AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಖಂಡ ಶ್ರೀನಿವಾಸಮೂರ್ತಿಯ ಹೇಳಿಕೆಯಿಂದ ಸಿದ್ದರಾಮಯ್ಯಗೆ ನಾಚಿಕೆಯಾಗಬೇಕು: ಈಶ್ವರಪ್ಪ

ಸಿಎಂ ಸ್ಥಾನದಿಂದ ಬಿಎಸ್ ಯಡಿಯೂರಪ್ಪನವರ ಪದಚ್ಯುತಿಗೆ ಹುನ್ನಾರ ನಡೀತಿದೆ ಎಂದು ನಿನ್ನೆ ಟ್ವೀಟ್ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಇಂದು ವಿಧಾನಸಭೆಯಲ್ಲಿ ತಿರುಗೇಟು ನೀಡಿದರು. ‘‘ಸಿದ್ದರಾಮಯ್ಯಗೆ ಸಿಎಂ ಕುರ್ಚಿ ಮೇಲೆ ವ್ಯಾಮೋಹ ಇನ್ನೂ ಹೋಗಿಲ್ಲ. ಹಿಂದೆ, ರಾಜ್ಯದಲ್ಲಿ ಬಿಜೆಪಿ ಇಬ್ಭಾಗವಾಗಿದ್ದರಿಂದಲೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವುದು ಸಾಧ್ಯವಾಯಿತು. ಆದರೆ, ಸಿಎಂ ಆದ ನಂತರ ಸಿದ್ದರಾಮಯ್ಯ ಮಾಡಿದ್ದೇನು? ಅವರ ಅವಧಿಯಲ್ಲೇ ಗುಂಪುಗಾರಿಗೆ ಹೆಚ್ಚಾಯಿತು, ಹಾಗಾಗಿ ಈ ಜನ್ಮದಲ್ಲಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಲ್ಲ,’’ […]

ಅಖಂಡ ಶ್ರೀನಿವಾಸಮೂರ್ತಿಯ ಹೇಳಿಕೆಯಿಂದ ಸಿದ್ದರಾಮಯ್ಯಗೆ ನಾಚಿಕೆಯಾಗಬೇಕು: ಈಶ್ವರಪ್ಪ
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 19, 2020 | 8:33 PM

Share

ಸಿಎಂ ಸ್ಥಾನದಿಂದ ಬಿಎಸ್ ಯಡಿಯೂರಪ್ಪನವರ ಪದಚ್ಯುತಿಗೆ ಹುನ್ನಾರ ನಡೀತಿದೆ ಎಂದು ನಿನ್ನೆ ಟ್ವೀಟ್ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಇಂದು ವಿಧಾನಸಭೆಯಲ್ಲಿ ತಿರುಗೇಟು ನೀಡಿದರು.

‘‘ಸಿದ್ದರಾಮಯ್ಯಗೆ ಸಿಎಂ ಕುರ್ಚಿ ಮೇಲೆ ವ್ಯಾಮೋಹ ಇನ್ನೂ ಹೋಗಿಲ್ಲ. ಹಿಂದೆ, ರಾಜ್ಯದಲ್ಲಿ ಬಿಜೆಪಿ ಇಬ್ಭಾಗವಾಗಿದ್ದರಿಂದಲೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವುದು ಸಾಧ್ಯವಾಯಿತು. ಆದರೆ, ಸಿಎಂ ಆದ ನಂತರ ಸಿದ್ದರಾಮಯ್ಯ ಮಾಡಿದ್ದೇನು? ಅವರ ಅವಧಿಯಲ್ಲೇ ಗುಂಪುಗಾರಿಗೆ ಹೆಚ್ಚಾಯಿತು, ಹಾಗಾಗಿ ಈ ಜನ್ಮದಲ್ಲಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಲ್ಲ,’’ ಎಂದು ಈಶ್ವರಪ್ಪ ಕಿಚಾಯಿಸಿದರು.

‘‘ಸಿದ್ದರಾಮಯ್ಯನವರೇ, ನಿಮ್ಮ ಪಕ್ಷದ ಶಾಸಕರಾದ ಅಖಂಡ ಶ್ರೀನಿವಾಸಮೂರ್ತಿ ಖುದ್ದಾಗಿ, ‘ನಮ್ಮ ನಾಯಕರೇ ನನ್ನ ಬೆಂಬಲಕ್ಕಿಲ್ಲ ಎಂದು ಗೋಳಾಡುತ್ತಿದ್ದಾರೆ, ಸಿಬಿಐ ತನಿಖೆ ಮಾಡಿಸುವಂತೆ ಅಂಗಲಾಚುತ್ತಿದ್ದಾರೆ,’ ಅವರ ಹೇಳಿಕೆಯಿಂದ ನಿಮಗೆ ನಾಚಿಕೆಯಾಗಬೇಕು. ನಿಮ್ಮಿಂದಲೇ ಧರ್ಮಗಳ ನಡುವೆ ಗಲಭೆಗಳು ಆಗುತ್ತಿರುವುದು. ಹಿಂದೂಮುಸ್ಲಿಮರನ್ನು ನೆಮ್ಮದಿಯಾಗಿ ಬದುಕಲು ಬಿಡಿ. ಮೊನ್ನೆ ನಡೆದಿದ್ದು ಕೋಮು ಗಲಭೆಯಲ್ಲ, ಅದು ಮತಾಂಧರ ದೊಂಬಿ,’’ ಎಂದು ಈಶ್ವರಪ್ಪ ಹೇಳಿದರು.

‘‘ಸರ್ಕಾರ ಬಿದ್ದುಹೋಗಲಿ ಎಂದು ಕುತಂತ್ರ ಮಾಡ್ತಿರೋದು ಕಾಂಗ್ರೆಸ್. ನಮ್ಮ ಸರಕಾರಕ್ಕೇನೂ ಅಪಾಯವಿಲ್ಲ ಉಳಿದಿರುವ ಅವಧಿಗೆ ಬಿಎಸ್​ವೈ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ. ಸಿದ್ದರಾಮಯ್ಯ ಹಾಗೆ ಟ್ವೀಟ್ ಮಾಡುತ್ತಿರುವುದು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು,’’ ಎಂದು ಈಶ್ವರಪ್ಪ ಹೇಳಿದರು.

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ