ತಿರುಪತಿಯಲ್ಲಿ ಸ್ಪೆಷಲ್ ದರ್ಶನ ಮಾಡಿಸುವುದಾಗಿ ನೆಲಮಂಗಲ ಶಾಸಕ ಶ್ರೀನಿವಾಸ್​ಗೆ ವಂಚನೆ

ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ ಎಮ್​​ಎಸ್​​ ಧೋನಿ (MS Dhoni) ಅವರ ಮ್ಯಾನೇಜರ್ ಸ್ಚಾಮಿನಾಥನ್ ಅವರಿಗೆ ತಿರುಪತಿಯಲ್ಲಿ (Tirupati) ವಿಶೇಷ ದರ್ಶನ ಮಾಡಿಸುತ್ತೇನೆ ಎಂದು ಹೇಳಿ ಬರೊಬ್ಬರಿ 6.5 ಲಕ್ಷ ರೂ. ಪಡೆದು ವಂಚಿಸದ ಪ್ರಕರಣ ಮಾಸುವ ಮುನ್ನವೇ ನೆಲಮಂಗಲ ಶಾಸಕ ಶ್ರೀನಿವಾಸ್​ಗೆ 8 ಲಕ್ಷ ರೂ. ವಂಚಿಸಿದ ಘಟನೆ ನಡೆದಿದೆ.

ತಿರುಪತಿಯಲ್ಲಿ ಸ್ಪೆಷಲ್ ದರ್ಶನ ಮಾಡಿಸುವುದಾಗಿ ನೆಲಮಂಗಲ ಶಾಸಕ ಶ್ರೀನಿವಾಸ್​ಗೆ ವಂಚನೆ
ಆರೋಪಿ ಮಾರುತಿ, ಶಾಸಕ ಎನ್​ ಶ್ರೀನಿವಾಸ್​
Edited By: ಕಿರಣ್ ಹನುಮಂತ್​ ಮಾದಾರ್

Updated on: Feb 03, 2024 | 3:48 PM

ಬೆಂಗಳೂರು, ಫೆ.03: ತಿರುಪತಿಯಲ್ಲಿ ಸ್ಪೆಷಲ್ ದರ್ಶನ ಮಾಡಿಸುತ್ತೇನೆಂದು ಟೀಂ ಇಂಡಿಯಾದ ಮಾಜಿ ನಾಯಕ ಎಂ.ಎಸ್​ ಧೋನಿ ಮ್ಯಾನೇಜರ್‌ಗೆ 6.5 ಲಕ್ಷ ವಂಚನೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೆ ಮತ್ತೊಬ್ಬ ಎಂಎಲ್​ಎಗೂ ಟಿಟಿಡಿ(TTD) ಹೆಸರಲ್ಲಿ ವಂಚನೆ ಮಾಡಿದ ಘಟನೆ ನಡೆದಿದೆ. ನೆಲಮಂಗಲ(Nelamangala) ಶಾಸಕ ಶ್ರೀನಿವಾಸ್​ಗೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಆಪ್ತ ಸಹಾಯಕ ಆಗಿದ್ದ ಮಾರುತಿ ಎಂಬಾತನಿಂದ 8 ಲಕ್ಷ ರೂಪಾಯಿ ವಂಚಿಸಲಾಗಿದೆ.

ಆನ್ಲೈನ್ ಮುಖಾಂತರವಾಗಿ ಹಣ ಪಡೆದು ವಂಚನೆ

ಕರ್ನಾಟಕ ರಾಜ್ಯದಿಂದ ಟಿಟಿಡಿಯಲ್ಲಿ ಸದಸ್ಯರು ಆಗಿರುವ ಎಸ್.ಆರ್.ವಿಶ್ವನಾಥ್, ತಿರುಪತಿಯಲ್ಲಿ ತಿಮ್ಮಪ್ಪನ ದರ್ಶನಕ್ಕಾಗಿ
ಹೋಗುವವರಿಗೆ ಪಾಸ್ ಕೊಡುವ ನಿಟ್ಟಿನಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಮಾರುತಿ ಎಂಬಾತ, ನೆಲಮಂಗಲ ಶಾಸಕ ಶ್ರೀನಿವಾಸ್ ಹಾಗೂ ಆಪ್ತ ಮುಖಂಡರಿಗೆ ವಿಶೇಷ ದರ್ಶನ ಮಾಡಿಸುತ್ತೇನೆ. ಜೊತೆಗೆ ರೂಮ್ ವ್ಯವಸ್ಥೆ ಇರುತ್ತದೆ ಎಂದು ನಂಬಿಸಿ ಆನ್ಲೈನ್ ಮುಖಾಂತರವಾಗಿ ಹಣ ಪಡೆದಿದ್ದಾನೆ. ಇತ್ತ ಪಾಸ್ ಇಲ್ಲ, ದರ್ಶನವೂ ಇಲ್ಲದೆ ನಾಪತ್ತೆಯಾಗಿದ್ದಾನೆ. ಈ ಕುರಿತು ಜನವರಿ 14ರಂದು ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು.

ಇದನ್ನೂ ಓದಿ:ತಿರುಪತಿ ವಿಶೇಷ ದರ್ಶನ ಮಾಡಿಸುತ್ತೇನೆಂದು ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್‌ ಧೋನಿ ಮ್ಯಾನೇಜರ್‌ಗೆ ವಂಚನೆ

ಕೆಲಸದಿಂದ ತಗೆದ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್

ಇತ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಲೇ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಆತನನ್ನು ಕೆಲಸದಿಂದ ತಗೆದಿದ್ದಾರೆ. ಇತನ ಮೇಲೆ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಲವಾರು ಠಾಣೆಗಳಲ್ಲಿ ದೂರು ದಾಖಲಾಗಿದ್ದು, ಪ್ರಕರಣ ಸಂಬಂಧ IPC 1860 ರೀತ್ಯಾ 406, 417, 419, 420 ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಈ ಹಿನ್ನಲೆ ಆರೋಪಿ ಮಾರುತಿಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
Follow Us