AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಅಪಘಾತ ತಪ್ಪಿಸಲು ಬಿಎಂಟಿಸಿ ಬಸ್​ ಚಾಲಕರಿಗೆ ವಿಶೇಷ ತರಬೇತಿ

ಬೆಂಗಳೂರಿನಲ್ಲಿ ಇತ್ತೀಚಿಗೆ ಬಿಎಂಟಿಸಿ ಬಸ್​ಗಳೇ ಹೆಚ್ಚು ಅಪಘಾತಕ್ಕೆ ಒಳಗಾಗುತ್ತಿವೆ. ಇದನ್ನು ತಡೆಯಲು ಸಾರಿಗೆ ಹಲವು ಕ್ರಮಗಳನ್ನು ಕೈಗೊಂಡಿದೆ. ಆದರೂ ಕೂಡ ಅಪಘಾತ ಕಡಿಮೆಯಾಗಿಲ್ಲ. ಇದೀಗ ಇಲಾಖೆ ಹೊಸದೊಂದು ಪ್ರಯೋಗಕ್ಕೆ ಕೈ ಹಾಕಿದೆ. ಏನದು ಪ್ರಯೋಗ? ಇಲ್ಲಿದೆ ಮಾಹಿತಿ

Bengaluru: ಅಪಘಾತ ತಪ್ಪಿಸಲು ಬಿಎಂಟಿಸಿ ಬಸ್​ ಚಾಲಕರಿಗೆ ವಿಶೇಷ ತರಬೇತಿ
ಚಾಲಕರಿಗೆ ವಿಶೇಷ ತರಬೇತಿ
Kiran Surya
| Edited By: |

Updated on: Jun 02, 2024 | 8:16 AM

Share

ಬೆಂಗಳೂರು, ಜೂನ್​ 02: ಬೃಹತ್ ಬೆಂಗಳೂರು ಮಹಾನಗರ ಸಾರಿಗೆ (BMTC) ಅಂದರೆ ನಂಬಿಕೆ, ಬಿಎಂಟಿಸಿ ಬೆಂಗಳೂರಿಗರ (Bengaluru) ಹಾರ್ಟ್​​ ಫೇವರೇಟ್. ಆದರೆ ಇತ್ತೀಚಿನ ದಿನಗಳಲ್ಲಿ ಬಿಎಂಟಿಸಿ ಅಂದರೆ ವಾಹನ ಸವಾರರು ಭಯ ಬೀಳುತ್ತಿದ್ದಾರೆ. ಇದಕ್ಕೆ ಕಾರಣ ಬಿಎಂಟಿಸಿ ಬಸ್​ಗಳಿಂದ ಆಗುತ್ತಿರುವ ಅಪಘಾತಗಳು. ಇದನ್ನು ತಪ್ಪಿಸಲು ಬಿಎಂಟಿಸಿ ಬಸ್​ ಚಾಲಕರಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ.

ನಗರದಲ್ಲಿ ಆಗುತ್ತಿರುವ ಅಪಘಾತಗಳನ್ನು ತಪ್ಪಿಸಲು ಬಿಎಂಟಿಸಿ ಸಿಮ್ಯುಲೇಟರ್‌ ಮೂಲಕ ಚಾಲಕರಿಗೆ ವಿಶೇಷ ತರಬೇತಿಯನ್ನು ನೀಡಲಾಗುತ್ತಿದೆ. ಇದು ಬಸ್‌ ಚಲಾಯಿಸಿದ ಅನುಭವವನ್ನೇ ನೀಡುವ ಡಿಜಿಟಲ್ ವ್ಯವಸ್ಥೆಯ ಸುಸಜ್ಜಿತ ಹವಾನಿಯಂತ್ರಿತ ಕೊಠಡಿ ಹೊಂದಿರುವ ಯಂತ್ರವಾಗಿದೆ. ಈ ಸಿಮ್ಯುಲೇಟರ್‌ ಯಂತ್ರ ಬಿಎಂಟಿಸಿಯ ವಡ್ಡರಹಳ್ಳಿ ಚಾಲಕರ ತರಬೇತಿ ಕೇಂದ್ರದಲ್ಲಿದೆ. ಬಸ್ ಮಾದರಿಯಲ್ಲಿಯೇ ಚಕ್ರ, ಸೀಟು, ಸೀಟ್ ಬೆಲ್ಟ್, ಆಯಕ್ಸಿಲೇಟರ್, ಬ್ರೇಕ್, ಕ್ಲಚ್ ಹೊಂದಿದ್ದು ಎದುರಿಗೆ ಎಲ್.ಇ.ಡಿ ಸ್ಕ್ರೀನ್‌ ಇರುತ್ತದೆ.

ಇದನ್ನೂ ಓದಿ: ಬಿಎಂಟಿಸಿ ಎಲೆಕ್ಟ್ರಿಕ್ ಬಸ್​ಗಳಿಗೆ ಕೇರಳದ ಮಲಯಾಳಿ ಹುಡುಗರೀಗ ಚಾಲಕರು! ಕನ್ನಡ ಬಾರದವರ ಜತೆ ಕಂಡಕ್ಟರ್​ಗಳು ಕಂಗಾಲು

ಸಿಮ್ಯುಲೇಟರ್​ನಲ್ಲಿ ರಸ್ತೆ ಮೇಲೆ ಬಸ್‌ ಚಲಾಯಿಸಿದ ಅನುಭವ ಆಗುತ್ತದೆ. ದಿಣ್ಣೆಗಳನ್ನು ಏರುವಾಗ, ಇಳಿಯುವಾಗ, ತಿರುವುಗಳಲ್ಲಿ ಹೇಗೆ ವಾಹನ ಚಲಾಯಿಸಬೇಕು ಅತಿ ವಾಹನ ದಟ್ಟಣೆ ಇರುವ ಬೆಂಗಳೂರಿನಂತಹ ನಗರದಲ್ಲಿ ಹಿಂದೆ ಮುಂದೆ ವಾಹನಗಳು ಇರುವಾಗ ಹೇಗೆ ಚಾಲನೆ ಮಾಡಬೇಕು? ಎಂಬುದನ್ನೆಲ್ಲ ಹೇಳಿ ಕೊಡಲಾಗುತ್ತದೆ. ಚಾಲನಾ ಸೂಚನೆಗಳನ್ನು ಕಡ್ಡಾಯವಾಗಿ ಪಾಲನೆ ಮಾಡಿಸಲಾಗುತ್ತದೆ.

ವಿಶೇಷತ ತರಬೇತಿ ಕೇಂದ್ರ

ಮೊದಲಿಗೆ ಚಾಲಕರಿಗೆ ಕೈ ಮೂಲಕ ನೀಡಬೇಕಾದ ಸೂಚನೆಗಳ ಬಗ್ಗೆ, ಸಂಚಾರ ಮಾರ್ಗದಲ್ಲಿ ಅಲ್ಲಲ್ಲಿ ಅಳವಡಿಸಿರುವ ಚಿಹ್ನೆಗಳ ಮಾಹಿತಿ, ಕ್ಲಚ್‌, ಗೇರ್‌, ಬ್ರೇಕ್‌, ಆಯಕ್ಸಿಲೇಟರ್‌ಗಳ ಬಗ್ಗೆ ತಜ್ಞರು ಹೇಳಿಕೊಡುತ್ತಾರೆ. ಬಳಿಕ ಸಿಮ್ಯುಲೇಟರ್‌ ಕೊಠಡಿಯಲ್ಲಿ ಚಾಲನೆ ಕಲಿಸುತ್ತಾರೆ. ನಂತರ ಬಸ್​ಗಳಲ್ಲೂ ತರಬೇತಿ ನೀಡುತ್ತಾರೆ. ಇಂಧನ ಉಳಿತಾಯ ಮಾಡಬೇಕಿದ್ದರೆ ಆಕ್ಸಿಲೇಟರ್‌ ಹೇಗೆ ಬಳಸಬೇಕು, ಕ್ಲಚ್‌, ಗೇರ್‌ಗಳನ್ನು ಹೇಗೆ ಬಳಸಿದರೆ ಇಂಧನ ಉಳಿಸಬಹುದು ಎಂಬುದನ್ನು ಕೂಡ ತಜ್ಞರು ಹೇಳಿಕೊಡುತ್ತಾರೆ. ಸೀಟ್‌ಬೆಲ್ಟ್‌ನಿಂದ ಹಿಡಿದು ಎಲ್ಲ ನಿಯಮಗಳನ್ನು ಪಾಲಿಸದಿದ್ದರೆ ಈ ಯಂತ್ರ ಚಾಲನೆಯಾಗುವುದಿಲ್ಲ. ಆನಂತರವೂ ಸಣ್ಣ ತಪ್ಪಾದರೂ ಗುರುತು ಆಗುವುದರಿಂದ ತಿದ್ದಿಕೊಳ್ಳಲು ಸುಲಭವಾಗುತ್ತದೆ. ಹೊಸಬರಿಗೆ ಮತ್ತು ಚಾಲನೆಯಲ್ಲಿ ಪದೇ ಪದೇ ತಪ್ಪು ಮಾಡುವವರಿಗೂ ‘ಸಿಮ್ಯುಲೇಟರ್‌’ ಡಿಜಿಟಲ್‌ ಯಂತ್ರದಲ್ಲಿ ತರಬೇತಿ ನೀಡಲಾಗುತ್ತದೆ ಎಂದು ಬಿಎಂಟಿಸಿ ಡ್ರೈವಿಂಗ್ ಸ್ಕೂಲ್ ಸೂಪರ್ವೈಸರ್ ಮಧು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು