AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಖಂಡ ಶ್ರೀನಿವಾಸಮೂರ್ತಿಯ ಹೇಳಿಕೆಯಿಂದ ಸಿದ್ದರಾಮಯ್ಯಗೆ ನಾಚಿಕೆಯಾಗಬೇಕು: ಈಶ್ವರಪ್ಪ

ಸಿಎಂ ಸ್ಥಾನದಿಂದ ಬಿಎಸ್ ಯಡಿಯೂರಪ್ಪನವರ ಪದಚ್ಯುತಿಗೆ ಹುನ್ನಾರ ನಡೀತಿದೆ ಎಂದು ನಿನ್ನೆ ಟ್ವೀಟ್ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಇಂದು ವಿಧಾನಸಭೆಯಲ್ಲಿ ತಿರುಗೇಟು ನೀಡಿದರು. ‘‘ಸಿದ್ದರಾಮಯ್ಯಗೆ ಸಿಎಂ ಕುರ್ಚಿ ಮೇಲೆ ವ್ಯಾಮೋಹ ಇನ್ನೂ ಹೋಗಿಲ್ಲ. ಹಿಂದೆ, ರಾಜ್ಯದಲ್ಲಿ ಬಿಜೆಪಿ ಇಬ್ಭಾಗವಾಗಿದ್ದರಿಂದಲೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವುದು ಸಾಧ್ಯವಾಯಿತು. ಆದರೆ, ಸಿಎಂ ಆದ ನಂತರ ಸಿದ್ದರಾಮಯ್ಯ ಮಾಡಿದ್ದೇನು? ಅವರ ಅವಧಿಯಲ್ಲೇ ಗುಂಪುಗಾರಿಗೆ ಹೆಚ್ಚಾಯಿತು, ಹಾಗಾಗಿ ಈ ಜನ್ಮದಲ್ಲಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಲ್ಲ,’’ […]

ಅಖಂಡ ಶ್ರೀನಿವಾಸಮೂರ್ತಿಯ ಹೇಳಿಕೆಯಿಂದ ಸಿದ್ದರಾಮಯ್ಯಗೆ ನಾಚಿಕೆಯಾಗಬೇಕು: ಈಶ್ವರಪ್ಪ
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 19, 2020 | 8:33 PM

Share

ಸಿಎಂ ಸ್ಥಾನದಿಂದ ಬಿಎಸ್ ಯಡಿಯೂರಪ್ಪನವರ ಪದಚ್ಯುತಿಗೆ ಹುನ್ನಾರ ನಡೀತಿದೆ ಎಂದು ನಿನ್ನೆ ಟ್ವೀಟ್ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಇಂದು ವಿಧಾನಸಭೆಯಲ್ಲಿ ತಿರುಗೇಟು ನೀಡಿದರು.

‘‘ಸಿದ್ದರಾಮಯ್ಯಗೆ ಸಿಎಂ ಕುರ್ಚಿ ಮೇಲೆ ವ್ಯಾಮೋಹ ಇನ್ನೂ ಹೋಗಿಲ್ಲ. ಹಿಂದೆ, ರಾಜ್ಯದಲ್ಲಿ ಬಿಜೆಪಿ ಇಬ್ಭಾಗವಾಗಿದ್ದರಿಂದಲೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವುದು ಸಾಧ್ಯವಾಯಿತು. ಆದರೆ, ಸಿಎಂ ಆದ ನಂತರ ಸಿದ್ದರಾಮಯ್ಯ ಮಾಡಿದ್ದೇನು? ಅವರ ಅವಧಿಯಲ್ಲೇ ಗುಂಪುಗಾರಿಗೆ ಹೆಚ್ಚಾಯಿತು, ಹಾಗಾಗಿ ಈ ಜನ್ಮದಲ್ಲಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಲ್ಲ,’’ ಎಂದು ಈಶ್ವರಪ್ಪ ಕಿಚಾಯಿಸಿದರು.

‘‘ಸಿದ್ದರಾಮಯ್ಯನವರೇ, ನಿಮ್ಮ ಪಕ್ಷದ ಶಾಸಕರಾದ ಅಖಂಡ ಶ್ರೀನಿವಾಸಮೂರ್ತಿ ಖುದ್ದಾಗಿ, ‘ನಮ್ಮ ನಾಯಕರೇ ನನ್ನ ಬೆಂಬಲಕ್ಕಿಲ್ಲ ಎಂದು ಗೋಳಾಡುತ್ತಿದ್ದಾರೆ, ಸಿಬಿಐ ತನಿಖೆ ಮಾಡಿಸುವಂತೆ ಅಂಗಲಾಚುತ್ತಿದ್ದಾರೆ,’ ಅವರ ಹೇಳಿಕೆಯಿಂದ ನಿಮಗೆ ನಾಚಿಕೆಯಾಗಬೇಕು. ನಿಮ್ಮಿಂದಲೇ ಧರ್ಮಗಳ ನಡುವೆ ಗಲಭೆಗಳು ಆಗುತ್ತಿರುವುದು. ಹಿಂದೂಮುಸ್ಲಿಮರನ್ನು ನೆಮ್ಮದಿಯಾಗಿ ಬದುಕಲು ಬಿಡಿ. ಮೊನ್ನೆ ನಡೆದಿದ್ದು ಕೋಮು ಗಲಭೆಯಲ್ಲ, ಅದು ಮತಾಂಧರ ದೊಂಬಿ,’’ ಎಂದು ಈಶ್ವರಪ್ಪ ಹೇಳಿದರು.

‘‘ಸರ್ಕಾರ ಬಿದ್ದುಹೋಗಲಿ ಎಂದು ಕುತಂತ್ರ ಮಾಡ್ತಿರೋದು ಕಾಂಗ್ರೆಸ್. ನಮ್ಮ ಸರಕಾರಕ್ಕೇನೂ ಅಪಾಯವಿಲ್ಲ ಉಳಿದಿರುವ ಅವಧಿಗೆ ಬಿಎಸ್​ವೈ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ. ಸಿದ್ದರಾಮಯ್ಯ ಹಾಗೆ ಟ್ವೀಟ್ ಮಾಡುತ್ತಿರುವುದು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು,’’ ಎಂದು ಈಶ್ವರಪ್ಪ ಹೇಳಿದರು.

ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್