AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲಕರಿಗೆ ವಿಶೇಷ ತರಬೇತಿ: ಬಿಎಂಟಿಸಿ ಬಸ್​ ಅಪಘಾತ ಸಂಖ್ಯೆ ಇಳಿಕೆ

ಬಿಎಂಟಿಸಿ ಬಸ್​ನಿಂದ ಸಂಭವಿಸುವ ಅಪಘಾತ ನಿಯಂತ್ರಿಸಲು ಬೆಂಗಳೂರು ಟ್ರಾಫಿಕ್​ ಪೊಲೀಸರು ಚಾಲಕರಿಗೆ ಕಳೆದ 6 ತಿಂಗಳಿನಿಂದ ವಿಶೇಷ ತರಬೇತಿ ನೀಡಲು ಆರಂಭಿಸಿದ್ದಾರೆ. ಪ್ರತಿದಿನ 50 ಜನರಂತೆ 12 ಸಾವಿರ ಬಿಎಂಟಿಸಿ ಬಸ್​ ಚಾಲಕರಿಗೂ ತರಬೇತಿ ನೀಡಲಾಗುತ್ತಿದೆ. ಈಗಾಗಲೇ ಸುಮಾರು 8 ಸಾವಿರ ಚಾಲಕರಿಗೆ ತರಬೇತಿ ನೀಡಲಾಗಿದೆ.

ಚಾಲಕರಿಗೆ ವಿಶೇಷ ತರಬೇತಿ: ಬಿಎಂಟಿಸಿ ಬಸ್​ ಅಪಘಾತ ಸಂಖ್ಯೆ ಇಳಿಕೆ
ಬಿಎಂಟಿಸಿ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ವಿವೇಕ ಬಿರಾದಾರ|

Updated on: Jul 30, 2024 | 12:16 PM

Share

ಬೆಂಗಳೂರು, ಜುಲೈ 30: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್​ಗಳಿಂದ ಸಂಭವಿಸುತ್ತಿರುವ ಅಪಘಾತಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ಚಾಲಕರಿಗೆ ನೀಡಿದ ವಿಶೇಷ ತರಬೇತಿ ಫಲಕಾರಿಯಾಗಿದೆ. ಬಿಎಂಟಿಸಿ ಬಸ್​ಗಳಿಂದ ಸಂಭವಿಸುತ್ತಿದ್ದ ಅಪಘಾತ ಸಂಖ್ಯೆ ಕಡಿಮೆಯಾಗಿದೆ. ಕಳೆದ ಮೂರು ವರ್ಷಕ್ಕೆ ಹೋಲಿಕೆ ಮಾಡಿದರೆ, 2024ರಲ್ಲಿ ಇಲ್ಲಿಯವರೆಗೆ ಕೇವಲ ನಾಲ್ಕು ಅಪಘಾತಗಳು ಸಂಭವಿಸಿವೆ. ಈ ಮೂಲಕ ಬೆಂಗಳೂರು ಟ್ರಾಫಿಕ್​ ಪೊಲೀಸರ ಶ್ರಮಕ್ಕೆ ಫಲ ಸಿಕ್ಕಿದೆ. ಬಿಎಂಟಿಸಿ ಬಸ್​ ಚಾಲಕರು ಮತ್ತು ನಿರ್ವಾಹಕರು ಪ್ರತಿದಿನ 12 ಗಂಟೆ ಕೆಲಸ ಮಾಡುತ್ತಾರೆ. ಟ್ರಾಫಿಕ್​ ನಡುವೆ 12 ಗಂಟೆ ಕೆಲಸ ಮಾಡಿ ಚಾಲಕರು ದೈಹಿಕ ಮತ್ತು ಮಾನಸಿಕವಾಗಿ ದಣಿದಿರುತ್ತಾರೆ. ಇದರಿಂದ ತಿರುವುಗಳಲ್ಲಿ ಮತ್ತು ಜನ ದಟ್ಟಣೆ ಇರುವ ಸ್ಥಳದಲ್ಲಿ ಅಪಘಾತ ಸಂಭವಿಸುತ್ತಿದ್ದವು.

ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬೆಂಗಳೂರು ಟ್ರಾಫಿಕ್​ ಪೊಲೀಸರು ಬಿಎಂಟಿಸಿ ಬಸ್​ ಚಾಲಕರಿಗೆ ಕಳೆದ 6 ತಿಂಗಳಿನಿಂದ ತರಬೇತಿ ನೀಡಲು ಆರಂಭಿಸಿದ್ದಾರೆ. ಪ್ರತಿದಿನ 50 ಜನರಂತೆ 12 ಸಾವಿರ ಬಿಎಂಟಿಸಿ ಬಸ್​ ಚಾಲಕರಿಗೂ ತರಬೇತಿ ನೀಡಲಾಗುತ್ತಿದೆ. ಈಗಾಗಲೇ ಸುಮಾರು 8 ಸಾವಿರ ಚಾಲಕರಿಗೆ ತರಬೇತಿ ನೀಡಲಾಗಿದೆ.

ಇದನ್ನೂ ಓದಿ: ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ, ನೌಕರರಿಗೆ ಒಂದು ಕೋಟಿ ಪರಿಹಾರ

ಹಾಗಾದರೆ ಬಿಎಂಟಿಸಿ ಚಾಲಕರಿಗೆ ಯಾವ ರೀತಿ ತರಬೇತಿ ನೀಡಲಾಗುತ್ತದೆ?

  • ಸುರಕ್ಷಿತವಾಗಿ ವಾಹನ ಚಾಲನೆ ಮಾಡುವುದು ಹೇಗೆ ?
  • ಡಿಫೆನ್ಸಿವ್ ಡ್ರೈವಿಂಗ್.
  • ಟ್ರಾಫಿಕ್ ರೂಲ್ಸ್ ಫಾಲೊ ಮಾಡುವುದು.
  • ಕ್ಯಾಮೆರಾಗಳು ಹೇಗೆ ಟ್ರಾಫಿಕ್ ಉಲ್ಲಂಘನೆಗಳನ್ನ ದಾಖಲಿಸುತ್ತವೆ.
  • ಡ್ರೈವರ್ & ಕಂಡಕ್ಟರ್ ಹೇಗೆ ಸಂಚಾರ ಪೊಲೀಸರಿಗೆ ಸಹಕರಿಸಬೇಕು.
  • ಅಪಘಾತಕ್ಕೆ ಕಾರಣಗಳು ಏನೇನು.
  • ಮಕ್ಕಳು, ಮಹಿಳೆಯರನ್ನು ಹೇಗೆ ಸುರಕ್ಷಿತವಾಗಿರಿಸಬೇಕು.

ಕಳೆದ 3 ವರ್ಷದಲ್ಲಿ ಸಂಭವಿಸಿದ ಅಪಘಾತಗಳು

2021ರಲ್ಲಿ 27, 2022ರಲ್ಲಿ 33, 2023ರಲ್ಲಿ 35 ಮತ್ತು 2024ರಲ್ಲಿ ಇಲ್ಲಿಯವರೆಗೆ 04 ಅಪಘಾತಗಳು ಸಂಭವಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ