AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದ್ದಿಗೋಷ್ಠಿಯಲ್ಲಿ ಕಣ್ಣೀರು ಹಾಕಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ; ಕಾರಣ ಇಲ್ಲಿದೆ

ಕೊವಿಡ್ ನಿಯಮದಂತೆ ಜಂಟಿ ಅಧಿವೇಶನ ನಡೆಯಲಿದೆ. ಪ್ರತಿದಿನ ಹಾಲ್ ಸ್ಯಾನಿಟೈಸ್ ಮಾಡಲಾಗುತ್ತದೆ. ಕೊರೊನಾ ನಿಯಮ ಎಲ್ಲರೂ ಪಾಲನೆ ಮಾಡಬೇಕು. ಮಾಸ್ಕ್ ಕಡ್ಡಾಯವಾಗಿ ಎಲ್ಲರೂ ಧರಿಸಬೇಕು.

ಸುದ್ದಿಗೋಷ್ಠಿಯಲ್ಲಿ ಕಣ್ಣೀರು ಹಾಕಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ; ಕಾರಣ ಇಲ್ಲಿದೆ
ಭಾವುಕರಾದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
TV9 Web
| Edited By: |

Updated on: Feb 12, 2022 | 2:17 PM

Share

ಬೆಂಗಳೂರು: ಚುನಾವಣಾ ಸುಧಾರಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸುವ ವಿಚಾರವಾಗಿ ಮಾತನಾಡುತ್ತಿದ್ದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಮಾಧ್ಯಮಗಳ ಮುಂದೆ ಭಾವುಕರಾಗಿದ್ದಾರೆ. ನಾವು ಸೀಮಿತವಾದ ಚೌಕಟ್ಟಿನಲ್ಲಿ ನಮ್ಮನ್ನು ಕಟ್ಟಿ ಹಾಕಿಕೊಂಡಿದ್ದೇವೆ. ಸೃಷ್ಟಿಯ ಸತ್ಯ ಅರಿತುಕೊಳ್ಳಬೇಕಾಗಿದೆ. ಬ್ರಿಟಿಷ್ ಶಿಕ್ಷಣ ಪದ್ಧತಿಯಿಂದಾಗಿ ಜೀವನದ ಕಲ್ಪನೆಗಳು ಇಲ್ಲದಂತಾಗಿದೆ. ಸಾರ್ಥಕತೆಯ ಭಾವವೇ ಇಲ್ಲದಂತಾಗಿದೆ .ಆ ನಂಬಿಕೆಗಳು ಹಾಗೂ ವಿಶ್ವಾಸ ಬರದೇ ಹೋದಲ್ಲಿ ವ್ಯವಸ್ಥೆ ನಡೆಸಲು ಸಾಧ್ಯವಿಲ್ಲ. ಯಾವ ವ್ಯವಸ್ಥೆಯಲ್ಲಿ ನಾವು ಇದ್ದೇವೋ ಅದನ್ನು ಸರಿಯಾಗಿ ನಡೆಸಬೇಕಾದರೆ ಜ್ಞಾನದ ವಿಸ್ತಾರ ಆಗಬೇಕು. ಆ ಪ್ರಯತ್ನ ನಡೆಯಬೇಕು ಎನ್ನುವಷ್ಟರಲ್ಲಿ ಸ್ಪೀಕರ್ (Speaker) ಕಣ್ಣೀರು ಹಾಕಿದರು.

ಈ ಮೊದಲು ವಿಧಾನಸೌಧದಲ್ಲಿ ಮಾತನಾಡಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸೋಮವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತದೆ.ಈವರೆಗೆ 2 ವಿಧೇಯಕಗಳು ನನ್ನ ಕಚೇರಿಗೆ ಬಂದಿವೆ. ಕರ್ನಾಟಕ ಕ್ರಿಮಿನಲ್ ತಿದ್ದುಪಡಿ ವಿಧೇಯಕ, ಕರ್ನಾಟಕ ಸ್ಟ್ಯಾಂಪ್ ವಿಧೇಯಕ ನನ್ನ ಕಚೇರಿಗೆ ಬಂದಿದೆ. ಇಲ್ಲಿಯವರೆಗೆ 2 ಸಾವಿರಕ್ಕೂ ಹೆಚ್ಚು ಪ್ರಶ್ನೆಗಳು ಬಂದಿವೆ. ಕೊವಿಡ್ ನಿಯಮದಂತೆ ಜಂಟಿ ಅಧಿವೇಶನ ನಡೆಯಲಿದೆ ಅಂತ ತಿಳಿಸಿದರು.

ಕೊವಿಡ್ ನಿಯಮದಂತೆ ಜಂಟಿ ಅಧಿವೇಶನ ನಡೆಯಲಿದೆ. ಪ್ರತಿದಿನ ಹಾಲ್ ಸ್ಯಾನಿಟೈಸ್ ಮಾಡಲಾಗುತ್ತದೆ. ಕೊರೊನಾ ನಿಯಮ ಎಲ್ಲರೂ ಪಾಲನೆ ಮಾಡಬೇಕು. ಮಾಸ್ಕ್ ಕಡ್ಡಾಯವಾಗಿ ಎಲ್ಲರೂ ಧರಿಸಬೇಕು. ಈ ಬಾರಿಯ ಜಂಟಿ ಅಧಿವೇಶನಕ್ಕೆ ಸಾರ್ವಜನಿಕರಿಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕಾಗೇರಿ ಹೇಳಿದ್ದಾರೆ.

ಈ ವೇಳೆ ಹಿಜಾಬ್ ವಿವಾದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾಡಿನ ಜನತೆಯಲ್ಲಿ ವಿದ್ಯಾರ್ಥಿಗಳಲ್ಲಿ ನಾನು ವಿನಂತಿ ಮಾಡಿಕೊಳ್ಳುತ್ತೇನೆ. ಕೋರ್ಟ್ ಮಧ್ಯಂತರ ತೀರ್ಪು ಕೊಟ್ಟಿದೆ. ನಾವು ನ್ಯಾಯಾಂಗದ ಮೇಲೆ ನಂಬಿಕೆ ಇಟ್ಟು ಗೌರವಿಸಬೇಕು. ಕೋರ್ಟ್ ಏನು ಮಧ್ಯಂತರ ತೀರ್ಪು ನೀಡಿದೆಯೋ ಅದನ್ನು ನಾವು ಗೌರವಿಸೋಣ. ಈ ಪರಿಸ್ಥಿತಿಯಲ್ಲಿ ದುರುಪಯೋಗ ಪಡಿಸಿಕೊಳ್ಳುವ ಕೆಲಸವಾಗುತ್ತದೆ. ಆದರೆ ಇದಕ್ಕೆ ಅವಕಾಶ ನೀಡದೆ ಕೋರ್ಟ್ ತೀರ್ಪು ಗೌರವಿಸೋಣ ಅಂತ ಹೇಳಿದರು.

ಇದನ್ನೂ ಓದಿ

ತೆಲುಗು ಚಿತ್ರರಂಗದ ಡ್ರಗ್ಸ್​ ಕೇಸ್​ಗೆ ಸಿಕ್ತು ಟ್ವಿಸ್ಟ್​; ಸ್ಟಾರ್ ನಟ-ನಟಿಯರಿಗೆ ಮತ್ತೆ ಸಂಕಷ್ಟ ಶುರು

ಫೈಟಿಂಗ್​ ದೃಶ್ಯದ ಶೂಟಿಂಗ್​ ವೇಳೆ ವಿಶಾಲ್​ಗೆ ಗಾಯ; ಘಟನೆ ಬಗ್ಗೆ ವಿಡಿಯೋ ಸಮೇತ ವಿವರಿಸಿದ​ ನಟ

ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ