AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ಕೆರೆಹಳ್ಳಿ ಬಂಧನ: ಡೋಂಗಿ ಹಿಂದುತ್ವದ ಬಿಜೆಪಿ ನಾಯಕರೇ ಈ ಬಗ್ಗೆ ಧ್ವನಿ ಎತ್ತಿ ಎಂದ ಶ್ರೀರಾಮ ಸೇನೆ

ಗೂಂಡಾ ಕಾಯ್ದೆಯಡಿ ಪುನೀತ್ ಕರೆಹಳ್ಳಿಯನ್ನು ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿದ್ದು, ಇದಕ್ಕೆ ಶ್ರೀರಾಮಸೆನೆ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಲದೇ ರಾಜ್ಯ ಸರ್ಕಾರ ಹಾಗೂ ಬಿಜೆಪಿ ನಾಯಕರಿಗೆ ಖಡಕ್ ಎಚ್ಚರಿಯನ್ನು ಸಹ ನೀಡಿದೆ.

ಪುನೀತ್ ಕೆರೆಹಳ್ಳಿ ಬಂಧನ: ಡೋಂಗಿ ಹಿಂದುತ್ವದ ಬಿಜೆಪಿ ನಾಯಕರೇ ಈ ಬಗ್ಗೆ ಧ್ವನಿ ಎತ್ತಿ ಎಂದ ಶ್ರೀರಾಮ ಸೇನೆ
ಪುನೀತ್ ಕೆರೆಹಳ್ಳಿ
Follow us
Kiran Surya
| Updated By: ರಮೇಶ್ ಬಿ. ಜವಳಗೇರಾ

Updated on: Aug 13, 2023 | 4:19 PM

ಬೆಂಗಳೂರು, (ಆಗಸ್ಟ್ 13): ಗೂಂಡಾ ಕಾಯ್ದೆ ಅಡಿಯಲ್ಲಿ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು (Puneeth Kerehalli) ಸಿಸಿಬಿ (CCB) ಪೊಲೀಸರು ಬಂಧಿಸಿದ್ದು, ಇದನ್ನು ಖಂಡಿಸಿ ಹಿಂದೂ ಸಂಘಟನೆಗಳು ರಾಜ್ಯ ಸರ್ಕಾರದ ಮತ್ತು ಬಿಜೆಪಿ ನಾಯಕರ ವಿರುದ್ಧ ಸಿಡಿದೆದ್ದಿವೆ. ಪುನೀತ್ ಕೆರೆಹಳ್ಳಿ ಬೆಂಬಲವಾಗಿ ನಿಲ್ಲದಿದ್ದರೆ ಹೋರಾಟ ಮಾಡುವುದಾಗಿ ಬಿಜೆಪಿ ನಾಯಕರಿಗೆ ಶ್ರೀರಾಮ ಸೇನೆ ಎಚ್ಚರಿಕೆ ನೀಡಿದೆ. ಶೀಘ್ರವೇ ಪುನೀತ್ ಕೆರೆಹಳ್ಳಿಯನ್ನ ಬಿಡುಗಡೆ ಮಾಡದಿದ್ದರೆ ರಾಜ್ಯ ಸರ್ಕಾರ ಗಂಭೀರವಾದ ಪರಿಣಾಮ ಎದುರಿಸಬೇಕಾಗುತ್ತದೆ. ಡೋಂಗಿ ಹಿಂದುತ್ವದ ಬಿಜೆಪಿ ನಾಯಕರು ಈ ಪ್ರಕರಣದ ಬಗ್ಗೆ ಧ್ವನಿ ಎತ್ತಿ ಪುನೀತ್ ಕೆರೆ ಹಳ್ಳಿಯ ಬೆಂಬಲಕ್ಕೆ ನಿಲ್ಲಬೇಕು. ಇಲ್ಲದಿದ್ದರೆ ಬಿಜೆಪಿ ವಿರುದ್ಧವೂ ಹೋರಾಟ ಮಾಡಬೇಕಾಗುತ್ತದೆ ಎಂದಿದೆ.

ರಾಜ್ಯದಲ್ಲಿ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಹಿಂದೂ ಸಂಘಟನೆಗಳನ್ನ ತಮ್ಮ ದ್ವೇಷದ ರಾಜಕಾರಣಕ್ಕೆ ಬಲಿಪಶು ಮಾಡುತ್ತಿದ್ದಾರೆ. ಇದಕ್ಕೆ ಉದಾಹರಣೆ ಪುನೀತ್ ಕೆರೆಹಳ್ಳಿ ಮೇಲೆ ಗೂoಡ ಕಾಯ್ದೆ ಹಾಕಿ ಬಂದಿಸಿರುವುದು. ಮುಸ್ಲಿಮರ ಮತ ಬ್ಯಾಂಕಿನಿಂದ ಗೆದ್ದಿರುವ ಕಾಂಗ್ರೆಸ್ ದೇಶದ್ರೋಹಿ ಜಿಹಾದಿಗಳನ್ನು ತಮ್ಮ ಕುಟುಂಬದ ಸದಸ್ಯರಂತೆ ಪ್ರೀತಿಸುತ್ತಿದ್ದು ಇದು ದೇಶಕ್ಕೆ ಮಾರಕ ಎಂದು ಹೇಳಿದೆ.

ಇದನ್ನೂ ಓದಿ: ಬೆಂಗಳೂರು: ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು; ಬಂಧನ

ಕೆಜೆ ಹಳ್ಳಿ, ಡಿಜೆ ಹಳ್ಳಿ ಪ್ರಕಣದ ಅಪರಾಧಿಗಳು, ಪಾದರಾಯನಪುರ ಗಲಭೆಕೋರರು, ಹುಬ್ಬಳ್ಳಿಯಲ್ಲಿ ಪೊಲೀಸ್ ಜೀಪ್ ಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣ ಸೇರಿದಂತೆ ರಾಜ್ಯದಲ್ಲಿ ಸುಮಾರು ಕಡೆ ಗಲಭೆ ಸೃಷ್ಟಿದ ಮುಸ್ಲಿಮರ ವಿರುದ್ಧ ಯಾವುದೇ ಕಠಿಣ ಕ್ರಮ ಇಲ್ಲ. ಗೋ ರಕ್ಷಣೆ, ಹಿಂದೂ ಸಂಸ್ಕೃತಿ ಆಚಾರ ವಿಚಾರಗಳ ಬಗ್ಗೆ ಪ್ರಚಾರ ಮಾಡಿ ಜಾಗೃತಿ ಮೂಡಿಸುತ್ತಿರುವ ಹಿಂದೂ ಮುಖಂಡರುಗಳಿಗೆ ಕಡಿವಾಣ ಹಾಕುವುದು ಈ ದುಷ್ಟ ಕಾಂಗ್ರೆಸ್ಸಿನ ಮನಸ್ಥಿತಿ ಎಂದು ಶ್ರೀರಾಮ ಸೇನೆ ಸಂಘಟನೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದೆ.

ಪುನೀತ್ ಕೆರೆಹಳ್ಳಿ 2013 ರಿಂದ 2023 ರವರಗೆ 10 ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಸಮಾಜದಲ್ಲಿ ಶಾಂತಿ‌ ಕದಡುವ ಯತ್ನ, ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಪದೇ ಪದೇ ಭಾಗಿಯಾದ ಹಿನ್ನೆಲೆಯಲ್ಲಿ ಮೇಲೆ ಮೇಲಿಂದ‌ ಮೇಲೆ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಪುನೀತ್ ಕರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆ ಹಾಕಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ಕರ್ನಾಟಕ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ