AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಳ್ಳು ಸುದ್ದಿ ಹರಡಿದರೆ ಹುಷಾರ್! ಮಧು ಬಂಗಾರಪ್ಪ ಎಚ್ಚರಿಕೆ, ಎಸ್​ಎಸ್ಎಲ್​ಸಿ-ಪಿಯುಸಿ ಪರೀಕ್ಷೆ ವಿಧಾನದ ಕುರಿತು ಸ್ಪಷ್ಟನೆ

ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಮೂರನೇ ಪರೀಕ್ಷೆ ರದ್ದಾಗಿದೆ ಎಂಬ ಸುಳ್ಳು ಸುದ್ದಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ. ಪರೀಕ್ಷಾ ವಿಧಾನದಲ್ಲಿ ಯಾವುದೇ ಬದಲಾವಣೆ ಇಲ್ಲ, ಮೂರು ಪರೀಕ್ಷೆಗಳೂ ನಡೆಯಲಿವೆ ಎಂದು ಅವರು ಖಚಿತಪಡಿಸಿದ್ದಾರೆ. ಗೊಂದಲ ಸೃಷ್ಟಿಸುವ ಮಾಧ್ಯಮಗಳಿಗೆ ಸಚಿವರು ಎಚ್ಚರಿಕೆ ನೀಡಿದ್ದು, ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೊಳಗಾಗಬಾರದು ಎಂದು ಮನವಿ ಮಾಡಿದ್ದಾರೆ.

ಸುಳ್ಳು ಸುದ್ದಿ ಹರಡಿದರೆ ಹುಷಾರ್! ಮಧು ಬಂಗಾರಪ್ಪ ಎಚ್ಚರಿಕೆ, ಎಸ್​ಎಸ್ಎಲ್​ಸಿ-ಪಿಯುಸಿ ಪರೀಕ್ಷೆ ವಿಧಾನದ ಕುರಿತು ಸ್ಪಷ್ಟನೆ
ಎಸ್​ಎಸ್ಎಲ್ಸಿ ಪರೀಕ್ಷೆ ಬಗ್ಗೆ ಸುಳ್ಳು ಸುದ್ದಿ ಹರಡಿದರೆ ಹುಷಾರ್! ಮಧು ಬಂಗಾರಪ್ಪ ಎಚ್ಚರಿಕೆ
Vinay Kashappanavar
| Updated By: ಭಾವನಾ ಹೆಗಡೆ|

Updated on: Dec 03, 2025 | 11:27 AM

Share

ಬೆಂಗಳೂರು, ಡಿಸೆಂಬರ್ 03: ಎಸ್​ಎಸ್ಎಲ್​ಸಿ, ಪಿಯುಸಿ ವಿದ್ಯಾರ್ಥಿಗಳಿಗೆ (SSLC-PUC Exams) ಮೂರನೇ ಪರೀಕ್ಷೆ ನಡೆಸುವುದನ್ನು ಕೈಬಿಡಲಾಗಿದೆ ಎಂಬ ಸುದ್ದಿ ಕೆಲವು ಮಾಧ್ಯಮದಲ್ಲಿ ಪ್ರಕಟಿಸಿದ್ದವು. ಈ ಕುರಿತು ಸ್ಪಷ್ಟನೆ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ,  ಕಳೆದ ವರ್ಷದಂತೆ ಈ ವರ್ಷವೂ SSLC-PUC ಗೆ ಮೂರು ಪರೀಕ್ಷೆ ನಡೆಸುತ್ತೇವೆಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ಈ ಕುರಿತು ಸುಳ್ಳು ಸುದ್ದಿ ಹಬ್ಬಿಸಿ ಗೊಂದಲ ಸೃಷ್ಟಿಸುವವರಿಗೆಎಚ್ಚರಿಕೆ ನೀಡಿದ್ದಾರೆ.

SSLC-PUC ಗೆ ಮೂರು ಪರೀಕ್ಷೆ ಫಿಕ್ಸ್

ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉತ್ತೀರ್ಣ ಅಂಕಗಳನ್ನು ಶೇ.35 ರಿಂದ ಶೇ.33ಕ್ಕೆ ಇಳಿಸಿದ ಶಿಕ್ಷಣ ಇಲಾಖೆ, ಇದೀಗ ಪರೀಕ್ಷಾ ವಿಧಾನದಲ್ಲಿಯೂ ಮಾರ್ಪಾಡು ಮಾಡಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಈ ಸುಳ್ಳು ಸುದ್ದಿಯಿಂದ ಕೆಂಡಾಮಂಡಲವಾಗಿರುವ ಮಧು ಬಂಗಾರಪ್ಪ, ಪರೀಕ್ಷಾ ವಿಧಾನದಲ್ಲಿ ಬದಲಾವಣೆ ಇಲ್ಲ. ವಿದ್ಯಾರ್ಥಿಗಳಿಗೆ ಯಾವುದೇ ಗೊಂದಲ ಬೇಡ. ಈ ವರ್ಷವೂ ಮೂರು ಎಕ್ಸ್ಂ ಮಾಡಲ್ ಇದ್ದೆ ಇರುತ್ತೆ ಎಂದು ಹೇಳಿದ್ದಾರೆ.

ಇದನ್ನೂ ಓದಿ ಇನ್ಮುಂದೆ  SSLC, PUCಯಲ್ಲಿ ಶೇ.33 ಅಂಕ ಬಂದ್ರೂ ಪಾಸ್: ಆಕ್ಷೇಪಣೆ ಸಲ್ಲಿಸಲು ಅವಕಾಶ

ಸುಳ್ಳು ಸುದ್ದಿ ಹಬ್ಬಿಸುವ ಮೀಡಿಯಾ ವಿರುದ್ಧ ಸಚಿವ ಗರಂ

ಸುಳ್ಳು ಸದ್ದಿ ಬರೆಯುವವರ ವಿರುದ್ಧ ಗರಂ ಆದ ಸಚಿವ, ಮೂರು ಪರೀಕ್ಷೆಗಳ ವಿಚಾರದಲ್ಲಿ ಕೆಲವರು ಗೊಂದಲ ಯಾಕೆ ಸೃಷ್ಟಿಸುತ್ತಿದ್ದಾರೆಂದು ತಿಳಿಯುತ್ತಿಲ್ಲ. ಅವರಿಗೆ ತಿಳವಳಿಕೆ ಇರುತ್ತದೆಯೋ ಇಲ್ಲವೋ ಗೊತ್ತಿಲ್ಲ. ಯಾವುದೇ ಪರೀಕ್ಷೆಯ ವಿಧಾನದ ಬದಲಾವಣೆಯನ್ನು ನಮ್ಮ ಇಲಾಖೆಯಿಂದ ಹೊರಡಿಸಬೇಕು. ಮೂರು ಎಕ್ಸಾಂ ಮಾಡಲ್ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಯಾರೋ ಹೇಳಿದರು ಎಂದು ಸುದ್ದಿ ಮಾಡಬೇಡಿ. ಬದಲಾವಣೆ ಇದ್ದರೆ ಚರ್ಚೆ ಮಾಡಬೇಕಾಗುತ್ತದೆ. ಚರ್ಚೆ ಮಾಡಿಯೇ ಬದಲಾವಣೆ ಮಾಡುತ್ತೇವೆ. ಮಾಧ್ಯಮಗಳು ಸುಳ್ಳು ಸುದ್ದಿ ಹಬ್ಬಿಸುವುದನ್ನು ನಿಲ್ಲಿಸಬೇಕು ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ