AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಗಮನಕ್ಕೆ! ನೈಋತ್ಯ ರೈಲ್ವೆಯ ನಿರ್ವಹಣೆ ಕಾರಣ ಬೆಂಗಳೂರು-ಮೈಸೂರು ರೈಲುಗಳ ಸಂಚಾರ ಭಾಗಶಃ ರದ್ದು

ನೈಋತ್ಯ ರೈಲ್ವೆಯು ನಿರ್ವಹಣೆ ಕಾರಣಗಳಿಂದಾಗಿ ಈ ಕೆಳಗಿನ ರೈಲುಗಳ ಸಂಚಾರವನ್ನು ರದ್ದುಗೊಳಿಸಿದೆ ಅಥವಾ ಭಾಗಶಃ ಸ್ಥಗಿತಗೊಳಿಸಲಾಗಿದೆ

ಪ್ರಯಾಣಿಕರ ಗಮನಕ್ಕೆ! ನೈಋತ್ಯ ರೈಲ್ವೆಯ ನಿರ್ವಹಣೆ ಕಾರಣ ಬೆಂಗಳೂರು-ಮೈಸೂರು ರೈಲುಗಳ ಸಂಚಾರ ಭಾಗಶಃ ರದ್ದು
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Jul 02, 2022 | 7:10 PM

Share

ಬೆಂಗಳೂರು: ನೈಋತ್ಯ ರೈಲ್ವೆಯ (Southwest Railway) ಎಸ್ ಮತ್ತು ಟಿ ಗೆ ಸಂಬಂಧಿಸಿದ ನಾನ್ಇಂಟರ್‌ಲಾಕಿಂಗ್ ಕೆಲಸಗಳು, ಬಿಡದಿ (Bidadi) ಮತ್ತು ರಾಮನಗರ (Ramnagar) ನಿಲ್ದಾಣಗಳ ಕಾರ್ಯಗಳು ಆರಂಭವಾಗಲಿವೆ. ಜುಲೈ 5, 6 ಮತ್ತು 7 ರಂದು ಲೆವೆಲ್ ಕ್ರಾಸಿಂಗ್ ನಂ. 34 – 35 ರ ಇಂಟರ್‌ಲಾಕಿಂಗ್ ಮತ್ತು ಬಿಡದಿ-ರಾಮನಗರ ನಡುವೆ 120 ಮೀಟರ್ ಲೈನ್ ಬ್ಲಾಕ್ ಕಾರ್ಯ ನಡೆಯುವುದರಿಂದ ಈ ಕೆಳಗಿನ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಅಥವಾ ಭಾಗಶಃ ರದ್ದುಗೊಳಿಸಲಾಗಿದೆ.

ಸಂಚಾರ ರದ್ದಾದ ರೈಲುಗಳು:

1. ರೈಲು ಸಂಖ್ಯೆ 06526 ಮೈಸೂರು-ಕೆಎಸ್ಆರ್ ಬೆಂಗಳೂರು ಮೆಮು ಜುಲೈ 5 ಮತ್ತು 7 ರಂದು ರದ್ದುಗೊಳ್ಳಲಿದೆ 2. ರೈಲು ಸಂಖ್ಯೆ 06559 ಕೆಎಸ್ಆರ್ ಬೆಂಗಳೂರು-ಮೈಸೂರು ಮೆಮು ಜುಲೈ 6 ಮತ್ತು 7 ರಂದು ರದ್ದಗೊಳ್ಳಲಿದೆ

ಭಾಗಶಃ ಸಂಚಾರ ರದ್ದಾದ ರೈಲುಗಳು:

1. ದಿನಾಂಕ ಜುಲೈ 5 ಮತ್ತು 7 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 06255 ಕೆಎಸ್‌ಆರ್ ಬೆಂಗಳೂರು – ಮೈಸೂರು ಮೆಮು ಪ್ರಯಾಣವನ್ನು ಕೆಂಗೇರಿ – ಮೈಸೂರು ನಡುವೆ ಭಾಗಶಃ ರದ್ದುಗೊಳಿಸಲಾಗಿದ್ದು ರೈಲು ಸಂಚಾರವು ಕೆಂಗೇರಿಯಲ್ಲಿ ಕೊನೆಗೊಳ್ಳುತ್ತದೆ.

2. ದಿನಾಂಕ ಜುಲೈ 5 ಮತ್ತು 7 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 06560 ಮೈಸೂರು-ಕೆಎಸ್‌ಆರ್ ಬೆಂಗಳೂರು ಮೆಮು ಮೈಸೂರು-ಕೆಂಗೇರಿ ನಡುವೆ ಭಾಗಶಃ ರದ್ದಾಗಲಿದೆ ಮತ್ತು ನಿಗದಿತ ನಿರ್ಗಮನದ ಸಮಯದಲ್ಲಿ ಕೆಂಗೇರಿಯಿಂದ ಹೊರಟು ಕೆಎಸ್‌ಆರ್ ಬೆಂಗಳೂರನ್ನು ತಲುಪುತ್ತದೆ.

5 ಮತ್ತು 7 ರಂದು ಮೈಸೂರು – ಕೆಎಸ್‌ಆರ್ ಬೆಂಗಳೂರು ಮೆಮು ನಡುವೆ ಮಾತ್ರ ಸಂಚರಿಸುತ್ತದೆ ಎಂದು ನೈಋತ್ಯ ರೈಲ್ವೆ ಇಲಾಖೆ ತಿಳಿಸಿದೆ.

Published On - 6:59 pm, Sat, 2 July 22

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ