ಚಾಲಕರಿಗೆ ವಿಶೇಷ ತರಬೇತಿ: ಬಿಎಂಟಿಸಿ ಬಸ್​ ಅಪಘಾತ ಸಂಖ್ಯೆ ಇಳಿಕೆ

ಬಿಎಂಟಿಸಿ ಬಸ್​ನಿಂದ ಸಂಭವಿಸುವ ಅಪಘಾತ ನಿಯಂತ್ರಿಸಲು ಬೆಂಗಳೂರು ಟ್ರಾಫಿಕ್​ ಪೊಲೀಸರು ಚಾಲಕರಿಗೆ ಕಳೆದ 6 ತಿಂಗಳಿನಿಂದ ವಿಶೇಷ ತರಬೇತಿ ನೀಡಲು ಆರಂಭಿಸಿದ್ದಾರೆ. ಪ್ರತಿದಿನ 50 ಜನರಂತೆ 12 ಸಾವಿರ ಬಿಎಂಟಿಸಿ ಬಸ್​ ಚಾಲಕರಿಗೂ ತರಬೇತಿ ನೀಡಲಾಗುತ್ತಿದೆ. ಈಗಾಗಲೇ ಸುಮಾರು 8 ಸಾವಿರ ಚಾಲಕರಿಗೆ ತರಬೇತಿ ನೀಡಲಾಗಿದೆ.

ಚಾಲಕರಿಗೆ ವಿಶೇಷ ತರಬೇತಿ: ಬಿಎಂಟಿಸಿ ಬಸ್​ ಅಪಘಾತ ಸಂಖ್ಯೆ ಇಳಿಕೆ
ಬಿಎಂಟಿಸಿ
Follow us
| Updated By: ವಿವೇಕ ಬಿರಾದಾರ

Updated on: Jul 30, 2024 | 12:16 PM

ಬೆಂಗಳೂರು, ಜುಲೈ 30: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್​ಗಳಿಂದ ಸಂಭವಿಸುತ್ತಿರುವ ಅಪಘಾತಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ಚಾಲಕರಿಗೆ ನೀಡಿದ ವಿಶೇಷ ತರಬೇತಿ ಫಲಕಾರಿಯಾಗಿದೆ. ಬಿಎಂಟಿಸಿ ಬಸ್​ಗಳಿಂದ ಸಂಭವಿಸುತ್ತಿದ್ದ ಅಪಘಾತ ಸಂಖ್ಯೆ ಕಡಿಮೆಯಾಗಿದೆ. ಕಳೆದ ಮೂರು ವರ್ಷಕ್ಕೆ ಹೋಲಿಕೆ ಮಾಡಿದರೆ, 2024ರಲ್ಲಿ ಇಲ್ಲಿಯವರೆಗೆ ಕೇವಲ ನಾಲ್ಕು ಅಪಘಾತಗಳು ಸಂಭವಿಸಿವೆ. ಈ ಮೂಲಕ ಬೆಂಗಳೂರು ಟ್ರಾಫಿಕ್​ ಪೊಲೀಸರ ಶ್ರಮಕ್ಕೆ ಫಲ ಸಿಕ್ಕಿದೆ. ಬಿಎಂಟಿಸಿ ಬಸ್​ ಚಾಲಕರು ಮತ್ತು ನಿರ್ವಾಹಕರು ಪ್ರತಿದಿನ 12 ಗಂಟೆ ಕೆಲಸ ಮಾಡುತ್ತಾರೆ. ಟ್ರಾಫಿಕ್​ ನಡುವೆ 12 ಗಂಟೆ ಕೆಲಸ ಮಾಡಿ ಚಾಲಕರು ದೈಹಿಕ ಮತ್ತು ಮಾನಸಿಕವಾಗಿ ದಣಿದಿರುತ್ತಾರೆ. ಇದರಿಂದ ತಿರುವುಗಳಲ್ಲಿ ಮತ್ತು ಜನ ದಟ್ಟಣೆ ಇರುವ ಸ್ಥಳದಲ್ಲಿ ಅಪಘಾತ ಸಂಭವಿಸುತ್ತಿದ್ದವು.

ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬೆಂಗಳೂರು ಟ್ರಾಫಿಕ್​ ಪೊಲೀಸರು ಬಿಎಂಟಿಸಿ ಬಸ್​ ಚಾಲಕರಿಗೆ ಕಳೆದ 6 ತಿಂಗಳಿನಿಂದ ತರಬೇತಿ ನೀಡಲು ಆರಂಭಿಸಿದ್ದಾರೆ. ಪ್ರತಿದಿನ 50 ಜನರಂತೆ 12 ಸಾವಿರ ಬಿಎಂಟಿಸಿ ಬಸ್​ ಚಾಲಕರಿಗೂ ತರಬೇತಿ ನೀಡಲಾಗುತ್ತಿದೆ. ಈಗಾಗಲೇ ಸುಮಾರು 8 ಸಾವಿರ ಚಾಲಕರಿಗೆ ತರಬೇತಿ ನೀಡಲಾಗಿದೆ.

ಇದನ್ನೂ ಓದಿ: ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ, ನೌಕರರಿಗೆ ಒಂದು ಕೋಟಿ ಪರಿಹಾರ

ಹಾಗಾದರೆ ಬಿಎಂಟಿಸಿ ಚಾಲಕರಿಗೆ ಯಾವ ರೀತಿ ತರಬೇತಿ ನೀಡಲಾಗುತ್ತದೆ?

  • ಸುರಕ್ಷಿತವಾಗಿ ವಾಹನ ಚಾಲನೆ ಮಾಡುವುದು ಹೇಗೆ ?
  • ಡಿಫೆನ್ಸಿವ್ ಡ್ರೈವಿಂಗ್.
  • ಟ್ರಾಫಿಕ್ ರೂಲ್ಸ್ ಫಾಲೊ ಮಾಡುವುದು.
  • ಕ್ಯಾಮೆರಾಗಳು ಹೇಗೆ ಟ್ರಾಫಿಕ್ ಉಲ್ಲಂಘನೆಗಳನ್ನ ದಾಖಲಿಸುತ್ತವೆ.
  • ಡ್ರೈವರ್ & ಕಂಡಕ್ಟರ್ ಹೇಗೆ ಸಂಚಾರ ಪೊಲೀಸರಿಗೆ ಸಹಕರಿಸಬೇಕು.
  • ಅಪಘಾತಕ್ಕೆ ಕಾರಣಗಳು ಏನೇನು.
  • ಮಕ್ಕಳು, ಮಹಿಳೆಯರನ್ನು ಹೇಗೆ ಸುರಕ್ಷಿತವಾಗಿರಿಸಬೇಕು.

ಕಳೆದ 3 ವರ್ಷದಲ್ಲಿ ಸಂಭವಿಸಿದ ಅಪಘಾತಗಳು

2021ರಲ್ಲಿ 27, 2022ರಲ್ಲಿ 33, 2023ರಲ್ಲಿ 35 ಮತ್ತು 2024ರಲ್ಲಿ ಇಲ್ಲಿಯವರೆಗೆ 04 ಅಪಘಾತಗಳು ಸಂಭವಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ