AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲಕರಿಗೆ ವಿಶೇಷ ತರಬೇತಿ: ಬಿಎಂಟಿಸಿ ಬಸ್​ ಅಪಘಾತ ಸಂಖ್ಯೆ ಇಳಿಕೆ

ಬಿಎಂಟಿಸಿ ಬಸ್​ನಿಂದ ಸಂಭವಿಸುವ ಅಪಘಾತ ನಿಯಂತ್ರಿಸಲು ಬೆಂಗಳೂರು ಟ್ರಾಫಿಕ್​ ಪೊಲೀಸರು ಚಾಲಕರಿಗೆ ಕಳೆದ 6 ತಿಂಗಳಿನಿಂದ ವಿಶೇಷ ತರಬೇತಿ ನೀಡಲು ಆರಂಭಿಸಿದ್ದಾರೆ. ಪ್ರತಿದಿನ 50 ಜನರಂತೆ 12 ಸಾವಿರ ಬಿಎಂಟಿಸಿ ಬಸ್​ ಚಾಲಕರಿಗೂ ತರಬೇತಿ ನೀಡಲಾಗುತ್ತಿದೆ. ಈಗಾಗಲೇ ಸುಮಾರು 8 ಸಾವಿರ ಚಾಲಕರಿಗೆ ತರಬೇತಿ ನೀಡಲಾಗಿದೆ.

ಚಾಲಕರಿಗೆ ವಿಶೇಷ ತರಬೇತಿ: ಬಿಎಂಟಿಸಿ ಬಸ್​ ಅಪಘಾತ ಸಂಖ್ಯೆ ಇಳಿಕೆ
ಬಿಎಂಟಿಸಿ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ವಿವೇಕ ಬಿರಾದಾರ|

Updated on: Jul 30, 2024 | 12:16 PM

Share

ಬೆಂಗಳೂರು, ಜುಲೈ 30: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್​ಗಳಿಂದ ಸಂಭವಿಸುತ್ತಿರುವ ಅಪಘಾತಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ಚಾಲಕರಿಗೆ ನೀಡಿದ ವಿಶೇಷ ತರಬೇತಿ ಫಲಕಾರಿಯಾಗಿದೆ. ಬಿಎಂಟಿಸಿ ಬಸ್​ಗಳಿಂದ ಸಂಭವಿಸುತ್ತಿದ್ದ ಅಪಘಾತ ಸಂಖ್ಯೆ ಕಡಿಮೆಯಾಗಿದೆ. ಕಳೆದ ಮೂರು ವರ್ಷಕ್ಕೆ ಹೋಲಿಕೆ ಮಾಡಿದರೆ, 2024ರಲ್ಲಿ ಇಲ್ಲಿಯವರೆಗೆ ಕೇವಲ ನಾಲ್ಕು ಅಪಘಾತಗಳು ಸಂಭವಿಸಿವೆ. ಈ ಮೂಲಕ ಬೆಂಗಳೂರು ಟ್ರಾಫಿಕ್​ ಪೊಲೀಸರ ಶ್ರಮಕ್ಕೆ ಫಲ ಸಿಕ್ಕಿದೆ. ಬಿಎಂಟಿಸಿ ಬಸ್​ ಚಾಲಕರು ಮತ್ತು ನಿರ್ವಾಹಕರು ಪ್ರತಿದಿನ 12 ಗಂಟೆ ಕೆಲಸ ಮಾಡುತ್ತಾರೆ. ಟ್ರಾಫಿಕ್​ ನಡುವೆ 12 ಗಂಟೆ ಕೆಲಸ ಮಾಡಿ ಚಾಲಕರು ದೈಹಿಕ ಮತ್ತು ಮಾನಸಿಕವಾಗಿ ದಣಿದಿರುತ್ತಾರೆ. ಇದರಿಂದ ತಿರುವುಗಳಲ್ಲಿ ಮತ್ತು ಜನ ದಟ್ಟಣೆ ಇರುವ ಸ್ಥಳದಲ್ಲಿ ಅಪಘಾತ ಸಂಭವಿಸುತ್ತಿದ್ದವು.

ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬೆಂಗಳೂರು ಟ್ರಾಫಿಕ್​ ಪೊಲೀಸರು ಬಿಎಂಟಿಸಿ ಬಸ್​ ಚಾಲಕರಿಗೆ ಕಳೆದ 6 ತಿಂಗಳಿನಿಂದ ತರಬೇತಿ ನೀಡಲು ಆರಂಭಿಸಿದ್ದಾರೆ. ಪ್ರತಿದಿನ 50 ಜನರಂತೆ 12 ಸಾವಿರ ಬಿಎಂಟಿಸಿ ಬಸ್​ ಚಾಲಕರಿಗೂ ತರಬೇತಿ ನೀಡಲಾಗುತ್ತಿದೆ. ಈಗಾಗಲೇ ಸುಮಾರು 8 ಸಾವಿರ ಚಾಲಕರಿಗೆ ತರಬೇತಿ ನೀಡಲಾಗಿದೆ.

ಇದನ್ನೂ ಓದಿ: ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ, ನೌಕರರಿಗೆ ಒಂದು ಕೋಟಿ ಪರಿಹಾರ

ಹಾಗಾದರೆ ಬಿಎಂಟಿಸಿ ಚಾಲಕರಿಗೆ ಯಾವ ರೀತಿ ತರಬೇತಿ ನೀಡಲಾಗುತ್ತದೆ?

  • ಸುರಕ್ಷಿತವಾಗಿ ವಾಹನ ಚಾಲನೆ ಮಾಡುವುದು ಹೇಗೆ ?
  • ಡಿಫೆನ್ಸಿವ್ ಡ್ರೈವಿಂಗ್.
  • ಟ್ರಾಫಿಕ್ ರೂಲ್ಸ್ ಫಾಲೊ ಮಾಡುವುದು.
  • ಕ್ಯಾಮೆರಾಗಳು ಹೇಗೆ ಟ್ರಾಫಿಕ್ ಉಲ್ಲಂಘನೆಗಳನ್ನ ದಾಖಲಿಸುತ್ತವೆ.
  • ಡ್ರೈವರ್ & ಕಂಡಕ್ಟರ್ ಹೇಗೆ ಸಂಚಾರ ಪೊಲೀಸರಿಗೆ ಸಹಕರಿಸಬೇಕು.
  • ಅಪಘಾತಕ್ಕೆ ಕಾರಣಗಳು ಏನೇನು.
  • ಮಕ್ಕಳು, ಮಹಿಳೆಯರನ್ನು ಹೇಗೆ ಸುರಕ್ಷಿತವಾಗಿರಿಸಬೇಕು.

ಕಳೆದ 3 ವರ್ಷದಲ್ಲಿ ಸಂಭವಿಸಿದ ಅಪಘಾತಗಳು

2021ರಲ್ಲಿ 27, 2022ರಲ್ಲಿ 33, 2023ರಲ್ಲಿ 35 ಮತ್ತು 2024ರಲ್ಲಿ ಇಲ್ಲಿಯವರೆಗೆ 04 ಅಪಘಾತಗಳು ಸಂಭವಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು