AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣದೇವರಾಯ ಪಾಲಿಕೆ ಬಜಾರ್: ದಕ್ಷಿಣ ಭಾರತದ ಮೊದಲ ಹವಾನಿಯಂತ್ರಿತ ಮಾರುಕಟ್ಟೆ ಬೆಂಗಳೂರಿನಲ್ಲಿ!

Krishnadevaraya Palika Bazaar: ಬೆಂಗಳೂರಿನ ವಿಜಯನಗರ ಮೆಟ್ರೋ ನಿಲ್ದಾಣದ ಪಕ್ಕದಲ್ಲಿ ದಕ್ಷಿಣ ಭಾರತದಲ್ಲೇ ಮೊದಲ ಭೂಗತ ಹವಾನಿಯಂತ್ರಿತ ಕೃಷ್ಣದೇವರಾಯ ಪಾಲಿಕೆ ಬಜಾರ್​ ನಿರ್ಮಾಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲಿಕೆ ಬಜಾರ್​ನ್ನು ಉದ್ಘಾಟಿಸಿದರು. ಈ ಪಾಲಿಕೆ ಬಜಾರ್​ನ ವಿಶೇಷತೆ ಏನು? ಇಲ್ಲಿದೆ ಓದಿ

ಕೃಷ್ಣದೇವರಾಯ ಪಾಲಿಕೆ ಬಜಾರ್: ದಕ್ಷಿಣ ಭಾರತದ ಮೊದಲ ಹವಾನಿಯಂತ್ರಿತ ಮಾರುಕಟ್ಟೆ ಬೆಂಗಳೂರಿನಲ್ಲಿ!
ಶ್ರೀಕೃಷ್ಣ ದೇವರಾಯ ಪಾಲಿಕೆ ಬಜಾರ್​
Poornima Agali Nagaraj
| Edited By: |

Updated on:Aug 26, 2024 | 5:04 PM

Share

ಬೆಂಗಳೂರು, ಆಗಸ್ಟ್​ 26: ದಕ್ಷಿಣ ಭಾರತದಲ್ಲೇ ಮೊದಲ ಭೂಗತ ಹವಾನಿಯಂತ್ರಿತ ಮಾರುಕಟ್ಟೆ (Air conditioned Palike Bazaar) ಬೆಂಗಳೂರಿನ (Bengaluru) ವಿಜಯನಗರದ (Vijayanagar) ಮೆಟ್ರೋ ನಿಲ್ದಾಣದ ಪಕ್ಕದಲ್ಲಿ ನಿರ್ಮಾಣವಾಗಿದೆ. ಬರೊಬ್ಬರಿ 13 ಕೋಟಿ ರೂ. ವೆಚ್ಚದಲ್ಲಿ  ಕೃಷ್ಣದೇವರಾಯ ಪಾಲಿಕೆ ಬಜಾರ್​ನ್ನು ನಿರ್ಮಣ ಮಾಡಲಾಗಿದೆ. ಈ ಮಾರುಕಟ್ಟೆಯನ್ನು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಿದರು. ಈ ಪಾಲಿಕೆ ನಿರ್ಮಾಣ ಮಾಡಲು ಬರೊಬ್ಬರಿ 7 ವರ್ಷ ಸಮಯ ಬೇಕಾಯಿತು. ಪಾಲಿಕೆ ಬಜಾರ್​ ಅನೇಕ ವಿಶೇಷತೆಗಳನ್ನು ಒಳಗೊಂಡಿದೆ.

ಹವಾನಿಯಂತ್ರಿತ ಪಾಲಿಕೆ ಮಾರುಕಟ್ಟೆ ದೆಹಲಿ ಬಿಟ್ಟರೇ, ಎರಡನೇಯದ್ದು ಬೆಂಗಳೂರಿನಲ್ಲಿದೆ. ಈ ಮಾರುಕಟ್ಟೆಯು 136 ಮೀಟರ್ ಉದ್ದ ಮತ್ತು 11 ಮೀಟರ್ ಅಗಲವಿದೆ. ಒಟ್ಟು 80 ಅಂಗಡಿಗಳನ್ನು ಹೊಂದಿದೆ. ಪಾಲಿಕೆ ಬಜಾರ್​ ಕೇಂದ್ರೀಯ ಹವಾನಿಯಂತ್ರಣವನ್ನು ಹೊಂದಿದ್ದರೆ, 31 ಅಂಗಡಿಗಳು ಪ್ರತ್ಯೇಕ ಹವಾನಿಯಂತ್ರಣ ಸೌಲಭ್ಯ ಹೊಂದಿವೆ.

ಪಾಲಿಕೆ ಬಜಾರ್ ಒಳಗೆ ಪ್ರವೇಶಕ್ಕೆ ಐದು ದ್ವಾರಗಳಿವೆ. 145 ದೀಪಗಳು, ಎರೆಡು ಎಸ್ಕಲೇಟರ್​ಗಳು ಮತ್ತು ಒಂದು ಲಿಫ್ಟ್​ ಹೊಂದಿದೆ. ಪ್ರತಿ ಅಂಗಡಿಗಳ ಬಳಿ ಫೈಯರ್ ಸೇಫ್ಟಿ ಸಿಲಿಂಡಾರ್ ವ್ಯವಸ್ಥೆ ಮಾಡಲಾಗಿದೆ. ಇಷ್ಟೆಲ್ಲ ವಿಶೇಷತೆಗಳಿಂದ ಕೂಡಿರುವ ಭೂಗತ ಮಾರುಕಟ್ಟೆಯಿಂದ ಬೀದಿಬದಿ ವ್ಯಾಪರಿಗಳಿಗೆ ಅನುಕೂಲವಾಗಿದೆ.‌ ಜೊತೆಗೆ ಟ್ರಾಫಿಕ್ ಸಮಸ್ಯೆ ಕೂಡ ಪರಿಹಾರವಾಗಲಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಡೆಂಗ್ಯೂ ಹೆಚ್ಚಳ: ಸೊಳ್ಳೆ ನಿಯಂತ್ರಣಕ್ಕೆ ಓವಿ ಟ್ರ್ಯಾಪ್ ಅಳವಡಿಸಿದ ಬಿಬಿಎಂಪಿ

ಭೂಗತ ಪಾಲಿಕ ಬಜಾರ್​ ನಿರ್ಮಾಣದಿಂದ 20-30 ವರ್ಷಗಳಿಂದ ಬೀದಿಬದಿಯಲ್ಲೇ ವ್ಯಾಪಾರ ಮಾಡುತ್ತ ಜೀವನ ಸಾಗಿಸುತ್ತಿರುವ ವ್ಯಾಪಾರಿಗಳು ಸಂತೋಷಗೊಂಡಿದ್ದಾರೆ. ಇಷ್ಟು ದಿನ ಮಳೆ,ಗಾಳಿ ಬಿಸಿಲಿನಲ್ಲಿ ವ್ಯಾಪಾರ ಮಾಡುತ್ತ ಜೀವನ ನಡೆಸಿದ್ದೇವೆ. ಇನ್ಮುಂದೆ ಈ ಸಮಸ್ಯೆಗಳಿಂದ ಮುಕ್ತಿ ಸಿಗಲಿದೆ ಎಂದು ವ್ಯಾಪರಸ್ಥರು ಸಂತಸ ವ್ಯಕ್ತಪಡಿಸಿದರು.

ಈ ಹವಾನಿಯಂತ್ರಿತ ಪಾಲಿಕೆ ಬಜಾರ್​ನಿಂದ ವ್ಯಾಪಾರಸ್ಥರಿಗೆ ಮಾತ್ರವಲ್ಲದೆ ಗ್ರಾಹಕರಿಗೂ ತುಂಬ ಅನುಕೂಲವಾಗಲಿದೆ. ರಸ್ತೆಬದಿಯಲ್ಲಿ ವಸ್ತುಗಳನ್ನ ಕೊಳ್ಳುವುದಕ್ಕೆ ಗ್ರಾಹಕರು ಹೆಣಗುತ್ತಿದ್ದರು. ಟ್ರಾಫಿಕ್​ ಮಧ್ಯೆ ವಸ್ತುಗಳನ್ನು ಖರೀದಿಸಲು ಗ್ರಾಹಕರಿಗೆ ಕಿರಿಯಾಗುತ್ತಿತ್ತು. ಇದರಿಂದ ಸಾಕಷ್ಟು ಬಾರಿ ಗ್ರಾಹಕರು ವಾಪಸ್ಸು ಹೋಗಿರುವ ಉದಾಹರಣೆಗಳು ಇವೆ. ಆದರೆ, ಪಾಲಿಕೆ ಬಜಾರ್​ನಿಂದ ಗ್ರಾಹಕರು ಪರದಾಡುವುದು ತಪ್ಪುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:05 pm, Mon, 26 August 24

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ