Karnataka SSLC exam 3 result 2024: ಎಸ್​ಎಸ್​ಎಲ್​ಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟ, ನೋಡೋದು ಹೇಗೆ? ಇಲ್ಲಿದೆ ಮಾಹಿತಿ

ಕರ್ನಾಟಕ ಎಸ್​ಎಸ್​ಎಲ್​ಸಿ ಪರೀಕ್ಷೆ-3 2024 ಫಲಿತಾಂಶ: karresults.nic.in ಜಾಲತಾಣದಲ್ಲಿ ಫಲಿತಾಂಶ ಬಿಡಲಾಗಿದೆ. ಫಲಿತಾಂಶಗಳನ್ನು ಪರಿಶೀಲಿಸಲು ಅಭ್ಯರ್ಥಿಗಳು ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ, ವಿವರಗಳನ್ನು ನಮೂದಿಸಬೇಕಾಗುತ್ತದೆ. ಎಸ್​ಎಸ್​ಎಲ್​ಸಿ ಪರೀಕ್ಷೆ-3 ಇದೇ ತಿಂಗಳ ಆಗಸ್ಟ್​ 2 ರಿಂದ 9ರವರೆಗೆ ನಡೆಸಲಾಗಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

Karnataka SSLC exam 3 result 2024: ಎಸ್​ಎಸ್​ಎಲ್​ಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟ, ನೋಡೋದು ಹೇಗೆ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು Edited By:

Updated on: Aug 26, 2024 | 2:23 PM

ಬೆಂಗಳೂರು, ಆಗಸ್ಟ್​.26: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು (KSEAB) ಎಸ್​ಎಸ್​ಎಲ್​ಸಿ ಪರೀಕ್ಷೆ-3ರ ಫಲಿತಾಂಶವನ್ನು ಇಂದು (ಆಗಸ್ಟ್ 26) ಪ್ರಕಟಿಸಿದೆ. ಮಧ್ಯಾಹ್ನ 12 ಗಂಟೆ ಬಳಿಕ https://karresults.nic.in ಜಾಲತಾಣದಲ್ಲಿ ಫಲಿತಾಂಶ ಬಿಡಲಾಗಿದೆ. ಫಲಿತಾಂಶಗಳನ್ನು ಪರಿಶೀಲಿಸಲು ಅಭ್ಯರ್ಥಿಗಳು ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ, ವಿವರಗಳನ್ನು ನಮೂದಿಸಬೇಕಾಗುತ್ತದೆ.

ಎಸ್​ಎಸ್​ಎಲ್​ಸಿ ಪರೀಕ್ಷೆ-3 ಇದೇ ತಿಂಗಳ ಆಗಸ್ಟ್​ 2 ರಿಂದ 9ರವರೆಗೆ ನಡೆಸಲಾಗಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ಇದಕ್ಕೂ ಮೊದಲು, ಎಸ್‌ಎಸ್‌ಎಲ್‌ಸಿ ಪರೀಕ್ಷೆ 2 ಮತ್ತು 1 ಫಲಿತಾಂಶಗಳನ್ನು ಜುಲೈ 10 ಮತ್ತು ಮೇ 9, 2024 ರಂದು ಪ್ರಕಟಿಸಲಾಗಿದೆ. ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2ಕ್ಕೆ ಒಟ್ಟು 2,23,293 ವಿದ್ಯಾರ್ಥಿಗಳು ಹಾಜರಾಗಿದ್ದು, 69,275 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 31.02 ರಷ್ಟು ಉತ್ತೀರ್ಣರಾಗಿದ್ದಾರೆ.

ಅದರಂತೆಯೇ, ಪರೀಕ್ಷೆ 1 ರಲ್ಲಿ, ಒಟ್ಟು 8,59,967 ವಿದ್ಯಾರ್ಥಿಗಳು ಹಾಜರಾಗಿದ್ದರು. ಅವರಲ್ಲಿ 6,31,204 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. 73.40 ರಷ್ಟು ಉತ್ತೀರ್ಣರಾಗಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಎಸ್​ಎಸ್​ಎಲ್​ಸಿ ಟಾಪರ್ ಅಂಕಿತಾ

ಕರ್ನಾಟಕ SSLC ಪರೀಕ್ಷೆ 3 ಫಲಿತಾಂಶ 2024 ಪರಿಶೀಲಿಸುವುದು ಹೇಗೆ?

  • karresults.nic.in ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  • ಮುಖಪುಟದಲ್ಲಿ, ‘SSLC 2024 ಪರೀಕ್ಷೆ – 3 ಫಲಿತಾಂಶ’ ಶೀರ್ಷಿಕೆಯ ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಿ.
  • ನಿಮ್ಮ ಲಾಗಿನ್ , ಮಾಹಿತಿಯನ್ನು  ನಮೂದಿಸಿ ಮತ್ತು ಸಲ್ಲಿಸಿ.
  • ಪರದೆಯ ಮೇಲೆ ಪ್ರದರ್ಶಿಸಲಾದ ನಿಮ್ಮ ಪರೀಕ್ಷೆಯ 3 ಫಲಿತಾಂಶವನ್ನು ಪರಿಶೀಲಿಸಿ.
  • ನಿಮ್ಮ ಫಲಿತಾಂಶವನ್ನು ಡೌನ್‌ಲೋಡ್ ಮಾಡಿ
  • ಹೆಚ್ಚಿನ ವಿವರಗಳಿಗಾಗಿ, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:59 pm, Mon, 26 August 24

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us