Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶಿಷ್ಟ ಪರಂಪರೆಯ ರಾಮ ನವಮಿ ಸಂಗೀತೋತ್ಸವಕ್ಕೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ, ಇನ್ಫೋಸಿಸ್ ಸುಧಾ ಮೂರ್ತಿ

Kote Chamarajpet Ramanavami music festival: ವಿಶಿಷ್ಟ ಪರಂಪರೆಯ, ಜಗದ್ವಿಖ್ಯಾತ ಶ್ರೀರಾಮ ಸೇವಾ ಮಂಡಳಿ ಆಯೋಜಿಸುವ ಶ್ರೀರಾಮನವಮಿ ಸಂಗೀತೋತ್ಸವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ ಚಾಲನೆ ನೀಡಿದರು.

ವಿಶಿಷ್ಟ ಪರಂಪರೆಯ ರಾಮ ನವಮಿ ಸಂಗೀತೋತ್ಸವಕ್ಕೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ, ಇನ್ಫೋಸಿಸ್ ಸುಧಾ ಮೂರ್ತಿ
ವಿಶಿಷ್ಟ ಪರಂಪರೆಯ ಶ್ರೀರಾಮನವಮಿ ಸಂಗೀತೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ, ಇನ್ಫೋಸಿಸ್ ಸುಧಾಮೂರ್ತಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Apr 02, 2022 | 8:20 PM

ಬೆಂಗಳೂರು: ವಿಶಿಷ್ಟ ಪರಂಪರೆಯ, ಜಗದ್ವಿಖ್ಯಾತ ಶ್ರೀರಾಮ ಸೇವಾ ಮಂಡಳಿ ಆಯೋಜಿಸುವ ಶ್ರೀರಾಮನವಮಿ ಸಂಗೀತೋತ್ಸವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಇಂದು ಸಂಜೆ ಚಾಲನೆ ನೀಡಿದರು. ಚಾಮರಾಜಪೇಟೆಯ ಕೋಟೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಅವರಿಗೆ ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾಮೂರ್ತಿ ಅವರು (Infosys Foundation Sudha murthy) ಸಾಥ್​ ನೀಡಿದರು. ಅಪ್ಪಟ ಸಂಗೀತ ಪ್ರೇಮಿಗಳಿಗೆ ತಿಂಗಳು ಕಾಲ ನಡೆಯುವ ಸಂಗೀತ ರಸದೌತಣ ಕಾರ್ಯಕ್ರಮ ಇದಾಗಲಿದೆ. ಕಳೆದೆರಡು ವರ್ಷದಿಂದ ಕೊರೊನಾ ಸೋಂಕಿನಿಂದಾಗಿ ಕೋಟೆ ರಾಮನವಮಿ ಸಂಗೀತೋತ್ಸವಕ್ಕೆ ಅಡಚಣೆಯಾಗಿತ್ತು. ಆದರೆ ಈ ಬಾರಿ ವಾಡಿಕೆಯಂತೆ ಪೂರ್ಣ ಪ್ರಮಾಣದಲ್ಲಿ ಸಂಗೀತೋತ್ಸವ ನಡೆಯಲಿದೆ.

ಬೆಂಗಳೂರಿನ ಚಾಮರಾಜಪೇಟೆಯ ಕೋಟೆ ಮೈದಾನದಲ್ಲಿ ಶ್ರೀ ರಾಮ ಸೇವಾ ಮಂಡಳಿ, ರಾಮನವಮಿ ಉತ್ಸವ ಸಮಿತಿ ತನ್ನ 84ನೇ ಶ್ರೀ ರಾಮನವಮಿ ಸಂಗೀತೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿತು (INAUGURATION OF 84TH SREE RAMANAVAMI GLOBAL MUSIC FESTIVAL).

ಚಾಮರಾಜಪೇಟೆಯ ಕೋಟೆ ಮೈದಾನದಲ್ಲಿ ಆಯೋಜಿಸಿರುವ 84ನೇ ಶ್ರೀ ರಾಮನವಮಿ ಸಂಗೀತೋತ್ಸವದ ವೇಳಾಪಟ್ಟಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ: http://www.ramanavami.org/schedule/2022

ಅಥವಾ http://www.ramanavami.org/celebration

ರಾಜ ಮನೆತನದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸರಳತೆಗೆ ಅಪಾರ ಮೆಚ್ಚುಗೆ, ಫೋಟೋ ವೈರಲ್ ಮೈಸೂರು: ಎಷ್ಟೇ ದೊಡ್ಡ ವ್ಯಕ್ತಿಗಳಾದರೂ ದೇವರು ಹಾಗೂ ಗುರುಗಳ ಮುಂದೆ ಮಂಡಿಯೂರಲೇಬೇಕು. ಗುರುಭಕ್ತಿಯನ್ನು ಮಾಡಲೇಬೆಕು ಎನ್ನುವುದಕ್ಕೆ ಮೈಸೂರು ರಾಜ ಮನೆತನದ ಯದುವಂಶದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸಾಕ್ಷಿಯಾಗಿದ್ದಾರೆ. ಗುರುಗಳ ಸಮಾನವಾಗಿ ಕುರ್ಚಿಯಲ್ಲಿ ಕುಳಿತುಕೊಳ್ಳದೆ ನೆಲದ ಮೇಲೆ ಕುಳಿತು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಮ್ಮ ಸರಳತೆಯನ್ನು ಪ್ರದರ್ಶಿಸಿದ್ದಾರೆ. ಸದ್ಯ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಯದುವೀರರ ಸರಳತೆಗೆ ಜನ ಕೊಂಡಾಡಿದ್ದಾರೆ.

ನಿನ್ನೆ ಅಗ್ರಹಾರದ ಉತ್ತರಾದಿ ಮಠದಲ್ಲಿ ನಡೆದ ಶ್ರೀ 1008 ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರ 50ನೇ ವರ್ಧುಂತ್ಯುತ್ಸವ ಕಾರ್ಯಕ್ರಮದಲ್ಲಿ ಮಧ್ವಶ್ರೀಗಳ ಸಮಾನವಾಗಿ ಕುರ್ಚಿಯಲ್ಲಿ ಕೂರದೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ನೆಲದ ಮೇಲೆ ಕೂತಿದ್ದಾರೆ. ತಾನೊಬ್ಬ ರಾಜವಂಶಸ್ಥ ಎಂಬ ಯಾವುದೇ ಅಹಂ ಇಲ್ಲದೆ. ರಾಜ ಮನೆತನದ ಯದುವಂಶದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಮ್ಮ ಸರಳತೆಯಿಂದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸದ್ಯ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Published On - 8:18 pm, Sat, 2 April 22

ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ