AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲಕರಿಗೆ ವಿಶೇಷ ತರಬೇತಿ: ಬಿಎಂಟಿಸಿ ಬಸ್​ ಅಪಘಾತ ಸಂಖ್ಯೆ ಇಳಿಕೆ

ಬಿಎಂಟಿಸಿ ಬಸ್​ನಿಂದ ಸಂಭವಿಸುವ ಅಪಘಾತ ನಿಯಂತ್ರಿಸಲು ಬೆಂಗಳೂರು ಟ್ರಾಫಿಕ್​ ಪೊಲೀಸರು ಚಾಲಕರಿಗೆ ಕಳೆದ 6 ತಿಂಗಳಿನಿಂದ ವಿಶೇಷ ತರಬೇತಿ ನೀಡಲು ಆರಂಭಿಸಿದ್ದಾರೆ. ಪ್ರತಿದಿನ 50 ಜನರಂತೆ 12 ಸಾವಿರ ಬಿಎಂಟಿಸಿ ಬಸ್​ ಚಾಲಕರಿಗೂ ತರಬೇತಿ ನೀಡಲಾಗುತ್ತಿದೆ. ಈಗಾಗಲೇ ಸುಮಾರು 8 ಸಾವಿರ ಚಾಲಕರಿಗೆ ತರಬೇತಿ ನೀಡಲಾಗಿದೆ.

ಚಾಲಕರಿಗೆ ವಿಶೇಷ ತರಬೇತಿ: ಬಿಎಂಟಿಸಿ ಬಸ್​ ಅಪಘಾತ ಸಂಖ್ಯೆ ಇಳಿಕೆ
ಬಿಎಂಟಿಸಿ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Jul 30, 2024 | 12:16 PM

Share

ಬೆಂಗಳೂರು, ಜುಲೈ 30: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್​ಗಳಿಂದ ಸಂಭವಿಸುತ್ತಿರುವ ಅಪಘಾತಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ಚಾಲಕರಿಗೆ ನೀಡಿದ ವಿಶೇಷ ತರಬೇತಿ ಫಲಕಾರಿಯಾಗಿದೆ. ಬಿಎಂಟಿಸಿ ಬಸ್​ಗಳಿಂದ ಸಂಭವಿಸುತ್ತಿದ್ದ ಅಪಘಾತ ಸಂಖ್ಯೆ ಕಡಿಮೆಯಾಗಿದೆ. ಕಳೆದ ಮೂರು ವರ್ಷಕ್ಕೆ ಹೋಲಿಕೆ ಮಾಡಿದರೆ, 2024ರಲ್ಲಿ ಇಲ್ಲಿಯವರೆಗೆ ಕೇವಲ ನಾಲ್ಕು ಅಪಘಾತಗಳು ಸಂಭವಿಸಿವೆ. ಈ ಮೂಲಕ ಬೆಂಗಳೂರು ಟ್ರಾಫಿಕ್​ ಪೊಲೀಸರ ಶ್ರಮಕ್ಕೆ ಫಲ ಸಿಕ್ಕಿದೆ. ಬಿಎಂಟಿಸಿ ಬಸ್​ ಚಾಲಕರು ಮತ್ತು ನಿರ್ವಾಹಕರು ಪ್ರತಿದಿನ 12 ಗಂಟೆ ಕೆಲಸ ಮಾಡುತ್ತಾರೆ. ಟ್ರಾಫಿಕ್​ ನಡುವೆ 12 ಗಂಟೆ ಕೆಲಸ ಮಾಡಿ ಚಾಲಕರು ದೈಹಿಕ ಮತ್ತು ಮಾನಸಿಕವಾಗಿ ದಣಿದಿರುತ್ತಾರೆ. ಇದರಿಂದ ತಿರುವುಗಳಲ್ಲಿ ಮತ್ತು ಜನ ದಟ್ಟಣೆ ಇರುವ ಸ್ಥಳದಲ್ಲಿ ಅಪಘಾತ ಸಂಭವಿಸುತ್ತಿದ್ದವು.

ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬೆಂಗಳೂರು ಟ್ರಾಫಿಕ್​ ಪೊಲೀಸರು ಬಿಎಂಟಿಸಿ ಬಸ್​ ಚಾಲಕರಿಗೆ ಕಳೆದ 6 ತಿಂಗಳಿನಿಂದ ತರಬೇತಿ ನೀಡಲು ಆರಂಭಿಸಿದ್ದಾರೆ. ಪ್ರತಿದಿನ 50 ಜನರಂತೆ 12 ಸಾವಿರ ಬಿಎಂಟಿಸಿ ಬಸ್​ ಚಾಲಕರಿಗೂ ತರಬೇತಿ ನೀಡಲಾಗುತ್ತಿದೆ. ಈಗಾಗಲೇ ಸುಮಾರು 8 ಸಾವಿರ ಚಾಲಕರಿಗೆ ತರಬೇತಿ ನೀಡಲಾಗಿದೆ.

ಇದನ್ನೂ ಓದಿ: ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ, ನೌಕರರಿಗೆ ಒಂದು ಕೋಟಿ ಪರಿಹಾರ

ಹಾಗಾದರೆ ಬಿಎಂಟಿಸಿ ಚಾಲಕರಿಗೆ ಯಾವ ರೀತಿ ತರಬೇತಿ ನೀಡಲಾಗುತ್ತದೆ?

  • ಸುರಕ್ಷಿತವಾಗಿ ವಾಹನ ಚಾಲನೆ ಮಾಡುವುದು ಹೇಗೆ ?
  • ಡಿಫೆನ್ಸಿವ್ ಡ್ರೈವಿಂಗ್.
  • ಟ್ರಾಫಿಕ್ ರೂಲ್ಸ್ ಫಾಲೊ ಮಾಡುವುದು.
  • ಕ್ಯಾಮೆರಾಗಳು ಹೇಗೆ ಟ್ರಾಫಿಕ್ ಉಲ್ಲಂಘನೆಗಳನ್ನ ದಾಖಲಿಸುತ್ತವೆ.
  • ಡ್ರೈವರ್ & ಕಂಡಕ್ಟರ್ ಹೇಗೆ ಸಂಚಾರ ಪೊಲೀಸರಿಗೆ ಸಹಕರಿಸಬೇಕು.
  • ಅಪಘಾತಕ್ಕೆ ಕಾರಣಗಳು ಏನೇನು.
  • ಮಕ್ಕಳು, ಮಹಿಳೆಯರನ್ನು ಹೇಗೆ ಸುರಕ್ಷಿತವಾಗಿರಿಸಬೇಕು.

ಕಳೆದ 3 ವರ್ಷದಲ್ಲಿ ಸಂಭವಿಸಿದ ಅಪಘಾತಗಳು

2021ರಲ್ಲಿ 27, 2022ರಲ್ಲಿ 33, 2023ರಲ್ಲಿ 35 ಮತ್ತು 2024ರಲ್ಲಿ ಇಲ್ಲಿಯವರೆಗೆ 04 ಅಪಘಾತಗಳು ಸಂಭವಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?