Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತದಲ್ಲಿ ಮೃತಪಟ್ಟ KSRTC ಚಾಲಕನ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಚೆಕ್ ವಿತರಿಸಿದ ಶ್ರೀರಾಮುಲು

ಅಪಘಾತದಲ್ಲಿ ಮೃತಪಟ್ಟ KSRTC ಚಾಲಕನ ಕುಟುಂಬಕ್ಕೆ ಸಚಿವ ಬಿ. ಶ್ರೀರಾಮುಲು ನೆರವು ನೀಡಿದ್ದು, 1 ಕೋಟಿ ರೂ. ಪರಿಹಾರದ ಚೆಕ್ ವಿತರಣೆ ಮಾಡಿದ್ದಾರೆ.

ಅಪಘಾತದಲ್ಲಿ ಮೃತಪಟ್ಟ KSRTC ಚಾಲಕನ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಚೆಕ್ ವಿತರಿಸಿದ ಶ್ರೀರಾಮುಲು
ಸಚಿವ ಶ್ರೀರಾಮುಲು (ಸಂಗ್ರಹ ಚಿತ್ರ)
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Dec 31, 2022 | 2:56 PM

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ KSRTC ಚಾಲಕನ ಕುಟುಂಬಕ್ಕೆ ಸಚಿವ ಬಿ. ಶ್ರೀರಾಮುಲು (B.Sriramulu) ನೆರವು ನೀಡಿದ್ದು, 1 ಕೋಟಿ ರೂ. ಪರಿಹಾರದ ಚೆಕ್ ವಿತರಣೆ ಮಾಡಿದ್ದಾರೆ. ಡಿಪೋದ ಚಾಲಕ ಕಂ ನಿರ್ವಾಹಕರಾಗಿದ್ದ J.S​​.ಉಮೇಶ್ ಇತ್ತೀಚೆಗೆ ಅಪಘಾತದಲ್ಲಿ ಮೃತ್ತಪಟ್ಟಿದ್ದರು. ಇನ್ಶೂರೆನ್ಸ್ ಕೋಟಾ ಮೂಲಕ ಒಂದು ಕೋಟಿ ರೂ. ಮತ್ತು ಕೆಎಸ್ಆರ್​ಟಿಸಿ ನಿಗಮದಿಂದ ಪ್ರತ್ಯೇಕವಾಗಿ 13 ಲಕ್ಷ ರೂ. ಪರಿಹಾರವನ್ನು ಶಾಂತಿನಗರದ KSRTC ಕೇಂದ್ರ ಕಚೇರಿಯಲ್ಲಿ ಉಮೇಶ್ ಕುಟುಂಬವನ್ನ ಕರೆಸಿ ಚೆಕ್ ವಿತರಣೆ ಮಾಡಲಾಗಿದೆ. ಅಲ್ಲಿಗೆ ಮಾತಿಗೆ ತಕ್ಕಂತೆ ಚಿತ್ರದುರ್ಗ ಕೆಎಸ್​​ಆರ್​ಟಿಸಿ ನಿಗಮ ನಡೆದುಕೊಂಡಿದೆ.

ಇದನ್ನೂ ಓದಿ: ಕುಚುಕು ಗೆಳೆಯ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಬಗ್ಗೆ ಮೊದಲ ಪ್ರತಿಕ್ರಿಯೆಯಲ್ಲೇ ಅಚ್ಚರಿ ಮಾತುಗಳಾನ್ನಾಡಿದ ಶ್ರೀರಾಮುಲು!

KSRTC EV ಪವರ್ ಪ್ಲಸ್ ಬಸ್​​​ಗೆ ಹಸಿರು ನಿಶಾನೆ ತೋರಿದ ಸಚಿವ ಶ್ರೀರಾಮುಲು

ಎಲೆಕ್ಟ್ರಿಕ್ ಬಸ್​​ (Electric Bus)ಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರು ಹಸಿರು ನಿಶಾನೆ ತೋರಿದ್ದು, ಇಂದಿನಿಂದಲೇ ಸಾರ್ವಜನಿಕರ ಸೇವೆಗೆ ಕಾರ್ಯಾಚರಣೆ ಆರಂಭಿಸಲಿದೆ. MEIL ಹಾಗೂ KSRTC ಜಂಟಿಯಾಗಿ ರಸ್ತೆಗೆ ಇಳಿಯುತ್ತಿರುವ ಈ ಹೊಸ ಬಸ್‌ಗೆ EV ಪವರ್ ಪ್ಲಸ್ ಎಂದು ಹೆಸರಿಡಲಾಗಿದೆ.​ KSRTC EV ಪವರ್ ಪ್ಲಸ್ ಹಲವು ವಿಶೇಷತೆಗಳನ್ನು ಹೊಂದಿದ್ದು, ಅವುಗಳು ಈ ಕೆಳಗಿನಂತಿವೆ.

  • ಎರಡೂವರೆ ತಾಸು ಚಾರ್ಜ್ ಮಾಡಿದರೆ 300 km ಕ್ರಮಿಸುವಷ್ಟು ಸಾಮರ್ಥ್ಯ ಈ ಬಸ್ ಹೊಂದಿದೆ
  • ಬಸ್ ಸಂಪೂರ್ಣ ಹವಾನಿಯಂತ್ರಿತ ವ್ಯವಸ್ಥೆ
  • ನೂತನ ತಂತ್ರಜ್ಞಾನವಾದ ರಿ ಜನರೇಷನ್ ಸಿಸ್ಟಮ್ ಅಳವಡಿಕೆ ಮಾಡಲಾಗಿದೆ
  • ಸಂಚರಿಸುವ ಹೊತ್ತಲ್ಲೇ ಅರ್ಧದಷ್ಟು ಬ್ಯಾಟರಿ ರಿ ಚಾರ್ಜ್ ಆಗುವ ರಿ ಜನರೇಷನ್ ಆಗುವ ಸಿಸ್ಟಮ್ ಈ ಬಸ್​​ನಲ್ಲಿ ಇದೆ
  • ಬಸ್ ಒಳಗೆ ಪ್ರಯಾಣಿಕರ ಅನುಕೂಲಕ್ಕೆ ಮೊಬೈಲ್ ಚಾರ್ಜಿಂಗ್ ಸ್ಪಾಟ್ಸ್ ಇದೆ
  • ಮನರಂಜನೆಗಾಗಿ ಎರಡು ಟಿವಿ ಅಳವಡಿಕೆ ಮಾಡಲಾಗಿದೆ

ಇದನ್ನೂ ಓದಿ: ಸ್ನೇಹವೋ.. ಅಧಿಕಾರವೋ.. ಆಪ್ತ ಸ್ನೇಹಿತ‌ನ ರೀ ಎಂಟ್ರೀ, ಇಕ್ಕಟ್ಟಿಗೆ ಸಿಲುಕಿದ ಸಚಿವ ಶ್ರೀರಾಮುಲು…!

ಇದಲ್ಲದೆ, ಈ ಪರಿಸರ ಸ್ನೇಹಿ ಬಸ್ ಸಂಪೂರ್ಣವಾಗಿ ಸೆನ್ಸಾರ್ ಹಿಡಿತದಲ್ಲಿ ಇರಲಿದ್ದು, ಒಟ್ಟಾರೆ ಬಸ್​​ನಲ್ಲಿ 43 + 2 ಸೀಟಿಂಗ್ ಕೆಪಾಸಿಟಿ ಇದೆ. ಫ್ರಂಟ್ ಲಾಗ್ ಮತ್ತು ಬ್ಯಾಕ್ ಲಾಗ್ ಕ್ಯಾಮೆರಾ ವ್ಯವಸ್ಥೆ ಇರಲಿದೆ. ಡ್ರೈವರ್ ಎಂಡ್ ಸಂಪೂರ್ಣವಾಗಿ ಡಿಜಿಟಲೈಸ್ಡ್ ಸಿಸ್ಟಮ್ ಹೊಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ