AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತದಲ್ಲಿ ಮೃತಪಟ್ಟ KSRTC ಚಾಲಕನ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಚೆಕ್ ವಿತರಿಸಿದ ಶ್ರೀರಾಮುಲು

ಅಪಘಾತದಲ್ಲಿ ಮೃತಪಟ್ಟ KSRTC ಚಾಲಕನ ಕುಟುಂಬಕ್ಕೆ ಸಚಿವ ಬಿ. ಶ್ರೀರಾಮುಲು ನೆರವು ನೀಡಿದ್ದು, 1 ಕೋಟಿ ರೂ. ಪರಿಹಾರದ ಚೆಕ್ ವಿತರಣೆ ಮಾಡಿದ್ದಾರೆ.

ಅಪಘಾತದಲ್ಲಿ ಮೃತಪಟ್ಟ KSRTC ಚಾಲಕನ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಚೆಕ್ ವಿತರಿಸಿದ ಶ್ರೀರಾಮುಲು
ಸಚಿವ ಶ್ರೀರಾಮುಲು (ಸಂಗ್ರಹ ಚಿತ್ರ)
TV9 Web
| Edited By: |

Updated on: Dec 31, 2022 | 2:56 PM

Share

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ KSRTC ಚಾಲಕನ ಕುಟುಂಬಕ್ಕೆ ಸಚಿವ ಬಿ. ಶ್ರೀರಾಮುಲು (B.Sriramulu) ನೆರವು ನೀಡಿದ್ದು, 1 ಕೋಟಿ ರೂ. ಪರಿಹಾರದ ಚೆಕ್ ವಿತರಣೆ ಮಾಡಿದ್ದಾರೆ. ಡಿಪೋದ ಚಾಲಕ ಕಂ ನಿರ್ವಾಹಕರಾಗಿದ್ದ J.S​​.ಉಮೇಶ್ ಇತ್ತೀಚೆಗೆ ಅಪಘಾತದಲ್ಲಿ ಮೃತ್ತಪಟ್ಟಿದ್ದರು. ಇನ್ಶೂರೆನ್ಸ್ ಕೋಟಾ ಮೂಲಕ ಒಂದು ಕೋಟಿ ರೂ. ಮತ್ತು ಕೆಎಸ್ಆರ್​ಟಿಸಿ ನಿಗಮದಿಂದ ಪ್ರತ್ಯೇಕವಾಗಿ 13 ಲಕ್ಷ ರೂ. ಪರಿಹಾರವನ್ನು ಶಾಂತಿನಗರದ KSRTC ಕೇಂದ್ರ ಕಚೇರಿಯಲ್ಲಿ ಉಮೇಶ್ ಕುಟುಂಬವನ್ನ ಕರೆಸಿ ಚೆಕ್ ವಿತರಣೆ ಮಾಡಲಾಗಿದೆ. ಅಲ್ಲಿಗೆ ಮಾತಿಗೆ ತಕ್ಕಂತೆ ಚಿತ್ರದುರ್ಗ ಕೆಎಸ್​​ಆರ್​ಟಿಸಿ ನಿಗಮ ನಡೆದುಕೊಂಡಿದೆ.

ಇದನ್ನೂ ಓದಿ: ಕುಚುಕು ಗೆಳೆಯ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಬಗ್ಗೆ ಮೊದಲ ಪ್ರತಿಕ್ರಿಯೆಯಲ್ಲೇ ಅಚ್ಚರಿ ಮಾತುಗಳಾನ್ನಾಡಿದ ಶ್ರೀರಾಮುಲು!

KSRTC EV ಪವರ್ ಪ್ಲಸ್ ಬಸ್​​​ಗೆ ಹಸಿರು ನಿಶಾನೆ ತೋರಿದ ಸಚಿವ ಶ್ರೀರಾಮುಲು

ಎಲೆಕ್ಟ್ರಿಕ್ ಬಸ್​​ (Electric Bus)ಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರು ಹಸಿರು ನಿಶಾನೆ ತೋರಿದ್ದು, ಇಂದಿನಿಂದಲೇ ಸಾರ್ವಜನಿಕರ ಸೇವೆಗೆ ಕಾರ್ಯಾಚರಣೆ ಆರಂಭಿಸಲಿದೆ. MEIL ಹಾಗೂ KSRTC ಜಂಟಿಯಾಗಿ ರಸ್ತೆಗೆ ಇಳಿಯುತ್ತಿರುವ ಈ ಹೊಸ ಬಸ್‌ಗೆ EV ಪವರ್ ಪ್ಲಸ್ ಎಂದು ಹೆಸರಿಡಲಾಗಿದೆ.​ KSRTC EV ಪವರ್ ಪ್ಲಸ್ ಹಲವು ವಿಶೇಷತೆಗಳನ್ನು ಹೊಂದಿದ್ದು, ಅವುಗಳು ಈ ಕೆಳಗಿನಂತಿವೆ.

  • ಎರಡೂವರೆ ತಾಸು ಚಾರ್ಜ್ ಮಾಡಿದರೆ 300 km ಕ್ರಮಿಸುವಷ್ಟು ಸಾಮರ್ಥ್ಯ ಈ ಬಸ್ ಹೊಂದಿದೆ
  • ಬಸ್ ಸಂಪೂರ್ಣ ಹವಾನಿಯಂತ್ರಿತ ವ್ಯವಸ್ಥೆ
  • ನೂತನ ತಂತ್ರಜ್ಞಾನವಾದ ರಿ ಜನರೇಷನ್ ಸಿಸ್ಟಮ್ ಅಳವಡಿಕೆ ಮಾಡಲಾಗಿದೆ
  • ಸಂಚರಿಸುವ ಹೊತ್ತಲ್ಲೇ ಅರ್ಧದಷ್ಟು ಬ್ಯಾಟರಿ ರಿ ಚಾರ್ಜ್ ಆಗುವ ರಿ ಜನರೇಷನ್ ಆಗುವ ಸಿಸ್ಟಮ್ ಈ ಬಸ್​​ನಲ್ಲಿ ಇದೆ
  • ಬಸ್ ಒಳಗೆ ಪ್ರಯಾಣಿಕರ ಅನುಕೂಲಕ್ಕೆ ಮೊಬೈಲ್ ಚಾರ್ಜಿಂಗ್ ಸ್ಪಾಟ್ಸ್ ಇದೆ
  • ಮನರಂಜನೆಗಾಗಿ ಎರಡು ಟಿವಿ ಅಳವಡಿಕೆ ಮಾಡಲಾಗಿದೆ

ಇದನ್ನೂ ಓದಿ: ಸ್ನೇಹವೋ.. ಅಧಿಕಾರವೋ.. ಆಪ್ತ ಸ್ನೇಹಿತ‌ನ ರೀ ಎಂಟ್ರೀ, ಇಕ್ಕಟ್ಟಿಗೆ ಸಿಲುಕಿದ ಸಚಿವ ಶ್ರೀರಾಮುಲು…!

ಇದಲ್ಲದೆ, ಈ ಪರಿಸರ ಸ್ನೇಹಿ ಬಸ್ ಸಂಪೂರ್ಣವಾಗಿ ಸೆನ್ಸಾರ್ ಹಿಡಿತದಲ್ಲಿ ಇರಲಿದ್ದು, ಒಟ್ಟಾರೆ ಬಸ್​​ನಲ್ಲಿ 43 + 2 ಸೀಟಿಂಗ್ ಕೆಪಾಸಿಟಿ ಇದೆ. ಫ್ರಂಟ್ ಲಾಗ್ ಮತ್ತು ಬ್ಯಾಕ್ ಲಾಗ್ ಕ್ಯಾಮೆರಾ ವ್ಯವಸ್ಥೆ ಇರಲಿದೆ. ಡ್ರೈವರ್ ಎಂಡ್ ಸಂಪೂರ್ಣವಾಗಿ ಡಿಜಿಟಲೈಸ್ಡ್ ಸಿಸ್ಟಮ್ ಹೊಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ