AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಮಾಜಿ ಶಾಸಕನ ಮಕ್ಕಳ ಜೊತೆಗೆ ಶ್ರೀಕಿ ಭಾಗಿಯಾಗಿದ್ದ, ಡಿಕೆಶಿ ಸಾಕ್ಷ್ಯಾಧಾರ ಕೊಟ್ಟರೆ ತನಿಖೆ ನಡೆಸಿ ಶಿಕ್ಷೆ ಕೊಡಿಸುತ್ತೇವೆ -ಗೃಹಸಚಿವ ಆರಗ ಜ್ಞಾನೇಂದ್ರ

ಬೆಂಗಳೂರಿನಲ್ಲಿ ಟಿವಿ9 ಜೊತೆ ಮಾತನಾಡಿದ ಗೃಹಸಚಿವ ಆರಗ ಜ್ಞಾನೇಂದ್ರ, 2018ರಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಶಾಸಕನ ಮಕ್ಕಳ ಜೊತೆಗೆ ಶ್ರೀಕೃಷ್ಣ ಸಿಕ್ಕಿ ಹಾಕಿಕೊಂಡಿದ್ದ. ಶ್ರೀಕಿಯನ್ನು ಚಾರ್ಜ್ ಶೀಟ್ ನಲ್ಲಿ ಸೇರಿಸಿ ಏಕೆ ಬಂಧನ ಮಾಡಿಲ್ಲ ಎಂದರು.

ಕಾಂಗ್ರೆಸ್ ಮಾಜಿ ಶಾಸಕನ ಮಕ್ಕಳ ಜೊತೆಗೆ ಶ್ರೀಕಿ ಭಾಗಿಯಾಗಿದ್ದ, ಡಿಕೆಶಿ ಸಾಕ್ಷ್ಯಾಧಾರ ಕೊಟ್ಟರೆ ತನಿಖೆ ನಡೆಸಿ ಶಿಕ್ಷೆ ಕೊಡಿಸುತ್ತೇವೆ -ಗೃಹಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ
TV9 Web
| Edited By: |

Updated on: Nov 11, 2021 | 2:52 PM

Share

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಟ್ ಕಾಯಿನ್ ಸಂಚಲನ ಸೃಷ್ಟಿಸಿದೆ. ಇದನ್ನೇ ಮುಂದಿಟ್ಟು ಕೊಂಡು ಕಾಂಗ್ರೆಸ್ ಬಿಜೆಪಿ ಸರ್ಕಾರ ನಡುವೆ ಆರೋಪಗಳು ಹೇಳಿ ಬರುತ್ತಿವೆ. ಸದ್ಯ ಈಗ ಗೃಹಸಚಿವ ಆರಗ ಜ್ಞಾನೇಂದ್ರ ಕಾಂಗ್ರೆಸ್ ಮೇಲೆ ಮತ್ತೊಂದು ಲಾಠಿ ಬೀಸಿದ್ದಾರೆ. 2018ರಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಶ್ರೀಕೃಷ್ಣ ಸಿಕ್ಕಿ ಹಾಕಿಕೊಂಡಿದ್ದ. ಕಾಂಗ್ರೆಸ್ ಮಾಜಿ ಶಾಸಕನ ಮಕ್ಕಳ ಜೊತೆಗೆ ಶ್ರೀಕಿ ಭಾಗಿಯಾಗಿದ್ದ. ಶ್ರೀಕಿಯನ್ನು ಚಾರ್ಜ್ ಶೀಟ್ ನಲ್ಲಿ ಸೇರಿಸಿ ಏಕೆ ಬಂಧನ ಮಾಡಿಲ್ಲ ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಟಿವಿ9 ಜೊತೆ ಮಾತನಾಡಿದ ಗೃಹಸಚಿವ ಆರಗ ಜ್ಞಾನೇಂದ್ರ, 2018ರಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಶಾಸಕನ ಮಕ್ಕಳ ಜೊತೆಗೆ ಶ್ರೀಕೃಷ್ಣ ಸಿಕ್ಕಿ ಹಾಕಿಕೊಂಡಿದ್ದ. ಶ್ರೀಕಿಯನ್ನು ಚಾರ್ಜ್ ಶೀಟ್ ನಲ್ಲಿ ಸೇರಿಸಿ ಏಕೆ ಬಂಧನ ಮಾಡಿಲ್ಲ. ಅವರ ಸರ್ಕಾರ ಇದ್ದಾಗ ಶ್ರೀಕೃಷ್ಣನನ್ನ ಬಂಧನ ಮಾಡಿಲ್ಲ ಏಕೆ? ನಮ್ಮ ಸರ್ಕಾರ ಬಂದಾಗ ಶ್ರೀಕೃಷ್ಣನನ್ನ ಬಂಧನ ಮಾಡಲಾಗಿತ್ತು. ಹಣ್ಣು ತಿಂದಿದ್ದು ಅವರೇ, ಮೂತಿ ಮುಸುರೆ ಅವರೇ ಮಾಡಿಕೊಂಡಿದ್ದು. ಯುಬಿ ಸಿಟಿ ಗಲಾಟೆ ವೇಳೆ ಕಾಂಗ್ರೆಸ್ ನಾಯಕರ ಮಕ್ಕಳ ಜತೆ ಇದ್ದ. ಅಂದು ಅವರ ಮಕ್ಕಳು ಏಕೆ ಇದ್ರು ಅಂತ ಜನರ ಬಳಿ ಹೇಳಲಿ. ಈಗ ಅವರ ಬಳಿ ಏನೋ ಇದೆ ಅಂತ ಹೇಳುತ್ತಿದ್ದಾರೆ. ಬುಟ್ಟಿಯಲ್ಲಿ ಹಾವಿದೆ ಬಿಡ್ತೀನಿ ಅಂತಾ ಯಾರಿಗೆ ಹೆದರಿಸುತ್ತಿದ್ದಾರೆ? ಅವರು ಹಾವು ಬಿಡಲಿ, ಎಷ್ಟು ದೊಡ್ಡದು, ಯಾರಿಗೆ ಕಚ್ಚುತ್ತದೆ, ಯಾರು ಸಾಯ್ತಾರೆ ನೋಡೋಣ ಎಂದು ಹೇಳಿದ್ದಾರೆ.

ಡಿಕೆಶಿ ಸಾಕ್ಷ್ಯಾಧಾರ ಕೊಟ್ಟರೆ ತನಿಖೆ ನಡೆಸಿ ಶಿಕ್ಷೆ ಕೊಡಿಸುತ್ತೇವೆ ಇನ್ನು ಬಿಟ್ ಕಾಯಿನ್ ದಂಧೆ ಬಗ್ಗೆ ಕಾಂಗ್ರೆಸ್ ನಾಯಕರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಗೃಹಸಚಿವ ಆರಗ ಜ್ಞಾನೇಂದ್ರ, ಮಾನ್ಯ ಡಿ.ಕೆ. ಶಿವಕುಮಾರ್ ಯಾವುದಾದರೂ ಆಧಾರ ಕೊಟ್ಟರೆ ಅದನ್ನು ನಾವು ತನಿಖೆ ಮಾಡಿಸಿ ಶಿಕ್ಷೆ ಕೊಡಿಸುತ್ತೇವೆ ಸಿಎಂ ದೆಹಲಿಗೆ ತೆರಳಿ ಪ್ರಧಾನಿ ಭೇಟಿಯಾಗುವುದು ಸಾಮಾನ್ಯ. ಇಂಥದ್ದೇ ವಿಷಯಕ್ಕೆ ಹೋಗಿದ್ದಾರೆ ಎಂದು ಹೇಗೆ ಹೇಳೋದು? ಪ್ರಧಾನಿ ಹೋಗುವವರೆಗೂ ಅಮೆರಿಕ ಅಧ್ಯಕ್ಷರು ಕಾಯುತ್ತಾರಾ? ಹ್ಯಾಕ್ ಮಾಡಿದರೆ ಅಮೆರಿಕದವರು ಸುಮ್ಮನೆ ಕೂರುತ್ತಾರಾ? ನಮ್ಮ ಸರ್ಕಾರ ಎಲ್ಲಾ ವಿಷಯದಲ್ಲೂ ಪಾರದರ್ಶಕವಾಗಿದೆ. ಕಾಂಗ್ರೆಸ್ ನಾಯಕರ ಆರೋಪಗಳಿಗೆ ಉತ್ತರ ಕೊಡುತ್ತೇವೆ. ಕೇವಲ ನಮ್ಮ ಪೊಲೀಸರು ಮಾತ್ರ ಶ್ರೀಕಿ ವಿಚಾರಣೆ ನಡೆಸಿಲ್ಲ. ಕೇಂದ್ರದ ಅನುಮತಿ ಪಡೆದು ಐಐಟಿಯವರು ಹ್ಯಾಕರ್ ಶ್ರೀಕಿಯನ್ನು ವಿಚಾರಣೆ ನಡೆಸಿದ್ದಾರೆ. ಶ್ರೀಕಿ ವಿಚಾರಣೆ ನಡೆಸಿ ಕೋರ್ಟ್ಗೆ ಮಾಹಿತಿ ನೀಡಿದ್ದೇವೆ. ದುರುದ್ದೇಶಪೂರ್ವಕವಾಗಿ ಆರೋಪ ಮಾಡುವುದು ಬೇಡ. ಕಾಂಗ್ರೆಸ್ ನಾಯಕರು ನಿರ್ದಿಷ್ಟವಾಗಿ ಹೇಳಲಿ ಎಂದ ತಿರುಗೇಟು ಕೊಟ್ಟಿದ್ದಾರೆ.

ಬೊಮ್ಮಾಯಿ ಸರ್ಕಾರದ ಜನಪ್ರಿಯತೆ ಸಹಿಸದೆ ರಾಜ್ಯ ಸರ್ಕಾರದ ಮೇಲೆ ಕಾಂಗ್ರೆಸ್ ಆರೋಪ ಮಾಡುತ್ತಿದೆ. ಕಾಂಗ್ರೆಸ್‌ ಮುಖಂಡರ ಮಕ್ಕಳು ಶ್ರೀಕಿ ಜತೆ ಏಕೆ ಇದ್ದರು? ಏನು ಉದ್ದೇಶ ಅಂತಾ ಅವರೇ ಹೇಳಬಹುದಲ್ಲಾ? ಬಿಟ್ಕಾಯಿನ್ ವ್ಯವಹಾರವಲ್ಲದೆ ಅದರಲ್ಲಿ ಬೇರೇನಿದೆ? ಯಾರದೋ ಮೇಲೆ ಆರೋಪ ಮಾಡಿ ಓಡಿ ಹೋಗುವುದಲ್ಲ. ಬಿಟ್ಕಾಯಿನ್ ಬಗ್ಗೆ ಪೂರ್ಣ ವಿಷಯ ಕಾಂಗ್ರೆಸ್‌ಗೆ ಗೊತ್ತಿದೆ ಎಂದರು.

ಇದನ್ನೂ ಓದಿ: 13 ಬಜೆಟ್​ ಮಂಡಿಸಿರುವ ಸಿದ್ದರಾಮಯ್ಯ ಅವರೇ ಬಿಟ್​ಕಾಯಿನ್ ಅಂದ್ರೇನು, ವ್ಯವಹಾರ ಹೇಗೆ ನಡೆಯುತ್ತೆ ತಿಳಿಸಿ -ಸಂಸದ ಪ್ರತಾಪ್ ಸವಾಲು

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು