Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಶಕಗಳ ಸ್ನೇಹಿತರ ಮಧ್ಯೆ ಹಣಕಾಸಿನ ವ್ಯವಹಾರ; ಶ್ರೀರಾಂಪುರದ ಕುಮಾರ್​ನನ್ನ ಕೊಲೆ ಮಾಡಿದವ ಅಂದರ್​

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಪರಾಧ ಸಂಖ್ಯೆಗಳು ಹೆಚ್ಚುತ್ತಲ್ಲೇ ಇದೆ. ಕೂತು ಮಾತನಾಡಿ ಬಗೆಹರಿಸಿಕೊಳ್ಳುವ ವಿಷಯದಲ್ಲೂ ಕೂಡ ಕೊಲೆ ನಡೆಯುತ್ತಿರುವುದು ಆತಂಕಕಾರಿಯಾಗಿದೆ. ಅದರಂತೆ ನಿನ್ನೆ(ಜು.08) ನಡೆದಿದ್ದ ಶ್ರೀರಾಂಪುರ(Srirampura) ದ ಕುಮಾರ್ ಎಂಬಾತನ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ದಶಕಗಳ ಸ್ನೇಹಿತರ ಮಧ್ಯೆ ಹಣಕಾಸಿನ ವ್ಯವಹಾರ; ಶ್ರೀರಾಂಪುರದ ಕುಮಾರ್​ನನ್ನ ಕೊಲೆ ಮಾಡಿದವ ಅಂದರ್​
ಹತ್ಯೆಯಾದ ಶ್ರೀರಾಂಪುರ ಕುಮಾರ್​, ಆರೋಪಿ ದಯಾಳ್​
Follow us
ರಾಚಪ್ಪಾಜಿ ನಾಯ್ಕ್
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 09, 2024 | 3:17 PM

ಬೆಂಗಳೂರು, ಜು.09: ನಗರದ ಶ್ರೀರಾಂಪುರ(Srirampura) ದ ಕುಮಾರ್ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶ್ರೀರಾಂಪುರ ಪೊಲೀಸರು(Police) ಕೊಲೆ ಆರೋಪಿ ದಯಾಳ್ ಎಂಬಾತನನ್ನು ಬಂಧಿಸಿದ್ದಾರೆ. ಇನ್ನು ಹತ್ಯೆ ಕುರಿತು ವಿಚಾರಣೆ ನಡೆಸಿದಾಗ ಅಸಲಿ ಸತ್ಯ ಹೊರಬಿದ್ದಿದ್ದು, ದಶಕಗಳ ಸ್ನೇಹಿತರ ಮಧ್ಯೆ ಹಣಕಾಸಿನ ವಿಚಾರಕ್ಕೆ ಕೊಲೆ ನಡೆದಿರುವುದು ಖಚಿತವಾಗಿದೆ.

ಆಗಿದ್ದೇನು?

ಕುಮಾರ್ ಹಾಗೂ ದಯಾಳ್ 15 ವರ್ಷದ ಸ್ನೇಹಿತರು, ಕುಮಾರ್ ಹೋಟೆಲ್ ಬ್ಯುಸಿನೆಸ್ ಮಾಡಿಕೊಂಡಿದ್ದರೆ, ದಯಾಳ್ ಫೈನಾನ್ಸ್ ವ್ಯವಹಾರ ಮಾಡಿಕೊಂಡಿದ್ದ. ಇಬ್ಬರ ಮಧ್ಯೆ ಸ್ನೇಹವಿದ್ದ ಹಿನ್ನಲೆ 10 ವರ್ಷದಿಂದ ಕುಮಾರ್​ಗೆ 50 ಲಕ್ಷ ಹಣವನ್ನು ಹಂತ ಹಂತವಾಗಿ ದಯಾಳ್ ಕೊಡುತ್ತಾ ಬಂದಿದ್ದಾನೆ. ಇತ್ತೀಚೆಗೆ ದಯಾಳ್ ಕೂಡ ವ್ಯವಹಾರದಲ್ಲಿ ನಷ್ಟ ಅನುಭವಿಸಿದ್ದ. ಈ ಹಿನ್ನಲೆ ನಾನು ಕೊಟ್ಟ ಹಣವನ್ನು ವಾಪಾಸ್​ ಕೊಡುವಂತೆ ಕುಮಾರ್​ನನ್ನ ಕೇಳುತ್ತಿದ್ದ. ಆದರೆ, ಕುಮಾರ್ ಹಣ ನೀಡಿರಲಿಲ್ಲ. ಇದೇ ವಿಚಾರವಾಗಿ ಇಬ್ಬರ ಮಧ್ಯೆ ಗಲಾಟೆಯಾಗಿ ನಿನ್ನೆ(ಜು.08) ಪಾರ್ಟಿ ಮಾಡೋಣ ಎಂದು ಕುಮಾರ್​ನನ್ನ ಕರೆದೊಯ್ದಿದ್ದ ದಯಾಳ್, ಗಲಾಟೆ ನಡೆದು ಕುಮಾರ್​ನನ್ನು ಕೊಲೆ ಮಾಡಿದ್ದಾನಂತೆ.

ಇದನ್ನೂ ಓದಿ:Crime News: ಪ್ರೇಮಿಯ ಮೇಲಿನ ಕೋಪಕ್ಕೆ 7 ವರ್ಷದ ಮಗುವನ್ನು ಗೋಡೆಗೆ ಬಡಿದು ಕೊಲೆ

ಮೂರು ಸ್ಟೀಲ್ ಅಂಗಡಿಯ ಶಟರ್ಸ್ ಮುರಿದು ಕಳ್ಳತನ

ಹುಬ್ಬಳ್ಳಿ: ಛೋಟಾ ಬಾಂಬೆ ಹುಬ್ಬಳ್ಳಿಯಲ್ಲಿ ಸರಣಿ‌ ಕಳ್ಳತನವಾಗಿದ್ದು, ಹುಬ್ಬಳ್ಳಿಯ ಮಹಾವೀರ ಗಲ್ಲಿಯಲ್ಲಿನ ಮೂರು ಸ್ಟೀಲ್ ಅಂಗಡಿಯ ಶಟರ್ಸ್ ಮುರಿದು ಖದೀಮರು ಕನ್ನ ಹಾಕಿದ್ದಾರೆ. ಅಲ್ಲಿದ್ದ ಸುಮಾರು ಒಂದು‌ ಲಕ್ಷ ಹಣ ದೋಚಿ ಪರಾರಿಯಾಗಿದ್ದು, ಸರಣಿ‌ ಅಂಗಡಿ ಕಳ್ಳತನ ಮಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಿನ್ನೆ ತಡರಾತ್ರಿ ಎರಡು ಗಂಟೆ ಸುಮಾರಿಗೆ ಮಂಕಿ ಕ್ಯಾಪ್ ,ಮುಖಕ್ಕೆ ಮಾಸ್ಕ್ ಹಾಕಿಕೊಂಡು ಶಟರ್ಸ್ ಮುರಿದು, ಹಣ ದೋಚಿಕೊಂಡು ಪರಾರಿಯಾಗಿದ್ದಾರೆ. ಈ ಕುರಿತು ಹುಬ್ಬಳ್ಳಿಯ ಶಹರ ಠಾಣೆ, ಕಮರಿ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:14 pm, Tue, 9 July 24

28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!