AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್ಎಲ್​ಸಿ ಪರೀಕ್ಷೆ; ವಿದ್ಯಾರ್ಥಿಗಳಿಗೆ ಶುಭ ಕೋರಿದ ಸಿಎಂ ಬೊಮ್ಮಾಯಿ

ಎಸ್​ಎಸ್​ಎಲ್​ಸಿ ಪರೀಕ್ಷೆ ಎಲ್ಲರ ಜೀವನದಲ್ಲೂ ಅತಿ ಮುಖ್ಯ ಪರೀಕ್ಷೆ. ಪರೀಕ್ಷೆ ಬರೆಯುವುದಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆ ಬರೆದು ಉತ್ತೀರ್ಣರಾಗಬೇಕು. ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಿಎಂ ಬೊಮ್ಮಾಯಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.

ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್ಎಲ್​ಸಿ ಪರೀಕ್ಷೆ; ವಿದ್ಯಾರ್ಥಿಗಳಿಗೆ ಶುಭ ಕೋರಿದ ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.
TV9 Web
| Edited By: |

Updated on:Mar 28, 2022 | 9:43 AM

Share

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್​ಎಲ್​ಸಿ (SSLC) ಪರೀಕ್ಷೆ ಹಿನ್ನೆಲೆಯಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ (Students) ಸಿಎಂ ಬಸವರಾಜ ಬೊಮ್ಮಾಯಿ ಶುಭ ಕೋರಿದ್ದಾರೆ. ಎಸ್​ಎಸ್​ಎಲ್​ಸಿ ಪರೀಕ್ಷೆ ಎಲ್ಲರ ಜೀವನದಲ್ಲೂ ಅತಿ ಮುಖ್ಯ ಪರೀಕ್ಷೆ. ಪರೀಕ್ಷೆ ಬರೆಯುವುದಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆ ಬರೆದು ಉತ್ತೀರ್ಣರಾಗಬೇಕು. ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಿಎಂ ಬೊಮ್ಮಾಯಿ (Basavaraj Bommai) ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.

ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ಧೈರ್ಯವಾಗಿ ಪರೀಕ್ಷೆ ಬರೆಯಿರಿ: ಬಿ.ಸಿ.ನಾಗೇಶ್

ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಶುಭಾಶಯ ಕೋರಿದ್ದಾರೆ. ರಾಜ್ಯದ ಶೇ.99.9ರಷ್ಟು ಶಾಲೆಗಳಲ್ಲಿ ಯಾವುದೇ ಸಮಸ್ಯೆ ಇಲ್ಲ. ವಿದ್ಯಾರ್ಥಿಗಳು ಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕು. ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಾರೆಂಬ ವಿಶ್ವಾಸವಿದೆ. ಯಾವುದೇ ಹಿಜಾಬ್ ವಿವಾದವಾಗಲ್ಲವೆಂಬ ವಿಶ್ವಾಸವಿದೆ. ಸೂಕ್ಷ್ಮ ಪ್ರದೇಶಗಳಲ್ಲಿರುವ ಪರೀಕ್ಷಾ ಕೇಂದ್ರಗಳಲ್ಲಿ ಹೆಚ್ಚು ಭದ್ರತೆ ಮಾಡಲಾಗಿದೆ. ಶಿಕ್ಷಣ ಬೇಕು ಎನ್ನುವವರು ಬಂದು ಪರೀಕ್ಷೆ ಬರೆಯಬೇಕು. ಪರೀಕ್ಷೆ ಬರೆಯುವವರಿಗೆ ಶಿಕ್ಷಣ ಇಲಾಖೆ ವ್ಯವಸ್ಥೆ ಮಾಡುತ್ತದೆ. ಧರ್ಮವೇ ಮುಖ್ಯ ಅನ್ನೋರಿಗೆ ಏನು ಮಾಡುವುದಕ್ಕೆ ಆಗುತ್ತೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿಕೆ ನೀಡಿದ್ದಾರೆ.

ಮಲ್ಲೇಶ್ವರಂ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ಹಿನ್ನೆಲೆ ಹಬ್ಬದ ವಾತಾವರಣ

ಬೆಂಗಳೂರಿನ ಮಲ್ಲೇಶ್ವರಂ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ಹಿನ್ನೆಲೆ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಶಾಲೆಯ ಮುಖ್ಯದ್ವಾರದಲ್ಲಿ ವಿದ್ಯಾರ್ಥಿಗಳನ್ನ ಬರಮಾಡಿಕೊಳ್ಳಲು ತಳಿರು ತೋರಣ ಸಿದ್ಧಪಡಿಸಲಾಗಿದೆ. ಜತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಶಾಲಾ ಆಡಳಿತ ಮಂಡಳಿ ಸರ್ಕಲ್ ಹಾಕಿದ್ದಾರೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಕೊವಿಡ್ ನಿಮಗಳ ಬಗ್ಗೆ ಶಾಲಾ ಆಡಳಿತ ಮಂಡಳಿ ಬ್ಯಾನರ್ ಹಾಕಿದೆ. ಪರೀಕ್ಷೆಗೆ ಆಗಮಿಸುವ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಮಾಸ್ಕ್ ಮತ್ತು ಸ್ಯಾನಿಟೈಸ್​ ಮಾಡಿಕೊಂಡು ಪರೀಕ್ಷೆ ಹಾಲ್​ಗೆ ತೆರಳಬೇಕು ಎಂದು ಬ್ಯಾನರ್ ಹಾಕಿದ್ದಾರೆ.

ಎಲ್ಲ ಸಮುದಾಯಗಳ ಮಕ್ಕಳು ತಮ್ಮ ಭಾವನೆಗಳನ್ನು ಬದಿಗಿರಿಸಿ ಪರೀಕ್ಷೆ ಬರೆಯಬೇಕು: ಹೆಚ್​ಡಿ ಕುಮಾರಸ್ವಾಮಿ

ಇಂದಿನಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೂ ನನ್ನ ಶುಭ ಹಾರೈಕೆಗಳು. ಶೈಕ್ಷಣಿಕ ಜೀವನದಲ್ಲಿ 10ನೇ ತರಗತಿ ಪರೀಕ್ಷೆ ಅತ್ಯಂತ ಪ್ರಮುಖ ಘಟ್ಟ. ಪ್ರತಿಯೊಬ್ಬರೂ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು ಎಂಬುದು ನನ್ನ ಕಳಕಳಿ ಎಂದು ಟ್ವೀಟ್​ ಮೂಲಕ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಶುಭ ಹಾರೈಸಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಟ್ವೀಟ್ ಮೂಲಕ ವಿದ್ಯಾರ್ಥಿಗಳಿಗೆ ಶುಭ ಹಾರೈಕೆ

ಇಂದು ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೂ ಶುಭ ಹಾರೈಕೆಗಳು. ವಿದ್ಯಾರ್ಥಿಗಳೇ, ಇದೊಂದು ಕಲಿಕೆಯ ಪ್ರಮುಖ ಘಟ್ಟ. ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ. ಯಾವುದೇ ಗೊಂದಲಗಳಿಗೆ ತಲೆಕೆಡಿಸಿಕೊಳ್ಳದೇ ಪರೀಕ್ಷೆ ಎದುರಿಸಿ, ಶುಭವಾಗಲಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಟ್ವೀಟ್ ಮೂಲಕ ವಿದ್ಯಾರ್ಥಿಗಳಿಗೆ ಶುಭ ಕೋರಿದ್ದಾರೆ.

ಇದನ್ನೂ ಓದಿ: ಇಂದಿನಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ: 3444 ಕೇಂದ್ರಗಳಲ್ಲಿ ಸಕಲ ಸಿದ್ಧತೆ

ಹಿಜಾಬ್ ಧರಿಸಿಕೊಂಡು ಬಂದ್ರೆ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಇಲ್ಲ ಎಂಟ್ರಿ; ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆದೇಶ

Published On - 9:02 am, Mon, 28 March 22

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ