Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆ ಕ್ಷಣದಲ್ಲಿ ಎರಡು ವಿಮಾನಗಳನ್ನು ರದ್ದುಗೊಳಿಸಿದ ಸ್ಪೈಸ್‌ ಜೆಟ್​ ಸಂಸ್ಥೆ: ಪರದಾಡಿದ ನೂರಾರು ಪ್ರಯಾಣಿಕರು

ವಿಮಾನಗಳಲ್ಲಿನ ಕೆಲ ಕಾರ್ಯಚರಣೆಗಳಿಂದ ಕೊನೆಯ ಕ್ಷಣದಲ್ಲಿ ಸ್ಪೈಸ್‌ ಜೆಟ್ ತನ್ನ ಎರಡೂ ವಿಮಾನಗಳನ್ನು ಭಾನುವಾರ ರದ್ದುಪಡಿಸಿದರ ಪರಿಣಾಮ ಬೆಂಗಳೂರು ಮತ್ತು ಪಾಟ್ನಾಗೆ ಪ್ರಯಾಣಿಸುತ್ತಿದ್ದ ನೂರಾರು ಪ್ರಯಾಣಿಕರು ಸಂಜೆ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿರುವಂತಹ ಘಟನೆ ನಡೆದಿದೆ.

ಕೊನೆ ಕ್ಷಣದಲ್ಲಿ ಎರಡು ವಿಮಾನಗಳನ್ನು ರದ್ದುಗೊಳಿಸಿದ ಸ್ಪೈಸ್‌ ಜೆಟ್​ ಸಂಸ್ಥೆ: ಪರದಾಡಿದ ನೂರಾರು ಪ್ರಯಾಣಿಕರು
ಸ್ಪೈಸ್‌ ಜೆಟ್​ ಸಂಸ್ಥೆ ವಿಮಾನ
Follow us
ಗಂಗಾಧರ​ ಬ. ಸಾಬೋಜಿ
|

Updated on: Oct 30, 2023 | 11:26 AM

ಬೆಂಗಳೂರು, ಅಕ್ಟೋಬರ್​​​ 30: ವಿಮಾನಗಳಲ್ಲಿನ ಕೆಲ ಕಾರ್ಯಚರಣೆಗಳಿಂದ ಕೊನೆಯ ಕ್ಷಣದಲ್ಲಿ ಸ್ಪೈಸ್‌ ಜೆಟ್ (SpiceJet) ತನ್ನ ಎರಡೂ ವಿಮಾನಗಳನ್ನು ಭಾನುವಾರ ರದ್ದುಪಡಿಸಿದರ ಪರಿಣಾಮ ಬೆಂಗಳೂರು ಮತ್ತು ಪಾಟ್ನಾಗೆ ಪ್ರಯಾಣಿಸುತ್ತಿದ್ದ ನೂರಾರು ಪ್ರಯಾಣಿಕರು ಸಂಜೆ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿರುವಂತಹ ಘಟನೆ ನಡೆದಿದೆ. ಬಳಿಕ ಪ್ರಯಾಣಕ್ಕೆ ಅನುಕೂಲವಾಗುವಂತೆ ಸೋಮವಾರ ಮತ್ತೊಂದು ವಿಮಾನದ ವ್ಯವಸ್ಥೆ ಮಾಡಲಾಗಿದೆ.

ವಿಮಾನಗಳಲ್ಲಿನ ಕೆಲ ಕಾರ್ಯಚರಣೆ ಕಾರಣಗಳಿಂದಾಗಿ ಸ್ಪೈಸ್‌ ಜೆಟ್ ಎಸ್​ಜಿ 531/532 ವಿಮಾನಗಳನ್ನು ರದ್ದುಗೊಳಿಸಲಾಗಿತ್ತು. ಪ್ರಯಾಣಿಕರ ಅನುಕೂಲಕ್ಕಾಗಿ ಸೋಮವಾರ ಬೆಳಿಗ್ಗೆ ಹೆಚ್ಚುವರಿ ವಾಣಿಜ್ಯ ವಿಮಾನವನ್ನು ವ್ಯವಸ್ಥೆಗೊಳಿಸಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ಬೆಂಗಳೂರಿನಿಂದ ಪಾಟ್ನಾಗೆ ಎಸ್‌ಜಿ 531 ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಂಜೆ 5.20 ಕ್ಕೆ ಹೊರಡಬೇಕಿತ್ತು. ಆದರೆ ಕೆಲ ಕಾರಣಗಳಿಂದ ಕೊನೆ ಕ್ಷಣದಲ್ಲಿ ಅಂದರೆ ರಾತ್ರಿ 8 ಗಂಟೆಗೆ ರದ್ದುಗೊಳಿಸಿರುವುದಾಗಿ ಪ್ರಯಾಣಿಕರಿಗೆ ತಿಳಿಸಲಾಗಿದೆ.

ಇದನ್ನೂ ಓದಿ: ಬೀದರ್​​-ಯಶವಂತಪುರ ಹೊಸ ರೈಲು ಸಂಚಾರ ಆರಂಭ: ಇಲ್ಲಿದೆ ವೇಳಾಪಟ್ಟಿ

ಸ್ಪೈಸ್‌ ಜೆಟ್ ವಿಮಾನ ರದ್ಧಾಗಿದ್ದರಿಂದ ನೂರಾರು ಪ್ರಯಾಣಿಕರು ಸಿಲುಕಿಕೊಂಡಿದ್ದರು, ಬೆಂಗಳೂರಿಗೆ ಭೇಟಿ ನೀಡಿದ್ದ ಜರ್ಮನಿಯ ಐಟಿ ಉದ್ಯೋಗಿ ಶಿವಂ ವರ್ಮಾ ಕೂಡ ಒಬ್ಬರಾಗಿದ್ದು, ನಾನು ಪಾಟ್ನಾದಲ್ಲಿರುವ ನನ್ನ ಹೆತ್ತವರನ್ನು ಭೇಟಿ ಮಾಡಲು ಹೋಗುತ್ತಿದ್ದೇನೆ. ನಿಜವಾದ ಸಮಸ್ಯೆಯೆಂದರೆ ವಿಮಾನಯಾನ ಸಂಸ್ಥೆಯ ಅಸಹಾಯಕ ಸಿಬ್ಬಂದಿಗಳು, ಅವರು ಯಾವುದೇ ನಿಖರವಾದ ಮಾಹಿತಿಯನ್ನು ನೀಡುತ್ತಿಲ್ಲ.

ವಿಮಾನವು ಸ್ವಲ್ಪ ಸಮಯ ವಿಳಂಬವಾಗಲಿದೆ ಎಂದು ನಮಗೆ ಆರಂಭದಲ್ಲಿ ತಿಳಿಸಿದ್ದರು. ರಾತ್ರಿ 10 ಗಂಟೆಗೆ ವಿಮಾನ ಹಾರಾಟ ನಡೆಸಬಹುದೆಂದು ಮಾಹಿತಿ ನೀಡಲಾಗಿತ್ತು. ಅಂತಿಮವಾಗಿ, ರಾತ್ರಿ 8 ಗಂಟೆಗೆ, ವಿಮಾನವನ್ನು ರದ್ದುಗೊಳಿಸಲಾಗಿದೆ ಎಂದು ಹೇಳಿದ್ದಾರೆ ಎಂದು ವರದಿ ಆಗಿದೆ.

ಇದನ್ನೂ ಓದಿ: ಗಗನಕ್ಕೇರಿದ ಈರುಳ್ಳಿ ದರ: ಒಂದೇ ವಾರದಲ್ಲಿ ಡಬ್ಬಲ್ ರೇಟ್, ಮುಂದಿನ ವಾರ 100 ರೂ. ಗಡಿ ದಾಟುವ ಸಾಧ್ಯತೆ

ಪ್ರಯಾಣಿಕರು ತಮ್ಮ ಟಿಕೆಟ್‌ಗಳನ್ನು ರದ್ದುಪಡಿಸಲು ಅಥವಾ ಪೂರ್ಣ ಮರುಪಾವತಿಗೆ ಸ್ಪೈಸ್‌ ಜೆಟ್ ಸಂಸ್ಥೆ ಹೇಳಿದೆ. ಆದರೆ ಯಾರೂ ಇದಕ್ಕೆ ಆಸಕ್ತಿ ತೋರಿಸಿಲ್ಲ. ಪ್ರಯಾಣಿಕರಿಗೆ ಲಘು ಉಪಹಾರ ನೀಡಲಾಯಿತು. ಬಳಿಕ ವಿಮಾನ ನಿಲ್ದಾಣದಿಂದ 40 ನಿಮಿಷಗಳ ದೂರದಲ್ಲಿರುವ ಹೋಟೆಲ್‌ಗಳಿಗೆ ಕಳುಹಿಸಿಕೊಡಲಾಗಿದೆ.

ನಾನು ನನ್ನ ಲಗೇಜ್​ಗಳನ್ನು ತೆಗೆದುಕೊಂಡು ನಾಲ್ಕು ಬೇರೆ ಬೇರೆ ಹೋಟೆಲ್​ಗಳಿಗೆ ಹೋದೆ. ಈಗ ಸೋಮವಾರ ಬೆಳಗ್ಗೆ 8.30ಕ್ಕೆ ವಿಮಾನದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿರುವುದಾಗಿ ಅವರು ಹೇಳಿದ್ದಾರೆ.

ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ರಿಷಿ ಮತ್ತು ಆದ್ಯ ದಂಪತಿಗಳು ಬಿಹಾರದ ಭಾಗಲ್ಪುರದಿಂದ ರಜೆ ಮುಗಿಸಿ ಪಾಟ್ನಾದಿಂದ ಬೆಂಗಳೂರಿಗೆ ಬರುವಷ್ಟರಲ್ಲಿ ಕಂಗಾಲಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು