Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಗೆಲುವಿಗಾಗಿ ಶಿವಾಜಿನಗರದ ಗಣಪತಿ ದೇವಾಲಯದಲ್ಲಿ ಹಿಂದೂ, ಮುಸ್ಲಿಂ ಕ್ರಿಶ್ಚಿಯನ್ನರಿಂದ ವಿಶೇಷ ಪೂಜೆ

ಬೆಂಗಳೂರಿನ ಶಿವಾಜಿನಗರದ ಗಣಪತಿ ದೇವಾಲಯದಲ್ಲಿ ಹಿಂದೂ, ಮುಸ್ಲಿಂ ಕ್ರಿಶ್ಚಿಯನ್ನರು ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ ರಾಷ್ಟ್ರಧ್ವಜ ವಿಡಿದು ಭಾವೈಕ್ಯತೆಯ ಹೂವಿನ ಅರ್ಚನೆ ಮಾಡಿದ್ದಾರೆ. ವಲ್ಡ್ ಕಪ್ ಮ್ಯಾಚ್​ನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ ಗೆಲ್ಲಲ್ಲಿ ಎಂದು ನಮ್ಮ ಕರ್ನಾಟಕ ಸೇನೆಯ ಕಾರ್ಯಕರ್ತರು, ಮಹಿಳೆಯರು, ಕ್ರೀಡಾ ಅಭಿಮಾನಿಗಳು ಸೇರಿದಂತೆ ಎಲ್ಲಾ ಧರ್ಮದ ಅಭಿಮಾನಿಗಳು ವಿಘ್ನ ವಿನಾಯಕನಿಗೆ ಪೂಜೆ ಮೂಲಕ ಪ್ರಾರ್ಥನೆ ಸಲ್ಲಿಸಿದ್ದಾರೆ.

ಭಾರತದ ಗೆಲುವಿಗಾಗಿ ಶಿವಾಜಿನಗರದ ಗಣಪತಿ ದೇವಾಲಯದಲ್ಲಿ ಹಿಂದೂ, ಮುಸ್ಲಿಂ ಕ್ರಿಶ್ಚಿಯನ್ನರಿಂದ ವಿಶೇಷ ಪೂಜೆ
ಗಣಪತಿ ದೇವಾಲಯದಲ್ಲಿ ಹಿಂದೂ, ಮುಸ್ಲಿಂ ಕ್ರಿಶ್ಚಿಯನ್ನರಿಂದ ವಿಶೇಷ ಪೂಜೆ
Follow us
Kiran Surya
| Updated By: ಆಯೇಷಾ ಬಾನು

Updated on: Nov 19, 2023 | 2:06 PM

ಬೆಂಗಳೂರು, ನ.19: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ವಿಶ್ವಕಪ್ 2023ರ ಫೈನಲ್ ಪಂದ್ಯಾವಳಿ (India vs Australia, WC Final) ಇಂದು ಮಧ್ಯಾಹ್ನ ಆರಂಭವಾಗಲಿದೆ. ಹೀಗಾಗಿ ಇಡೀ ವಿಶ್ವದಲ್ಲಿ ಕ್ರಿಕೆಟ್ ಪ್ರೇಮಿಗಳು ಪಂದ್ಯ ಕಣ್ತುಂಬಿಕೊಳ್ಳಲು ಕಾತರದಿಂದ ಕಾಯುತ್ತಿದ್ದಾರೆ. ಜೊತೆಗೆ ಭಾರತ (India) ಗೆದ್ದು ಬರಲಿ ಎಂದು ಎಲ್ಲೆಡೆ ಪೂಜೆ, ಹೋಮಗಳು ನಡೆಯುತ್ತಿವೆ. ಇನ್ನು ವಿಶೇಷವೆಂದರೆ ಜಾತಿ, ಧರ್ಮವನ್ನು ಮೀರಿ ಭಾರತ ತಂಡದ ಗೆಲುವಿಗಾಗಿ ಎಲ್ಲಾರು ಒಟ್ಟಾಗಿ ಸೇರಿ ಪೂಜೆ ಮಾಡಿದ್ದಾರೆ. ಹೌದು ಬೆಂಗಳೂರಿನ ಶಿವಾಜಿನಗರದ ಗಣಪತಿ ದೇವಾಲಯದಲ್ಲಿ ಹಿಂದೂ, ಮುಸ್ಲಿಂ ಕ್ರಿಶ್ಚಿಯನ್ನರು ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ ರಾಷ್ಟ್ರಧ್ವಜ ವಿಡಿದು ಭಾವೈಕ್ಯತೆಯ ಹೂವಿನ ಅರ್ಚನೆ ಮಾಡಿದ್ದಾರೆ.

ವಲ್ಡ್ ಕಪ್ ಮ್ಯಾಚ್​ನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ ಗೆಲ್ಲಲ್ಲಿ ಎಂದು ನಮ್ಮ ಕರ್ನಾಟಕ ಸೇನೆಯ ಕಾರ್ಯಕರ್ತರು, ಮಹಿಳೆಯರು, ಕ್ರೀಡಾ ಅಭಿಮಾನಿಗಳು ಸೇರಿದಂತೆ ಎಲ್ಲಾ ಧರ್ಮದ ಅಭಿಮಾನಿಗಳು ವಿಘ್ನ ವಿನಾಯಕನಿಗೆ ಪೂಜೆ ಮೂಲಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಮುಸ್ಲಿಂ ಮಹಿಳೆಯರು ಪೂಜೆಯಲ್ಲಿ ಭಾಗಿಯಾಗಿ ಪ್ರಾರ್ಥಿಸಿದ್ದಾರೆ. ದೇವರ ಮುಂದೆ ಕ್ರಿಕೆಟ್ ಬ್ಯಾಟ್ ಬಾಲ್ ಇಟ್ಟು ಪೂಜೆ ಸಲ್ಲಿಸಿದ್ದಾರೆ. ವಿನಾಯಕನಿಗೆ ಸಿಹಿ ನೈವೇದ್ಯ ವಿಟ್ಟು, ಕುಂಬಳಕಾಯಿ, ತೆಂಗಿನಕಾಯಿ ಹೊಡೆದು ಆಟಗಾರರಿಗೆ ಶಕ್ತಿ ನೀಡಲಿ ಎಂದು ಕೋರಿದ್ದಾರೆ.

ಇನ್ನು ಇದರ ಜೊತೆಗೆ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಕೂಡ ಗಣಪತಿ ಪೂಜೆಯಲ್ಲಿ ಭಾಗಿಯಾಗಿದ್ರು. ಭಾರತ ತಂಡದ ಆಟಗಾರರ ಭಾವಚಿತ್ರಕ್ಕೆ ಕುಂಬಳಕಾಯಿ, ತೆಂಗಿನಕಾಯಿಯಿಂದ ದೃಷ್ಟಿ ತೆಗೆದು ಭಕ್ತರಿಗೆ ಸಿಹಿ ಹಂಚಿ ಭಾರತ ತಂಡವು ಇಂದು ಮ್ಯಾಚ್ ಗೆಲ್ಲಬೇಕೆಂದು ಶುಭ ಹಾರೈಸಿದರು.

ಇದನ್ನೂ ಓದಿ: IND vs AUS Final: ಮಂಗಳೂರು ಕಲಾವಿದನ ಕೈಯಲ್ಲಿ ಮೂಡಿದ ಚಿನ್ನದ ವಿಶ್ವಕಪ್ ​​​

ಇಂಡಿಯಾ ಗೆಲುವಿಗಾಗಿ ಶುಭಕೋರಿದ ನವ ಜೋಡಿ

ಮತ್ತೊಂದೆಡೆ ಚಿಕ್ಕಮಗಳೂರು ನಗರದ ಅರಸು ಕಲ್ಯಾಣ ಮಂಟಪದಲ್ಲಿ ನವ ಜೋಡಿ ಇಂಡೋ ಆಸೀಸ್ ಹೈ ವೋಲ್ಟೇಜ್ ವರ್ಲ್ಡ್ ಕಪ್ ಮ್ಯಾಚ್​ಗೆ ಶುಭ ಹಾರೈಸಿದ್ದಾರೆ.  ಸಂತೋಷ , ಅರ್ಪಿತಾ ಮದುವೆ ಮಂಟಪದಲ್ಲಿ ನಿಂತು ಟೀಮ್ ಇಂಡಿಯಾಗೆ ಶುಭಕೋರಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ