AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್ ! ಗೂಗಲ್ ಸೇರಿ ಹಲವು ಟೆಕ್ ಕಂಪನಿಗಳಿಗೆ ನೋಟಿಸ್ ಜಾರಿ

ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ.ಎಚ್.ಎಂ.ಡಿ. ನವಾಜ್ ತಮ್ಮ ವಿರುದ್ಧ ಪ್ರಕಟವಾಗಿರುವ ಮಾನಹಾನಿಕರ ಆನ್‌ಲೈನ್ ಬರಹಗಳನ್ನು ತೆಗೆದುಹಾಕುವಂತೆ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. 2015 ಮತ್ತು 2020ರಲ್ಲಿ ಪ್ರಕಟವಾದ ಸುಳ್ಳು ಸುದ್ದಿಗಳಿಂದ ಘನತೆಗೆ ಧಕ್ಕೆ ಎಂದು ಆರೋಪಿಸಿದ್ದಾರೆ. ಹಿತಾಸಕ್ತಿ ಸಂಘರ್ಷ ತಪ್ಪಿಸಲು ಭಾರತದಲ್ಲಿ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ಗೂಗಲ್, ಕೇಂದ್ರ ಸಚಿವಾಲಯ ಸೇರಿದಂತೆ ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿದೆ.

ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್ ! ಗೂಗಲ್ ಸೇರಿ ಹಲವು ಟೆಕ್ ಕಂಪನಿಗಳಿಗೆ ನೋಟಿಸ್ ಜಾರಿ
ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್ ! ಗೂಗಲ್ ಸೇರಿ ಹಲವು ಟೆಕ್ ಕಂಪನಿಗಳಿಗೆ ನೋಟಿಸ್ ಜಾರಿ
Ramesha M
| Edited By: |

Updated on: Mar 07, 2026 | 10:39 AM

Share

ಬೆಂಗಳೂರು, ಮಾರ್ಚ್​ 07: ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಎಚ್‌ಎಂಡಿ ನವಾಜ್ ( Justice A.H.M.D. Nawaz) ತಮ್ಮ ವಿರುದ್ಧ ಆನ್‌ಲೈನ್‌ನಲ್ಲಿ ಪ್ರಕಟವಾಗಿರುವ ಮಾನಹಾನಿಕರ ಬರಹಗಳನ್ನು ತೆರವುಗೊಳಿಸುವಂತೆ ನಿರ್ದೇಶಿಸಬೇಕೆಂದು ಕೋರಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಸಚಿನ್ ಶಂಕರ್ ಮಗದುಮ್ ಅವರಿದ್ದ ಪೀಠ ಕೇಂದ್ರ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆ, ಗೂಗಲ್ ಇಂಡಿಯಾ, ಗೂಗಲ್ ಇಂಕ್, ಕೊಲಂಬೋ ಟೆಲಿಗ್ರಾಫ್ ಹಾಗೂ ಲಂಕಾ ಇ-ನ್ಯೂಸ್‌ಗೆ ನೋಟಿಸ್ ಜಾರಿ ಮಾಡಿದೆ.

ತನ್ನ ಅಹವಾಲಿಗೆ ತಾನೇ ತೀರ್ಪು ನೀಡಬಾರದೆಂಬ ತತ್ವ

ಅರ್ಜಿಯಲ್ಲಿ, 2015 ಮತ್ತು 2020ರಲ್ಲಿ ತಮ್ಮ ವಿರುದ್ಧ ಸುಳ್ಳು ಹಾಗೂ ಆಧಾರರಹಿತ ಮಾನಹಾನಿ ಸುದ್ದಿಗಳನ್ನು ಪ್ರಕಟಿಸಲಾಗಿದೆ ಎಂದು ನವಾಜ್ ಆರೋಪಿಸಿದ್ದಾರೆ. ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿರುವ ಕಾರಣ ಅಲ್ಲಿನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರೆ ಹಿತಾಸಕ್ತಿ ಸಂಘರ್ಷದ ಪ್ರಶ್ನೆ ಉದ್ಭವಿಸಬಹುದು ಎಂದು ಅವರು ತಿಳಿಸಿದ್ದಾರೆ. ತನ್ನ ಅಹವಾಲಿಗೆ ತಾನೇ ತೀರ್ಪು ನೀಡಬಾರದೆಂಬ ತತ್ವದ ಹಿನ್ನೆಲೆಯಲ್ಲಿ ಭಾರತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ಅರ್ಜಿಯಲ್ಲಿ ವಿವರಿಸಲಾಗಿದೆ.

ಇನ್ನು ಆನ್‌ಲೈನ್ ಸುದ್ದಿ ತಾಣಗಳಲ್ಲಿ ತಮ್ಮ ವಿರುದ್ಧ ದುರುದ್ದೇಶಪೂರಿತವಾಗಿ ಸುದ್ದಿಗಳನ್ನು ಹಂಚಲಾಗಿದೆ ಎಂದು ಹೇಳಿರುವ ಅವರು, ಶ್ರೀಲಂಕಾ ಕೋರ್ಟ್ ಆಫ್ ಅಪೀಲ್‌ನ ಮುಖ್ಯಸ್ಥರಾಗಿದ್ದಾಗ ನೀಡಿದ ಕಾನೂನು ಅಭಿಪ್ರಾಯವನ್ನು ತಪ್ಪಾಗಿ ಉಲ್ಲೇಖಿಸಿ ಮಾನಹಾನಿ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಭಾರತದ ಸಂವಿಧಾನವು ಘನತೆಯಿಂದ ಬದುಕುವ ಹಕ್ಕನ್ನು ವಿದೇಶೀಯರಿಗೂ ವಿಸ್ತರಿಸಿರುವುದರಿಂದ ಈ ಅರ್ಜಿಯನ್ನು ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ ಶ್ರೀಲಂಕಾ ಕಡೆ ಹೊರಟ ಇರಾನಿನ 2ನೇ ಹಡಗು; ಮತ್ತೆ ದಾಳಿಯ ಭೀತಿಯಲ್ಲಿ ಅಧಿಕಾರಿಗಳು

ನೋಟಿಸ್ ನೀಡಿದರು ಮಾಹಿತಿ ತೆಗೆದು ಹಾಕದ ಗೂಗಲ್!

ಗೂಗಲ್‌ಗೆ ಈ ಕುರಿತು ನೋಟಿಸ್ ನೀಡಿದ್ದರೂ ಸಹ ಸಂಬಂಧಿತ ಸುದ್ದಿಗಳನ್ನು ಆನ್‌ಲೈನ್‌ನಿಂದ ತೆಗೆದುಹಾಕಲಾಗಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಹೀಗಾಗಿ ಅವಹೇಳನಕಾರಿ ಹಾಗೂ ಮಾನಹಾನಿಕರ ವಿಷಯಗಳನ್ನು ತಕ್ಷಣವೇ ತೆರವುಗೊಳಿಸುವಂತೆ ನಿರ್ದೇಶಿಸಬೇಕೆಂದು ನ್ಯಾಯಾಲಯವನ್ನು ಕೋರಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ