬಿಕಾಪತಿ ಸೋದರನ ಮನೆ ಮೇಲೆ ಐಟಿ ದಾಳಿ: ಆರೋಪಿ ಪ್ರದೀಪ್​ನನ್ನು ವಶಕ್ಕೆ ಪಡೆದ ಅಧಿಕಾರಿಗಳು

ಬಿಲ್ಡರ್ ಸಂತೋಷ್ ಎಂಬವರ ನಿವಾಸದ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ, 40 ಕೋಟಿ ರೂಪಾಯಿಗೂ ಹೆಚ್ಚು ಹಣ ಪತ್ತೆಯಾಗಿತ್ತು.

ಐಟಿ ದಾಳಿ ವಿಚಾರ ನಂತರ ರಾಜಕೀಯ ಆಯಾಮವನ್ನೂ ಪಡೆದುಕೊಂಡಿತ್ತು. ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ವಾಗ್ದಾಳಿ ನಡೆಸಿದ್ದರು. ಆದರೆ, ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?