AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅಪಾರ್ಟ್ಮೆಂಟ್​ನ 12ನೇ ಮಹಡಿಯಿಂದ ಬಿದ್ದು ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಸಾವು

Bengaluru News: ಎಸ್​ಎಸ್​ಎಲ್​ಸಿ ವಿದ್ಯರ್ಥಿನಿಯೋರ್ವಳು ಅಪಾರ್ಟ್ಮೆಂಟ್​ನ 12ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಳ್ಳಂದೂರಿನಲ್ಲಿರುವ ಕ್ಲಾಸಿಕ್ ಅಪಾರ್ಟ್ಮೆಂಟ್​ ಮೇಲಿಂದ ಬಿದ್ದು ಜೆಸ್ಸಿಕಾ ಎನ್ನುವ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಕಾರಣ ಏನು ಎನ್ನುವುದು ನಿಗೂಢವಾಗಿದೆ.

ಬೆಂಗಳೂರು: ಅಪಾರ್ಟ್ಮೆಂಟ್​ನ 12ನೇ ಮಹಡಿಯಿಂದ ಬಿದ್ದು ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಸಾವು
ಜೆಸ್ಸಿಕಾ, ಮೃತ ಬಾಲಕಿ
ಜಗದೀಶ ಬಿ.
| Edited By: |

Updated on:Aug 29, 2023 | 4:19 PM

Share

ಬೆಂಗಳೂರು, (ಆಗಸ್ಟ್, 29): ಅಪಾರ್ಟ್ಮೆಂಟ್​ನ 12ನೇ ಮಹಡಿಯಿಂದ ಬಿದ್ದು ಬಾಲಕಿಯೋರ್ವಳು(Girl) ಮೃತಪಟ್ಟಿರುವ ಘಟನೆ ಬೆಂಗಳೂರಿನ(Bengaluru) ಬೆಳ್ಳಂದೂರಿನ ಕ್ಲಾಸಿಕ್ ಅಪಾರ್ಟ್ಮೆಂಟ್ ನಲ್ಲಿ(apartment) ನಡೆದಿದೆ. ಇಂದು (ಆಗಸ್ಟ್ 29) ಬೆಳಿಗ್ಗೆ 10.30ಕ್ಕೆ ಈ ಘಟನೆ ಸಂಭವಿಸಿದೆ. ಜೆಸ್ಸಿಕಾ (15) ಮೃತ ಬಾಲಕಿ. ಎಸ್​ಎಸ್​ಎಲ್​ಸಿ ವ್ಯಾಸಂಗ ಮಾಡುತ್ತಿದ್ದ ಜೆಸ್ಸಿಕಾ, ತಾವು ವಾಸವಿದ್ದ ಫ್ಲೋರ್​ನ ಮೇಲಿನ ಫ್ಲೋರ್​ಗೆ ಹೋಗಿದ್ದಳು. ಆದ್ರೆ, ಅದೇನಾಯ್ತೋ ಏನು 12ನೇ ಮಹಡಿ ಮೇಲಿಂದ ಕೆಳಗೆ ಬಿದ್ದಿದ್ದಾಳೆ. ಈ ವೇಳೆ ಜೆಸ್ಸಿಕಾಳ ಮನೆಯಲ್ಲಿ ಯಾರು ಇರಲಿಲ್ಲ ಎಂದು ತಿಳಿದುಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಬೆಳ್ಳಂದೂರು ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

ಮೂಲತಃ ತಮಿಳುನಾಡಿನ ಮೂಲದ ಕುಟುಂಬ ಕಳೆದ ಎರಡು ವರ್ಷದಿಂದ ಕ್ಲಾಸಿಕ್ ಅಪಾರ್ಟ್ಮೆಂಟ್ ನಲ್ಲಿ ವಾಸವಿತ್ತು. ಜೆಸ್ಸಿಕಾಳ ತಂದೆ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತಿದ್ದುಮ ತಂದೆ ಸಹ ಉದ್ಯೋಗಿಯಾಗಿದ್ದಾರೆ. ಇನ್ನು 10ನೇ ತರಗತಿ ವ್ಯಸಾಂಗ ಮಾಡುತ್ತಿದ್ದ ಜೆಸ್ಸಿಕಾ, ಮಾನಸಿಕವಾಗಿ ನೊಂದಿದ್ದಳು ಎನ್ನಲಾಗಿದ್ದು, ಇದರಿಂದ ಇತ್ತಿಚೆಗೆ ಶಾಲೆಗೂ ಸಹ ಸರಿಯಾಗಿ ಹೊಗುತ್ತಿರಲಿಲ್ಲವಂತೆ. ಕಳೆದ ಮೂರು ತಿಂಗಳಲ್ಲಿ 6 ದಿನ ಮಾತ್ರ ತರಗತಿಗೆ ಹೋಗಿದ್ದಳಂತೆ. ಈ ಹಿನ್ನೆಲೆಯಲ್ಲಿ ಬಾಲಕಿ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ನಿಂದ ಬಿದ್ದು ಮಹಿಳೆ ಸಾವು

ಈ ಪ್ರಕರಣಕ್ಕೆ ವೈಟ್ ಫೀಲ್ಡ್ ಡಿಸಿಪಿ ಹೇಳಿದ್ದಿಷ್ಟು

12ನೇ ಮಹಡಿಯಿಂದ ಬಿದ್ದು ಬಾಲಕಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಪ್ರತಿಕ್ರಿಯಿಸಿದ್ದು, 15 ವರ್ಷದ ಹುಡುಗಿ ಜೆಸ್ಸಿಕಾ ಎನ್ನುವ ಬಾಲಕಿ 12ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ಕ್ಲಾಸಿಕ್ ಅಪಾರ್ಟ್‌ಮೆಂಟ್ ನಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆಗೆ ಕಾರಣ ಏನು ಅಂತಾ ಗೊತ್ತಾಗಿಲ್ಲ. ತಂದೆ ಸಾಫ್ಟ್​ ವೇರ್ ಇಂಜಿನಿಯರ್. ತಾಯಿ ಖಾಸಗಿ ಶಾಲೆಯಲ್ಲಿ ಟೀಚರ್ ಆಗಿದ್ದಾರೆ. ಇಂದು ಬೆಳಗ್ಗೆ ಬಾಲಕಿ ಶಾಲೆಗೆ ಹೋಗಿ ಪುನಃ ವಾಪಸ್ ಬಂದಿದ್ದಾರೆ. ನಂತರ ಟೀಚರ್ ತಾಯಿಗೆ ಕರೆ ಮಾಡಿ ಮಗಳು ಶಾಲೆಗೆ ಬಂದಿಲ್ಲ ಎಂದು ಹೇಳಿದ್ದಾರೆ. ನಂತರ ಪೋಷಕರು ಪರಿಶೀಲನೆ ಮಾಡಿದಾಗ ಜೆಸ್ಸಿಕಾ 12ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಪ್ರಾಥಮಿಕವಾಗಿ ಬಾಲಕಿ ಶಾಲೆಗೆ ಹೋಗಿ ಕ್ಲಾಸ್ ಅಟೆಂಡ್ ಮಾಡದೆ ವಾಪಸ್ ಬರುತ್ತಿದ್ದಳು ಎಂದು ತಿಳಿದುಬಂದಿದೆ. ಅದ್ರೆ ಘಟನೆ ನಿಖರ ಕಾರಣ ಏನು ಎನ್ನುವುದು ಇನ್ನೂ ಗೊತ್ತಾಗಿಲ್ಲ‌. ಈ ಬಗ್ಗೆ ಬೆಳ್ಳಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

ಬೆಂಗಳೂರಿನ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:43 pm, Tue, 29 August 23

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ