AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Grace Marks:ವಿದ್ಯಾರ್ಥಿಗಳ ಕೈ ಮೇಲುಗೈಯಾಯ್ತು; ಎಸ್ಎಸ್ಎಲ್​ಸಿ ಮಂಡಳಿ ದಯಪಾಲಿಸಿತು 1 ದಯಾಂಕ

ಈಗ ಒಟ್ಟು 11 ವಿಷಯಗಳ ಪೈಕಿ ಪ್ರಥಮ ಭಾಷೆ ಕನ್ನಡ ವಿಷಯದ ಪ್ರಶ್ನೆ ಪತ್ರಿಕೆಯ ಪ್ರಶ್ನೆ ಸಂಖ್ಯೆ 19ಕ್ಕೆ 01 ಕೃಪಾಂಕ ನೀಡಬಹುದೆಂದು ಪರಿಶೀಲನಾ ಸಮಿತಿಯವರು ಅಭಿಪ್ರಾಯ ನೀಡಿರುತ್ತಾರೆ. ಆದ್ದರಿಂದ ಸದರಿ ವಿಷಯದಲ್ಲಿ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳಿಗೂ 01 ಕೃಪಾಂಕ ನೀಡಲಾಗಿದೆ.

SSLC Grace Marks:ವಿದ್ಯಾರ್ಥಿಗಳ ಕೈ ಮೇಲುಗೈಯಾಯ್ತು; ಎಸ್ಎಸ್ಎಲ್​ಸಿ ಮಂಡಳಿ ದಯಪಾಲಿಸಿತು 1 ದಯಾಂಕ
ಸಾಂಕೇತಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on:Aug 01, 2021 | 12:59 PM

Share

ಬೆಂಗಳೂರು: ಎಸ್ಎಸ್ಎಲ್ಸಿ(SSLC) ಪರೀಕ್ಷೆ ನಡೆದ ಬಳಿಕ ದಾವಣಗೆರೆ ವಿದ್ಯಾರ್ಥಿನಿ ಕನ್ನಡ ಭಾಷೆ (First Language) ಪರೀಕ್ಷೆಯಲ್ಲಿ ಒಂದು ಪ್ರಶ್ನೆ ಗೊಂದಲವನ್ನುಂಟು ಮಾಡಿದ್ದು ಅದಕ್ಕೆ ಗ್ರೇಸ್ ಮಾರ್ಕ್ಸ್ ನಿಡಬೇಕೆಂದು ಒತ್ತಾಯಿಸಿದ್ದರು. ಅದರಂತೆ ವಿದ್ಯಾರ್ಥಿನಿ ಹೋರಾಟಕ್ಕೆ ಒಂದು ಕೃಪಾಂಕ ನೀಡಲು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧರಿಸಿದೆ.

2021ನೇ ಸಾಲಿನ ಜುಲೈ 19 ಮತ್ತು ಜುಲೈ 22ರಂದು ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳ ಕೀ ಉತ್ತರಗಳನ್ನು ಮಂಡಳಿಯ ವೆಬ್ಸೈಟ್ನಲ್ಲಿ ಅಳವಡಿಸಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಂದ ಅಕ್ಷೇಪಣೆಗಳಿದ್ದಲ್ಲಿ ಸಲ್ಲಿಸುವಂತೆ ತಿಳಿಸಲಾಗಿತ್ತು.

ಈ ಸಂಬಂಧ ಒಟ್ಟು 11 ವಿಷಯಗಳ ಕೀ ಉತ್ತರಗಳ ಮೇಲೆ ಆಕ್ಷೇಪಣೆಗಳು ಸಲ್ಲಿಕೆಯಾಗಿವೆ. ಸದರಿ ಅಕ್ಷೇಪಣೆಗಳನ್ನು ಸಂಬಂಧಿಸಿದ ವಿಷಯ ತಜ್ಞರು ಸಮಿತಿಯವರಿಂದ ಮತ್ತೊಮ್ಮೆ ಪರಿಶೀಲನೆಗೆ ಒಳಪಡಿಸಲಾಗಿತ್ತು. ಸದ್ಯ ಈಗ ಒಟ್ಟು 11 ವಿಷಯಗಳ ಪೈಕಿ ಪ್ರಥಮ ಭಾಷೆ ಕನ್ನಡ ವಿಷಯದ ಪ್ರಶ್ನೆ ಪತ್ರಿಕೆಯ ಪ್ರಶ್ನೆ ಸಂಖ್ಯೆ 19ಕ್ಕೆ 01 ಕೃಪಾಂಕ ನೀಡಬಹುದೆಂದು ಪರಿಶೀಲನಾ ಸಮಿತಿಯವರು ಅಭಿಪ್ರಾಯ ನೀಡಿರುತ್ತಾರೆ. ಆದ್ದರಿಂದ ಸದರಿ ವಿಷಯದಲ್ಲಿ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳಿಗೂ 01 ಕೃಪಾಂಕ ನೀಡಲಾಗಿದೆ. ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಣೆ ಹೊರಡಿಸಿದೆ. SSLC Grace Marks

ಇದನ್ನೂ ಓದಿ: ಗೊಂದಲದ ಪ್ರಶ್ನೋತ್ತರಕ್ಕೆ ಗ್ರೇಸ್ ಅಂಕ ನೀಡಿ, ವಿಡಿಯೋ ಮೂಲಕ ಶಿಕ್ಷಣ ಸಚಿವ ಸುರೇಶ್​ ಕುಮಾರ್​ಗೆ ವಿದ್ಯಾರ್ಥಿನಿ ಒತ್ತಾಯ

Published On - 12:41 pm, Sun, 1 August 21

Follow Us
Web contact
Web contact

TV9 Kannada

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ