AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿ ಪತ್ತೆಯಾದ ಹಣದ ಮೂಲ ತಿಳಿಸಿದ ಗುತ್ತಿಗೆದಾರ ಅಂಬಿಕಾಪತಿ ಪುತ್ರ ಪ್ರದೀಪ್: ಇಲ್ಲಿದೆ ವಿವರ

ಗುತ್ತಿಗೆದಾರ ಅಂಬಿಕಾಪತಿ ನಿವಾಸದ ಮೇಲೆ ಅಕ್ಟೋಬರ್ 14ರಂದು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಬೆಂಗಳೂರಿನ ಮಾನ್ಯತಾ ಟೆಕ್​ಪಾರ್ಕ್‌ನಲ್ಲಿರುವ ನಿವಾಸದಲ್ಲಿ ಸುಮಾರು 42 ಗಂಟೆ ಕಾಲ ಐಟಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು. ಇದೇ ವೇಳೆ, ಬರೋಬ್ಬರಿ 40 ಕೋಟಿ ರೂಪಾಯಿಗೂ ಹೆಚ್ಚಿನ ಹಣ ಸಿಕ್ಕಿದೆ ಎನ್ನಲಾಗಿತ್ತು.

ಮನೆಯಲ್ಲಿ ಪತ್ತೆಯಾದ ಹಣದ ಮೂಲ ತಿಳಿಸಿದ ಗುತ್ತಿಗೆದಾರ ಅಂಬಿಕಾಪತಿ ಪುತ್ರ ಪ್ರದೀಪ್: ಇಲ್ಲಿದೆ ವಿವರ
ಐಟಿ ದಾಳಿ ವೇಳೆ ಗುತ್ತಿಗೆದಾರ ಅಂಬಿಕಾಪತಿ ಮನೆಯಲ್ಲಿ ಪತ್ತೆಯಾಗಿದ್ದ ಹಣ
Follow us
Shivaprasad
| Updated By: Ganapathi Sharma

Updated on: Oct 17, 2023 | 9:01 PM

ಬೆಂಗಳೂರು, ಅಕ್ಟೋಬರ್ 17: ಬೆಂಗಳೂರಿನಲ್ಲಿ ಐಟಿ ದಾಳಿ (IT Raid) ವೇಳೆ ಕೋಟ್ಯಂತರ ರೂಪಾಯಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಗುತ್ತಿಗೆದಾರ ಅಂಬಿಕಾಪತಿ ಪುತ್ರ ಪ್ರದೀಪ್ (Pradeep) ಸುದೀರ್ಘ ವಿಚಾರಣೆ ಮುಗಿಸಿ ಮಂಗಳವಾರ ರಾತ್ರಿ ಹೊರಬಂದಿದ್ದಾರೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು (IT Officials) ಅವರನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದರು. ವಿಚಾರಣೆ ಮುಗಿಸಿ ಹೊರಬಂದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಪ್ರದೀಪ್, ವಿಚಾರಣೆ ವೇಳೆ ಅಧಿಕಾರಿಗಳು ಕೇಳಿದ ದಾಖಲೆ ಒದಗಿಸಿದ್ದೇನೆ ಎಂದು ಹೇಳಿದರು.

ನಮ್ಮ ಮನೆಯಲ್ಲಿ ಪತ್ತೆಯಾದ ಹಣ ಜಮೀನಿಗೆ ಸಂಬಂಧಿಸಿದ್ದು. ನನಗೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ. ಸ್ನೇಹಿತ ಪ್ರಮೋದ್​ಗೂ​ ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಅಕ್ಟೋಬರ್ 21ರಂದು ಪ್ರಮೋದ್ ಸಹ ವಿಚಾರಣೆಗೆ ಬರ್ತಾರೆ. ಐಟಿ ದಾಳಿ ವೇಳೆ ಮನೆಯಲ್ಲಿ 20 ಕೋಟಿ 2 ಲಕ್ಷ ರೂ. ಹಣ ಸಿಕ್ಕಿದೆ ಅಕ್ಟೋಬರ್ 26ರಂದು ನನಗೆ ಮತ್ತೆ ವಿಚಾರಣೆಗೆ ಬರಲು ಸೂಚಿಸಿದ್ದಾರೆ ಎಂದು ಪ್ರದೀಪ್ ತಿಳಿಸಿದರು.

ಗುತ್ತಿಗೆದಾರ ಅಂಬಿಕಾಪತಿ ನಿವಾಸದ ಮೇಲೆ ಅಕ್ಟೋಬರ್ 14ರಂದು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಬೆಂಗಳೂರಿನ ಮಾನ್ಯತಾ ಟೆಕ್​ಪಾರ್ಕ್‌ನಲ್ಲಿರುವ ನಿವಾಸದಲ್ಲಿ ಸುಮಾರು 42 ಗಂಟೆ ಕಾಲ ಐಟಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು. ಇದೇ ವೇಳೆ, ಬರೋಬ್ಬರಿ 40 ಕೋಟಿ ರೂಪಾಯಿಗೂ ಹೆಚ್ಚಿನ ಹಣ ಸಿಕ್ಕಿದೆ ಎನ್ನಲಾಗಿತ್ತು. ಇಷ್ಟೇ ಅಲ್ಲದೆ, ಆಸ್ತಿಗೆ ಸಂಬಂಧಿಸಿದ ಕೆಲ ದಾಖಲೆಗಳು ಪತ್ತೆಯಾಗಿದ್ದವು. ಎಲ್ಲವನ್ನೂ ಕ್ರೋಢಿಕರಿಸಿ ಲೆಕ್ಕ ಹಾಕಿ ಜಪ್ತಿ ಮಾಡಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಮೆಟ್ರೋ ಕಾರ್ಪ್ ಕಂಪನಿ ಪಾಲುದಾರರಾಗಿರುವ ಪ್ರಮೋದ್, ಪ್ರದೀಪ್​​ಗೆ ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಅದರಂತೆ ಪ್ರದೀಪ್ ಅವರು ವಿಚಾರಣೆಗೆ ಹಾಜರಾಗಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಗುತ್ತಿಗೆದಾರ ಅಂಬಿಕಾಪತಿ ಸೋದರನ ಮನೆ ಮೇಲೆ ಐಟಿ ದಾಳಿ: ಆರೋಪಿ ಪ್ರದೀಪ್​ನನ್ನು ವಶಕ್ಕೆ ಪಡೆದ ಅಧಿಕಾರಿಗಳು

ಬಿಲ್ಡರ್ ಸಂತೋಷ್ ಎಂಬವರ ನಿವಾಸದ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ, 40 ಕೋಟಿ ರೂಪಾಯಿಗೂ ಹೆಚ್ಚು ಹಣ ಪತ್ತೆಯಾಗಿತ್ತು.

ಐಟಿ ದಾಳಿ ವಿಚಾರ ನಂತರ ರಾಜಕೀಯ ಆಯಾಮವನ್ನೂ ಪಡೆದುಕೊಂಡಿತ್ತು. ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ವಾಗ್ದಾಳಿ ನಡೆಸಿದ್ದರು. ಆದರೆ, ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ