AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಶ್ರೀರಾಮನ ಕಟೌಟ್​ ಬಿದ್ದು ಪಾದಚಾರಿಗೆ ಗಾಯ; ಆಸ್ಪತ್ರೆಗೆ ದಾಖಲು

ಶ್ರೀರಾಮ ಮಂದಿರ ಉದ್ಘಾಟನೆ ದಿನದಂದು ಹೆಚ್​ಎಎಲ್​ ವಿಮಾನ ನಿಲ್ದಾಣದ ಪಕ್ಕದಲ್ಲೆ ಶ್ರೀರಾಮನ ಬೃಹತ್ ಕಟೌಟ್ ಹಾಕಲಾಗಿತ್ತು. ಆದರೆ, ಕಾರ್ಯಕ್ರಮ ಮುಗಿದು 10 ದಿನಗಳಾದರೂ ಕಟೌಟ್ ತೆರವು ಗೊಳಿಸದ ಹಿನ್ನೆಲೆ ಶ್ರೀರಾಮನ ಕಟೌಟ್​ ಬಿದ್ದು ಪಾದಚಾರಿಗೆ ಗಾಯವಾದ ಘಟನೆ ಬೆಂಗಳೂರಿನ HAL ರಸ್ತೆಯಲ್ಲಿ ನಡೆದಿದೆ.

ಬೆಂಗಳೂರು: ಶ್ರೀರಾಮನ ಕಟೌಟ್​ ಬಿದ್ದು ಪಾದಚಾರಿಗೆ ಗಾಯ; ಆಸ್ಪತ್ರೆಗೆ ದಾಖಲು
ಶ್ರೀರಾಮನ ಕಟೌಟ್​ ಬಿದ್ದು ಪಾದಚಾರಿಗೆ ಗಾಯ
Shivaprasad B
| Edited By: |

Updated on:Jan 31, 2024 | 5:58 PM

Share

ಬೆಂಗಳೂರು, ಜ.31: ಶ್ರೀರಾಮನ ಕಟೌಟ್​ ಬಿದ್ದು ಪಾದಚಾರಿಗೆ ಗಾಯವಾದ ಘಟನೆ ಬೆಂಗಳೂರಿನ HAL ರಸ್ತೆಯಲ್ಲಿ ನಡೆದಿದೆ. ಶ್ರೀರಾಮ ಮಂದಿರ ಉದ್ಘಾಟನೆ ದಿನದಂದು ಹೆಚ್​ಎಎಲ್​ ವಿಮಾನ ನಿಲ್ದಾಣದ ಪಕ್ಕದಲ್ಲೆ ಶ್ರೀರಾಮನ ಬೃಹತ್ ಕಟೌಟ್ ಹಾಕಲಾಗಿತ್ತು. ಆದರೆ, ಕಾರ್ಯಕ್ರಮ ಮುಗಿದು 10 ದಿನಗಳಾದರೂ ಕಟೌಟ್ ತೆರವು ಗೊಳಿಸದ ಹಿನ್ನೆಲೆ ಪಾದಚಾರಿ ಮಾರ್ಗದಲ್ಲಿ ಸಾಗುತ್ತಿದ್ದವರ ಮೇಲೆ ಕಟೌಟ್ ಬಿದ್ದಿದೆ. ಇದರಿಂದ ಮೂರು ಜನ ಪಾದಚಾರಿಗಳಿಗೆ ಗಂಭೀರ ಗಾಯವಾಗಿದ್ದು, ಕೂಡಲೇ ಗಾಯಾಳುಗಳನ್ನು ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ

ಕಟೌಟ್ ಬಿದ್ದ ಸ್ಥಳದಲ್ಲೇ ಖಾಸಗಿ ಶಾಲೆ ಇದ್ದು, ಲಂಚ್ ಬ್ರೇಕ್ ಆರಂಭ ಆಗುವ ಕೆಲವೇ ನಿಮಿಷಗಳ ಹಿಂದಷ್ಟೇ ಬೃಹತ್ ಕಟೌಟ್ ನೆಲಕ್ಕುರುಳಿದ್ದು,  ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಇನ್ನು ಈ ಕಟೌಟ್​ನ್ನು ಖಾಸಗಿ ಶಾಲೆ ಗೋಡೆಗೆ ಸೇರಿದ ಹಾಗೇ ಕಟ್ಟಲಾಗಿತ್ತು. ಇಂದು ಹೋಗುತ್ತಿದ್ದವರ ಮೇಲೆ ಧಿಡೀರ್ ಬಿದ್ದಿದ್ದು, ಕೂಡಲೇ ಕಟೌಟ್ ಅಡಿ ಸಿಲುಕಿದ ಪಾದಚಾರಿಗಳನ್ನು ಸ್ಥಳೀಯರು ಹೊರ ಎಳೆದು, ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಗಾಯಾಳುಗಳನ್ನು ಶಿಫ್ಟ್ ಮಾಡಿದ್ದಾರೆ. ಅಳವಡಿಕೆ ವೇಳೆ ಸರಿಯಾದ ಸುರಕ್ಷತಾ ಕ್ರಮ ಕೈಗೊಳ್ಳದ ಹಿನ್ನೆಲೆ  ಈ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇದನ್ನೂ ಓದಿ:ಕೋಲಾರ: ಶ್ರೀರಾಮನ ಕಟೌಟ್, ಪ್ಲೆಕ್ಸ್​​ನ್ನು ಬ್ಲೇಡ್​​ನಿಂದ ಹರಿದ ದುಷ್ಕರ್ಮಿಗಳು, ಇಬ್ಬರ ಬಂಧನ

ಚಲಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾಂಪೌಂಡ್ ಗೆ ಗುದ್ದಿದ ಕಾರು; ಐವರಿಗೆ ಗಾಯ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿ – ದೊಡ್ಡಬಳ್ಳಾಪುರದ ರಾಷ್ಟ್ರೀಯ ಹೆದ್ದಾರಿಯ ಬೀರಸಂದ್ರ ಬಳಿ ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್​ಗೆ ಗುದ್ದಿದ ಘಟನೆ ನಡೆದಿದೆ. ಕಾರಿನಲ್ಲಿದ್ದ ಐವರಿಗೆ ಗಂಭೀರ ಗಾಯವಾಗಿದ್ದು, ಸ್ಥಳಿಯ ಆಸ್ವತ್ರೆಗೆ ದಾಖಲು ಮಾಡಲಾಗಿದೆ. ಮದುವೆಗೆಂದು ಯುವಕರು ಹೊಸಕೋಟೆಯಿಂದ ತಿಪಟೂರಿಗೆ ತೆರಳುತ್ತಿದ್ದರು. ಈ ವೇಳೆ‌ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ನಡೆದಿದೆ. ಈ ಘಟನೆ ವಿಶ್ವನಾಥಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:59 pm, Wed, 31 January 24

Follow Us
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು