AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟ್ರೀಟ್ ಫುಡ್ ವ್ಯಾಪಾರಿಗಳಿಗೆ ವಿಶೇಷ ತರಬೇತಿ: ಕರ್ನಾಟಕ ಆರೋಗ್ಯ ಇಲಾಖೆಯಿಂದ ಹೊಸ ಪ್ರಯತ್ನ

ಪಾನಿಪುರಿ, ಕಬಾಬ್, ಗೋಬಿ ಮಂಚೂರಿ, ಕೇಕ್ ಹೀಗೆ ನಾನಾ ತಿನಿಸುಗಳಲ್ಲಿ ಪುಡ್ ಕಲರ್ ಬಳಕೆ ನಿಷೇಧದ ಕಾರಣ ನಗರ ಪ್ರದೇಶಗಳ ಜನರು ಸ್ಟ್ರೀಟ್ ಫುಡ್ ಎಂದರೆ ಭಯ ಪಡುತ್ತಿದ್ದಾರೆ. ಹೀಗಾಗಿ ಈ ಭಯ ಹೋಗಲಾಡಿಸಲು ಆಹಾರ ಮತ್ತು ಸುರಕ್ಷತಾ ಇಲಾಖೆ ಹೊಸ ಯೋಜನೆಯೊಂದನ್ನು ಹಮ್ಮಿಕೊಂಡಿದೆ. ಏನದು ಎಂಬ ವಿವರ ಇಲ್ಲಿದೆ.

ಸ್ಟ್ರೀಟ್ ಫುಡ್ ವ್ಯಾಪಾರಿಗಳಿಗೆ ವಿಶೇಷ ತರಬೇತಿ: ಕರ್ನಾಟಕ ಆರೋಗ್ಯ ಇಲಾಖೆಯಿಂದ ಹೊಸ ಪ್ರಯತ್ನ
ಸ್ಟ್ರೀಟ್ ಫುಡ್ ವ್ಯಾಪಾರಿಗಳಿಗೆ ವಿಶೇಷ ತರಬೇತಿ
Vinay Kashappanavar
| Edited By: |

Updated on:Dec 14, 2024 | 11:17 AM

Share

ಬೆಂಗಳೂರು, ಡಿಸೆಂಬರ್ 14: ನಗರ ಪ್ರದೇಶದ ಜನರಿಗೆ ಸ್ಟ್ರೀಟ್​ ಫುಡ್​ ಅಚ್ಚುಮೆಚ್ಚು. ಸಂಜೆ ಆಗುತ್ತಲೇ ಮನಸ್ಸು ಫುಡ್​ ಸ್ಟ್ರೀಟ್​​ಗಳತ್ತ ಸೆಳೆಯುತ್ತದೆ. ಭರ್ಜರಿ ಅಲ್ಲದಿದ್ದರೂ ಒಂದು ಪ್ಲೇಟ್ ಮಸಾಲೆ, ಒಂದು ಪ್ಲೇಟ್​ ಬಿಸಿ ಬಿಸಿ ಗೋಬಿ ಮಂಚೂರಿ ತಿಂದರೆ ಅದೇನೋ ಆನಂದ. ಆದರೆ, ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಗೋಬಿ ಮಂಚೂರಿ, ಪಾನಿ ಪುರಿ ಹೀಗೆ ನಾನಾ ಆಹಾರವಸ್ತುಗಳು ಭಾಗಶಃ ನಿಷೇಧಿಸಲ್ಪಟ್ಟಿವೆ. ಕೆಲ ವರ್ಗದ ಗ್ರಾಹಕರಂತೂ ಸ್ಟ್ರೀಟ್​ ಫುಡ್​ ಬಗ್ಗೆ ಅನುಮಾನ ಹೊರಹಾಕುತ್ತಿದ್ದಾರೆ.

ನಿಷೇಧದ ಬಿಸಿ ವ್ಯಾಪಾರಿಗಳಿಗೂ ತಟ್ಟಿದೆ. ಇದನ್ನೇ ನಂಬಿ ಜೀವನ ನಡೆಸುತ್ತಿರುವ ಬೀದಿ ಬದಿ ವ್ಯಾಪಾರಿಗಳಿಗೆ ದೊಡ್ಡ ಹೊಡೆತ ಅಲ್ಲದಿದ್ದರೂ, ವ್ಯಾಪಾರ ಕೊಂಚ ಕಡಿಮೆ ಆಗಿದೆ. ಇಂತಹ ಸಂಕಷ್ಟದ ಹೊತ್ತಿನಲ್ಲಿ ವ್ಯಾಪಾರಿಗಳ ಬದುಕಿಗೆ ಆಸರೆ ಆಗಲು ಆರೋಗ್ಯ ಇಲಾಖೆ ಮುಂದಾಗಿದೆ. ಬೀದಿ ಬದಿ ವ್ಯಾಪಾರಿಗಳಿಗೆ ವಿಶೇಷ ತರಬೇತಿ ಆರಂಭಿಸಿದೆ. ಸುರಕ್ಷತೆಯ ಪಾಠ ಹೇಳಿ ಕೊಡುತ್ತಿದೆ.

ಬೀದಿ ಬದಿ ವ್ಯಾಪಾರಿಗಳಿಗೆ ನೀಡುವ ತರಬೇತಿ ಏನು?

ಆರೋಗ್ಯ ಇಲಾಖೆಯಡಿ ಆಹಾರ ಮತ್ತು ಸುರಕ್ಷತಾ ಇಲಾಖೆ ಈ ಸ್ಪೆಷಲ್​ ಟ್ರೈನಿಂಗ್​ ಆರಂಭಿಸಿದೆ. ಈಗಾಗಲೇ 4 ಸಾವಿರಕ್ಕೂ ಅಧಿಕ ಬೀದಿ ಬದಿ ವ್ಯಾಪಾರಿಗಳಿಗೆ ತರಬೇತಿ ನೀಡಿದೆ. ಯಾವ ಪದಾರ್ಥ ಬಳಸಬೇಕು, ಕೃತಕ ಬಣ್ಣ ಬಳಸಬಾರದು, ಸ್ವಚ್ಛತೆ ಕಾಪಾಡ ಬೇಕು ಎಂಬಿತ್ಯಾದಿ ಟ್ರೈನಿಂಗ್​ ನೀಡಿದೆ.

‘‘ಈಟ್​ ರೈಟ್’’ ಎಂಬ ಅಭಿಯಾನಡಿ ಎಫ್​ಎಸ್​ಎಸ್​ಐ ಸರ್ಟಿಫಿಕೇಶನ್​ ಕೊಡಲು ಆಹಾರ ಇಲಾಖೆ ನಿರ್ಧರಿಸಿದ್ದು ಆಹಾರ ತಯಾರಿಕೆಯ ಬಗ್ಗೆ ಸಾಕಷ್ಟು ನಿಗಾವಿಸಲು ಮುಂದಾಗಿದೆ ಎಂದು ಆಹಾರ ಗುಣಮಟ್ಟ ಇಲಾಖೆ ಆಯುಕ್ತ ಶ್ರೀನಿವಾಸ್ ತಿಳಿಸಿದ್ದಾರೆ.

ಇದನ್ನೂ ಓದಿ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್: ಹೊಸ ವರ್ಷದಿಂದ ಮೆಟ್ರೋ ಟಿಕೆಟ್ ದರ ಹೆಚ್ಚಳ ಬಹುತೇಕ ಖಚಿತ

10 ಸಾವಿರ ಬೀದಿಬದಿ ವ್ಯಾಪಾರಿಗಳಿಗೆ ವಿಶೇಷ ತರಬೇತಿ ನೀಡಲು ಕೇಂದ್ರ ಸರ್ಕಾರ ಈ ಹಿಂದೆಯೇ ತೀರ್ಮಾನಿಸಿತ್ತು. ಇದೀಗ ಕರ್ನಾಟಕ ಆರೋಗ್ಯ ಇಲಾಖೆ ಕೂಡ ವಿಶೇಷ ತರಬೇತಿ ನೀಡುತ್ತಿದ್ದು, ಇದು ಗ್ರಾಹಕರಿಗೆ ಆರೋಗ್ಯಕರ ಆಹಾರ ನೀಡುವಲ್ಲಿ ಮುಖ್ಯವಾದದ್ದಾಗಲಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:15 am, Sat, 14 December 24

ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌
New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌