AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಶಾಸಕ ಎಸ್​ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್ ಪ್ರಕರಣ; ನಿವಾಸಕ್ಕೆ ಭದ್ರತೆ, ಒಂದು ಕೆಎಸ್​ಆರ್​​ಪಿ ತುಕಡಿ ನಿಯೋಜನೆ

ವಿಶ್ವನಾಥ್ ನಿವಾಸಕ್ಕೆ ಡಿವೈಎಸ್​ಪಿ, ಇನ್ಸ್​​ಪೆಕ್ಟರ್​ ಭೇಟಿ ನೀಡಿ ನೀಡಿದ್ದಾರೆ. ಡಿವೈಎಸ್​​ಪಿ ನಾಗರಾಜ್, ಇನ್ಸ್​ಪೆಕ್ಟರ್ ನವೀನ್ ಭೇಟಿ ನೀಡಿ ಭದ್ರತೆ ಕುರಿತು ಶಾಸಕರ ಜತೆ ಚರ್ಚಿಸಿದ್ದಾರೆ. ವಿಶ್ವನಾಥ್ ಜೊತೆ ಚರ್ಚಿಸಿ ವಾಪಸಾಗಿದ್ದಾರೆ.

ಬಿಜೆಪಿ ಶಾಸಕ ಎಸ್​ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್ ಪ್ರಕರಣ; ನಿವಾಸಕ್ಕೆ ಭದ್ರತೆ, ಒಂದು ಕೆಎಸ್​ಆರ್​​ಪಿ ತುಕಡಿ ನಿಯೋಜನೆ
ಎಸ್ಆರ್ ವಿಶ್ವನಾಥ್
TV9 Web
| Edited By: |

Updated on: Dec 01, 2021 | 10:07 PM

Share

ಬೆಂಗಳೂರು: ನಗರದ ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಹತ್ಯೆಗೆ ಸ್ಕೆಚ್ ಆರೋಪ ಪ್ರಕರಣ ಹಿನ್ನೆಲೆಯಲ್ಲಿ ವಿಶ್ವನಾಥ್​ ನಿವಾಸಕ್ಕೆ ಪೊಲೀಸ್​ ಭದ್ರತೆ ಒದಗಿಸಲಾಗಿದೆ. ಸಿಂಗನಾಯಕನಹಳ್ಳಿಯ ನಿವಾಸಕ್ಕೆ ಪೊಲೀಸ್​ ಭದ್ರತೆ ನೀಡಲಾಗಿದ್ದು, ಮನೆ ಬಳಿ ಒಂದು ಕೆಎಸ್​ಆರ್​​ಪಿ ತುಕಡಿ ನಿಯೋಜನೆ ಮಾಡಲಾಗಿದೆ. ವಿಶ್ವನಾಥ್ ನಿವಾಸಕ್ಕೆ ಡಿವೈಎಸ್​ಪಿ, ಇನ್ಸ್​​ಪೆಕ್ಟರ್​ ಭೇಟಿ ನೀಡಿ ನೀಡಿದ್ದಾರೆ. ಡಿವೈಎಸ್​​ಪಿ ನಾಗರಾಜ್, ಇನ್ಸ್​ಪೆಕ್ಟರ್ ನವೀನ್ ಭೇಟಿ ನೀಡಿ ಭದ್ರತೆ ಕುರಿತು ಶಾಸಕರ ಜತೆ ಚರ್ಚಿಸಿದ್ದಾರೆ. ವಿಶ್ವನಾಥ್ ಜೊತೆ ಚರ್ಚಿಸಿ ವಾಪಸಾಗಿದ್ದಾರೆ.

ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಹತ್ಯೆಗೆ ಸ್ಕೆಚ್ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್‌ರಿಂದ ದೂರು ಸಲ್ಲಿಸಲಾಗಿದೆ. ಬೆಂಗಳೂರಿನ ರಾಜಾನುಕುಂಟೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆ ಮಾಡಬೇಕು. ಈ ಬೆಳವಣಿಗೆಗಳು ಸರಿಯಾದದ್ದಲ್ಲ ಎಂದು ವಿಶ್ವನಾಥ್ ಬಳಿಕ ವಿಧಾನಸೌಧದಲ್ಲಿ ಇಂದು (ಡಿಸೆಂಬರ್ 1) ನಡೆಸಿದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಶಾಸಕ ಎಸ್.ಆರ್.ವಿಶ್ವನಾಥ್ ಹತ್ಯೆಗೆ ಸ್ಕೆಚ್ ಆರೋಪಕ್ಕೆ ಸಂಬಂಧಿಸಿ ರಾಜಾನುಕುಂಟೆ ಠಾಣೆಗೆ ಶಾಸಕ ಲಿಖಿತ ದೂರು ನೀಡಿದ್ದಾರೆ. ವಿಡಿಯೋ ಆಧರಿಸಿ ಕೊಲೆಗೆ ಸಂಚು ಎಂದು ದೂರು ನೀಡಲಾಗಿದೆ. ಕೇಸ್ ದಾಖಲಿಸಿ ತನಿಖೆ ನಡೆಸಲಾಗುವುದು. ಪ್ರಕರಣದ ಬಗ್ಗೆ ಕಾನೂನು ಪ್ರಕಾರ ತನಿಖೆ ನಡೆಸುತ್ತೇವೆ ಎಂದು ಟಿವಿ9ಗೆ ಬೆಂಗಳೂರು ಗ್ರಾ. ಎಸ್‌ಪಿ ಕೆ.ವಂಶಿಕೃಷ್ಣ ಹೇಳಿಕೆ ನೀಡಿದ್ದಾರೆ.

ಘಟನೆಯ ವಿವರಣೆ ಹೀಗಿದೆ ಯಲಹಂಕ ಕ್ಷೇತ್ರದ ಕಾಂಗ್ರೆಸ್‌ನ ಭದ್ರಕೋಟೆಯಾಗಿತ್ತು. ಪ್ರಬಲ ನಾಯಕರ ಮುಂದೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದೇನೆ. ಸಜ್ಜನಿಕೆಯಿಂದ ರಾಜಕಾರಣ ಮಾಡಿಕೊಂಡು ಬಂದಿದ್ದೇವೆ. ಚುನಾವಣೆಗಳಲ್ಲಿ ಸೋಲು-ಗೆಲವು ಸಹಜವಾಗಿ ಇರುತ್ತದೆ. ಕಳೆದ 2 ಬಾರಿ ನನ್ನ ವಿರುದ್ಧ ಗೋಪಾಲಕೃಷ್ಣ ಸ್ಪರ್ಧಿಸಿದ್ದರು. ಅವರು ನನ್ನ ವಿರುದ್ಧ ಸ್ಪರ್ಧಿಸಿ 3ನೇ ಸ್ಥಾನ ಪಡೆದಿದ್ದರು ಎಂದು ಗೋಪಾಲಕೃಷ್ಣ ಬಗ್ಗೆ ಹೇಳಿದ್ದಾರೆ.

ನಿನ್ನೆ ಸಂಜೆ ನನಗೆ ಕ್ಷಮಾಪಣ ಪತ್ರ ಬಂದಿತ್ತು. ತಾವು ಮಾಡಿದ ತಪ್ಪಿಗೆ ಕ್ಷಮಿಸಿ ಎಂದು ಪತ್ರ ಬಂದಿತ್ತು. ನನ್ನ ಹತ್ಯೆಗೆ ಪ್ಲ್ಯಾನ್ ಮಾಡಿದ್ದ ಬಗ್ಗೆ ಸ್ಕೆಚ್ ಹಾಕಿದ್ದರು. ಇದು ತಪ್ಪೆಂದು ತಿಳಿದು ನಾನು ಕ್ಷಮೆಯಾಚಿಸುತ್ತಿದ್ದೇನೆ ಎಂದು ಕುಳ್ಳ ದೇವರಾಜ್ ನನಗೆ ಕ್ಷಮಾಪಣಾ ಪತ್ರ ಬರೆದಿದ್ದರು. ಕೂಡಲೇ ನಾನು ಗೃಹ ಸಚಿವರಿಗೆ ಕರೆ ಮಾಡಿ ಮಾತಾಡಿದ್ದೆ. ರಾಜಾನುಕುಂಟೆ ಪೊಲೀಸ್ ಠಾಣೆಗೂ ದೂರು ನೀಡಿದ್ದೇನೆ. ಸಿಎಂ ಬೊಮ್ಮಾಯಿ ಜೊತೆಯೂ ನಾನು ಮಾತಾಡಿದ್ದೇನೆ. ಸುಪಾರಿ ಕೊಟ್ಟು ಕೊಲೆಗೆ ಯತ್ನಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

15 ದಿನದ ಹಿಂದೆ ಈ ಬಗ್ಗೆ ವಾಸನೆ ಬರುತ್ತಿತ್ತು. ಕುಳ್ಳ ದೇವರಾಜ್-ಗೋಪಾಲಕೃಷ್ಣ ಆಡಿಯೋ ಬಗ್ಗೆ ಹೇಳಿಕೆ, ಇಡೀ ಸಂಭಾಷಣೆ ನನ್ನ ಮೇಲೆ ದ್ವೇಷ ಕಾರುವಂತೆ ಇದೆ. ಆಂಧ್ರದಿಂದ ಸುಪಾರಿ ಕಿಲ್ಲರ್ಸ್‌ ಕರೆಸುವುದಾಗಿ ಚರ್ಚಿಸಿದ್ದಾರೆ. ಕಡಬಗೆರೆ ಶ್ರೀನಿವಾಸ್ ನನ್ನ ಜೊತೆಗೆ ಇದ್ದವರು. ಅವರನ್ನು ಎಪಿಎಂಸಿ ಅಧ್ಯಕ್ಷನಾಗಿ ಮಾಡಿದ್ದು ನಾನೇ. ಕಡಬಗೆರೆ ಶ್ರೀನಿವಾಸ್ ಮೇಲೆ ಶೂಟೌಟ್ ಆಗಿತ್ತು. ನನ್ನ ಏರಿಯಾದಲ್ಲಿ ಶೂಟೌಟ್ ನಡೆದಿತ್ತು. ಈ ಬಗ್ಗೆ ತನಿಖೆ ಮಾಡುವಂತೆ ನಾನು ಕೂಡ ಒತ್ತಾಯಿಸಿದ್ದೆ. ಆದರೆ ಈವರೆಗೆ ಇದರ ಹಿಂದೆ ಯಾರಿದ್ದಾರೆಂದು ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ವಿಡಿಯೋದಲ್ಲಿ ಇರುವ ಶೇ.80ರಷ್ಟು ಭಾಗ ಫೇಕ್: ಎಸ್​ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್ ಆರೋಪದ ಬಗ್ಗೆ ಗೋಪಾಲಕೃಷ್ಣ ಪ್ರತಿಕ್ರಿಯೆ

ಇದನ್ನೂ ಓದಿ: ನಿನ್ನೆ ಸಂಜೆ ನನಗೆ ಕ್ಷಮಾಪಣ ಪತ್ರ ಬಂದಿತ್ತು; ಹತ್ಯೆಗೆ ಸ್ಕೆಚ್ ಆರೋಪ ಸಂಬಂಧಿಸಿ ಎಸ್ಆರ್ ವಿಶ್ವನಾಥ್ ಸುದ್ದಿಗೋಷ್ಠಿ

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್